ತುರುವೇಕೆರೆ | ಜನರ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ : ಶಾಸಕ ಎಂ. ಟಿ. ಕೃಷ್ಣಪ್ಪ ಆರೋಪ

Date:

Advertisements

 ರಾಜ್ಯದ ಜನತೆ ನೀಡುವ ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬು ಸೇರುತ್ತಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಆರೋಪ ಮಾಡಿದ್ದಾರೆ.

 ತುರುವೇಕೆರೆಯಲ್ಲಿ ಪತ್ರಕಕರ್ತರೊಂದಿಗೆ ಮಾತನಾಡಿದ ಅವರು,  ಕಾಂಗ್ರೆಸ್‌ ಪಕ್ಷ ಚುನಾವಣೆಗೆ ಮೊದಲು ತಾನು ಅಧಿಕಾರಕ್ಕೆ ಬರಲು 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದಾಗಿ ಮತದಾರರಿಗೆ ಆಮಿಷವೊಡ್ಡಿ ಅಧಿಕಾರಕ್ಕೆ ಬಂದಿತು. ಈಗ ರಾಜ್ಯದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ರಾಜ್ಯಾದ್ಯಂತ ಸರ್ಕಾರ ತನ್ನ ಕಾರ್ಯಕರ್ತರನ್ನು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಪದಾದಿಕಾರಿಗಳ ನೇಮಕ ಮಾಡಿದೆ.

 ಈ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಮಾಸಿಕ ಗೌರವ ಧನ ನೀಡಲಾಗುತ್ತಿದೆ. ಇದು ಸಾರ್ವಜನಿಕರ ಹಣದ ದುರ್ಬಳಕೆಯಾಗುತ್ತಿದೆ ಎಂದು ಕೃಷ್ಣಪ್ಪ ಕಿಡಿಕಾರಿದರು.

Advertisements

 ಸರ್ಕಾರ ಜಾರಿಗೆ ತರುವ ಎಲ್ಲಾ ಯೋಜನೆಗಳನ್ನು ಜಾರಿಗೆ ತರಲು ಸರ್ಕಾರಿ ಅಧಿಕಾರಿಗಳು ಇದ್ದಾರೆ. ಅದಕ್ಕೆಂದೇ ಸರ್ಕಾರಗಳು ಸಂಬಳ ನೀಡುತ್ತಿದೆ. ಅದರ ಮಧ್ಯೆಯೂ ತಮ್ಮ ಪಕ್ಷದ ಕಾರ್ಯಕರ್ತರ ಜೇಬು ತುಂಬಿಸಲು ಅನುಷ್ಠಾನ ಸಮಿತಿ ಮಾಡಿರುವುದು ಕಾನೂನಾತ್ಮಕವಾಗಿ ತಪ್ಪು. ಸಾರ್ವಜನಿಕರ ಹಣ ಅನ್ಯಥಾ ವ್ಯಯ ಮಾಡುವುದು ಅಕ್ಷಮ್ಯ ಅಪರಾಧ. ಹಾಗಾಗಿ ಈ ಪ್ರಕರಣವನ್ನು ಸಿಬಿಐ ಅಥವಾ ಇಡಿ ಇಲಾಖೆಯವರು ಸ್ವಯಂ ಪ್ರೇರಣೆಯಿಂದ ದಾಖಲಿಸಿಕೊಂಡು ತನಿಖೆ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಆಗ್ರಹಿಸಿದರು.

  ಇತ್ತೀಚೆಗೆ ಮೈಕ್ರೋ ಫೈನಾನ್ಸ್‌ ಗಳ ಹಾವಳಿ ಹೆಚ್ಚಾಗಿದೆ. ಸಾರ್ವಜನಿಕರಿಗೆ ಹಣದ ಆಮಿಷವೊಡ್ಡಿ ಅಧಿಕ ಬಡ್ಡಿ ವಸೂಲು ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದಕ್ಕೆ ಸರ್ಕಾರ ಕಡಿವಾಣ ಹಾಕಬೇಕು. ತಾಲೂಕಿನಲ್ಲಿ ಯಾವುದೇ ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾರ್ವಜನಿಕರಿಗೆ ಕಿರುಕುಳ ನೀಡಿದರೆ ಅಂತಹ ಸಂಸ್ಥೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಾವು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು.  

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡರಾದ ವೆಂಕಟೇಶ್‌ ಕೃಷ್ಣಪ್ಪ, ಪಕ್ಷದ ವಕ್ತಾರ ವೆಂಕಟಾಪುರ ಯೋಗೀಶ್‌, ಪರಮೇಶ್‌, ಮಾದಿಹಳ್ಳಿ ಕಾಂತರಾಜ್‌, ಮುನಿಯೂರು ರಂಗಸ್ವಾಮಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕುಮಾರ್‌ ಉಪಸ್ಥಿತರಿದ್ದರು.

ವರದಿ – ಎಸ್. ನಾಗಭೂಷಣ್ ತುರುವೇಕೆರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X