ತುರುವೇಕೆರೆ |  ತೊರೆಮಾವಿನಹಳ್ಳಿ – ಆನೇಕೆರೆ ರಸ್ತೆ ಅಧ್ವಾನ : ಸಂಚಾರಕ್ಕೆ ಸಾರ್ವಜನಿಕರ ಪರದಾಟ

Date:

Advertisements

 ತುರುವೇಕೆರೆ  ತಾಲೂಕಿನ ತೊರೆಮಾವಿನಹಳ್ಳಿ ಗೇಟ್ ನಿಂದ ಆನೇಕೆರೆಯವರೆಗಿನ ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯ ಉದ್ದಕ್ಕೂ ದೊಡ್ಡ ಪ್ರಮಾಣದಲ್ಲಿ ಗುಂಡಿಗಳು ಬಿದ್ದಿವೆ. ಓಡಾಡಲೂ ಆಗದ ಸ್ಥಿತಿ ನಿರ್ಮಾಣವಾಗಿದೆ. ಮಳೆ ಬಂದರೆ ಎಲ್ಲರಿಗೂ ಖುಷಿ. ಆದರೆ ಈ ಭಾಗದಲ್ಲಿ ಓಡಾಡುವ ಮಂದಿ ಜೀವವನ್ನು ಕೈಲಿ ಹಿಡಿದು ಓಡಾಡುವ ಪರಿಸ್ಥಿತಿ ಇದೆ. ದ್ವಿಚಕ್ರ ವಾಹನದ ಸವಾರರಂತೂ ಈ ರಸ್ತೆಯ ಗಡಿ ದಾಟಿದರೆ ಸಾವನ್ನೇ ಗೆದ್ದು ಬಂದವದಂತೆ ಸಂತಸಪಡುತ್ತಾರೆ. 

1000632901

 ರಸ್ತೆ ಹಾಳಾಗಿರುವ ಸಂಬಂಧ ಸಾಕಷ್ಟು ಸಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ತಿಳಿಸಿದರೂ ಸಹ ಯಾವುದೇ ಪ್ರಯೋಜವಾಗಿಲ್ಲ. ರಾತ್ರಿ ವೇಳೆಯಂತೂ ಸಂಚರಿಸುವುದು ಅಸಾಧ್ಯದ ಮಾತಾಗಿದೆ. ಸಾಕಷ್ಟು ಅನಾಹುತಗಳು ಸಂಭವಿಸುತ್ತಲೇ ಇದೆ. ಆದರೂ ಸಹ ಅಧಿಕಾರಿಗಳು ದಿವ್ಯ ಮೌನ ವಹಿಸಿದ್ದಾರೆಂದು ತೊರೆಮಾವಿನಹಳ್ಳಿಯ ನಿವಾಸಿ ಡಾ.ಚಂದ್ರಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. 

ಮಳೆಗಾಲ ಕಳೆದ ನಂತರವಾದರೂ ರಸ್ತೆಯನ್ನು ದುರಸ್ಥಿಪಡಿಸದಿದ್ದಲ್ಲಿ ತೊರೆಮಾವಿನಹಳ್ಳಿ, ತೊರೆಮಾವಿನಹಳ್ಳಿ ಮಾಳೆ, ಆನೇಕೆರೆಯ ಗ್ರಾಮಸ್ಥರೊಂದಿಗೆ ದಾರಿಯ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಡಾ.ಚಂದ್ರಯ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

Advertisements

ವರದಿ – ಎಸ್.  ನಾಗಭೂಷಣ್ 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X