ಚಿಕ್ಕಮಗಳೂರು l  ಕಾಡುಕೋಣ ದಾಳಿ: ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ

Date:

Advertisements

ಕಾಡುಕೋಣ ದಾಳಿಯಿಂದ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಹೋಬಳಿ ಸಮೀಪ ಖಾಂಡ್ಯದ ಬಿದರೆ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರುವ ಬಿದರೆ ಗ್ರಾಮದ ತೋಟವೊಂದರಲ್ಲಿ ಕೂಲಿ ಕಾರ್ಮಿಕರು ಕೆಲಸ ಮಾಡುವಾಗ ಏಕಾಏಕಿ‌ ಕಾಡುಕೋಣ ಮಧ್ಯಾಹ್ನ 12:30ರ ವೇಳೆಯಲ್ಲಿ ದಾಳಿ ನಡೆಸಿದೆ.

ಅಸ್ಸಾಂ ಮೂಲದ ಓರ್ವ ವ್ಯಕ್ತಿ ಹಾಗೂ ಸ್ಥಳೀಯ ನಿವಾಸಿ ರವಿ ಪೂಜಾರಿ (60) ವ್ಯಕ್ತಿಯ ಮೇಲೆ ಕಾಡುಕೋಣ ದಾಳಿ ಮಾಡಿದೆ. ದಾಳಿ ಮಾಡಿದ ವೇಳೆ ಕಾರ್ಮಿಕರು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ.

Advertisements

ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ದಾಳಿಯಿಂದ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ಮುತ್ತೊಡಿ ಅರಣ್ಯ ಇಲಾಖೆಯ ರೇಂಜರ್ ಈ ದಿನ.ಕಾಮ್ಗೆ ಮಾಹಿತಿ ನೀಡಿದ್ದಾರೆ.

ಅಸ್ಸಾಂ ಮೂಲದ ವ್ಯಕ್ತಿ ಹಾಗೂ ರವಿ ಪೂಜಾರಿಯವರು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಪಡೆದಿದ್ದಾರೆ. ಅಸ್ಸಾಂ ಮೂಲದವರು ಪ್ರಥಮ ಚಿಕಿತ್ಸೆ ಪಡೆದು ರಾತ್ರಿ ಮನೆಗೆ ಮರಳಿದ್ದಾರೆ. ಗಂಭೀರ ಗಾಯವಾಗಿರುವ ರವಿ ಪೂಜಾರಿ ಅವರು ಹೆಚ್ಚಿನ ಚಿಕಿತ್ಸೆ ಪಡೆಯಲು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಲಯ ಅರಣ್ಯ ಇಲಾಖೆ ಅಧಿಕಾರಿ ಈ ದಿನ.ಕಾಮ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸಾಲು-ಸಾಲು ರಜೆ ಹಿನ್ನೆಲೆ: ಮುಳ್ಳಯ್ಯನಗಿರಿಯಲ್ಲಿ ಭಾರೀ ಟ್ರಾಫಿಕ್ ಜಾಮ್!

ಕಾಡುಕೋಣ ದಾಳಿ ಮಾಡಿರುವುದರಿಂದ ಸರ್ಕಾರದಿಂದ ಸಿಗುವ ಪರಿಹಾರವನ್ನು ನೀಡಲು ಶ್ರಮಿಸುವುದಾಗಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಇದೇ ವೇಳೆ ಭರವಸೆ ನೀಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X