ತುಮಕೂರು | ನಿಂತಿದ್ದ ಬಸ್‌ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ದುರ್ಮರಣ

Date:

  • ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸ ಹೊರಟಿದ್ದ ಕುಟುಂಬ
  • ನಾಲ್ವರಿಗೆ ಗಂಭೀರ ಗಾಯ; ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ.

ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ ಚಾಲಕ ವೀರೇಶ್ (30) ಮತ್ತು ಶಶಿಕಲಾ(69) ಮೃತರು ಎಂದು ಗುರುತಿಸಲಾಗಿದೆ.

ಶಶಿಕಲಾ ಮತ್ತು ಅವರ ಕುಟುಂಬದ 11 ಮಂದಿ ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸಕ್ಕೆ ಬುಧವಾರ ರಾತ್ರಿ 10 ಗಂಟೆಗೆ ಹೊರಟ್ಟಿದ್ದರು. ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಹೊಗಬೇಕಾದರೆ ಗುರುವಾರ ಮುಂಜಾನೆ ಡಿ ಹೊಸಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ, ರಸ್ತೆ ಬದಿಯಲ್ಲಿ ನಿಂತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಶಶಿಕಲಾ ಕೊನೆಯುಸಿರೆಳೆದಿದ್ದಾರೆ. ಇನ್ನು ಘಟನೆಯಲ್ಲಿ ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷಾ ಗಂಭೀರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...