ತುರುವೇಕೆರೆ | ಬಸ್‌ ಮತ್ತು ಟಾಟಾ ಏಸ್ ನಡುವೆ ಡಿಕ್ಕಿ : ತಪ್ಪಿದ ಭಾರಿ ಅನಾಹುತ

Date:

Advertisements

ಕೆ ಎಸ್‌ ಆರ್‌ ಟಿ ಸಿ ಬಸ್‌ ಮತ್ತು ಟಾಟಾ ಏಸಿ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಠವಶಾತ್‌ ಭಾರಿ ಅನಾಹುತ ತಪ್ಪಿದೆ.

ಬೆಳಗ್ಗೆ 6 ಗಂಟೆಯ ವೇಳೆಗೆ ತಿಪಟೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಕೆ ಎಸ್‌ ಆರ್‌ ಟಿ ಸಿ ಬಸ್‌ ಮತ್ತು ತಿಪಟೂರು ಕಡೆಯಿಂದ ಪಟ್ಟಣಕ್ಕೆ ಬರುತ್ತಿದ್ದ ಹಾಲಿನ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ಹಾಲಿನ ವಾಹನ ತುರ್ತು ಸೇವೆಗಾಗಿ ವೇಗವಾಗಿ ಬರುತ್ತಿತ್ತು. ಅತ್ತ ಕೆ ಎಸ್‌ ಆರ್‌ ಟಿ ಸಿ ಬಸ್‌ ದಬ್ಬೇಘಟ್ಟ ರಸ್ತೆಯ ವೃತ್ತದಲ್ಲಿ ಬೆಂಗಳೂರು ಮಾರ್ಗದತ್ತ ಮುಖ ಮಾಡುತ್ತಿತ್ತು. ಆ ವೇಳೆ ಅಪಘಾತ ಸಂಭವಿಸಿದೆ. 

 ಬಸ್‌ ಮತ್ತು ಟಾಟಾ ಏಸಿ ನಡುವೆ ನಡೆದ ಡಿಕ್ಕಿಯ ರಭಸಕ್ಕೆ ಟಾಟಾ ಏಸಿ ರಸ್ತೆಯ ಪಕ್ಕದಲ್ಲಿಟ್ಟಿದ್ದ ಬೃಹತ್‌ ಗಾತ್ರದ ವಿದ್ಯುತ್‌ ಕಂಬಗಳನ್ನು ಏರಿ ರಾಘವೇಂದ್ರ ಭವನದ ಬಾಗಿಲಿನ ಮುಂದೆ ನಿಂತಿದೆ. ವಾಸ್ತವವಾಗಿ ಪ್ರತಿದಿನ ಹೋಟೆಲ್‌ ಮುಂಭಾಗ ಹತ್ತಾರು ಮಂದಿ ಕಾಫಿ ತಿಂಡಿಗಾಗಿ ನಿಂತಿರುತ್ತಿದ್ದರು. ಅದೃಷ್ಠವಶಾತ್ ಇಂದು ಯಾರೂ ನಿಂತಿರಲಿಲ್ಲ ಎಂದು ತಿಳಿದುಬಂದಿದೆ. ಆದರೆ ಟಾಟಾ ಏಸಿ ಚಾಲಕನ ಕಾಲು ಮುರಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisements

 ತಿಪಟೂರು ಮಾರ್ಗ, ದಬ್ಬೇಘಟ್ಟ ಸರ್ಕಲ್‌ ನಲ್ಲಿ ಹೆಚ್ಚು ಜನ ಸಂದಣಿ ಮತ್ತು ವಾಹನ ಸಂಚಾರ ಇದೆ. ರಾಘವೇಂದ್ರ ಭವನದ ಆವರಣದಲ್ಲಿ ಪಾದಚಾರಿಗಳು ಮತ್ತು ವಾಹನಗಳಿಗೆಂದು ನಿಲ್ಧಾಣ ಮಾಡಲಾಗಿದೆ. ಅದಕ್ಕಾಗಿ ಕಬ್ಬಿಣದ ಬೇಲಿಗಳನ್ನೂ ನಿರ್ಮಿಸಲಾಗಿದೆ. ಅದರೆ ಹಲವಾರು ಮಂದಿ ದ್ವಿಚಕ್ರವಾಹನಗಳು, ಕಾರು, ಇನ್ನಿತರೆ ದೊಡ್ಡ ಗಾತ್ರದ ವಾಹನಗಳನ್ನು ಅಲ್ಲದೇ ಹಲವಾರು ಮಾರಾಟಗಾರರು ತಮ್ಮ ವಾಹನಗಳನ್ನು ರಸ್ತೆಯ ಪಕ್ಕದಲ್ಲೇ ನಿಲ್ಲಿಸುತ್ತಿದ್ದಾರೆ. ಇದರಿಂದಾಗಿ ದಬ್ಬೇಘಟ್ಟ ವೃತ್ತದಿಂದ ಬೆಂಗಳೂರು ರಸ್ತೆಗೆ ತೆರಳುವ ವಾಹನಗಳನ್ನು ತಿರುಗಿಸಲು ತೊಂದರೆಯಾಗುತ್ತಿದೆ. ಇದರಿಂದಾಗಿ ದಿನೇ ದಿನೇ ಅಪಘಾತಗಳು ನಡೆಯುತ್ತಲೇ ಇರುತ್ತವೆ. ಇದನ್ನು ತಪ್ಪಿಸುವ ಸಲುವಾಗಿ ಯಾವುದೇ ವಾಹನಗಳನ್ನು ನಿಲ್ಲಿಸದಂತೆ ಕಟ್ಟಾಜ್ಞೆ ಹೊರಡಿಸಬೇಕಿದೆ. ಆಗಷ್ಠೇ ಅಪಘಾತಗಳು ನಿಯಂತ್ರಣಕ್ಕೆ ಬರುತ್ತವೆ ಎಂಬುದು ಸಾರ್ವಜನಿಕರ ಅನಿಸಿಕೆಯಾಗಿದೆ. ಈ ಅಪಘಾತ ಪ್ರಕರಣದಲ್ಲಿ ಎರಡೂ ವಾಹನಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X