ತುಮಕೂರು | ನಿಂತಿದ್ದ ಬಸ್‌ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ದುರ್ಮರಣ

Date:

  • ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸ ಹೊರಟಿದ್ದ ಕುಟುಂಬ
  • ನಾಲ್ವರಿಗೆ ಗಂಭೀರ ಗಾಯ; ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟೆಪೋ ಟ್ರಾವಲ್ಸ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಡಿ ಹೊಸಹಳ್ಳಿ ಗ್ರಾಮದ ಬಳಿ (ರಾಜ್ಯ ಹೆದ್ದಾರಿ 33) ನಡೆದಿದೆ.

- Advertisement -

ರಾಯಚೂರು ಜಿಲ್ಲೆ ಸಿಂಧನೂರು ನಿವಾಸಿಗಳಾದ ಟಿಟಿ ಚಾಲಕ ವೀರೇಶ್ (30) ಮತ್ತು ಶಶಿಕಲಾ(69) ಮೃತರು ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಶಶಿಕಲಾ ಮತ್ತು ಅವರ ಕುಟುಂಬದ 11 ಮಂದಿ ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸಕ್ಕೆ ಬುಧವಾರ ರಾತ್ರಿ 10 ಗಂಟೆಗೆ ಹೊರಟ್ಟಿದ್ದರು. ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ಹೊಗಬೇಕಾದರೆ ಗುರುವಾರ ಮುಂಜಾನೆ ಡಿ ಹೊಸಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ, ರಸ್ತೆ ಬದಿಯಲ್ಲಿ ನಿಂತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಶಶಿಕಲಾ ಕೊನೆಯುಸಿರೆಳೆದಿದ್ದಾರೆ. ಇನ್ನು ಘಟನೆಯಲ್ಲಿ ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ ಹಾಗೂ ಪ್ರತೀಕ್ಷಾ ಗಂಭೀರ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತ ಸ್ಥಳಕ್ಕೆ ಹುಲಿಯೂರು ದುರ್ಗ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್‌ ಕುಮಾರಸ್ವಾಮಿ ರಾಜೀನಾಮೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...