ಉಡುಪಿ | 108 ಆರೋಗ್ಯ ಕವಚ ಸಿಬ್ಬಂದಿಗೆ ಬಂದಿಲ್ಲ ತಿಂಗಳ ವೇತನ

Date:

Advertisements

108 ಆರೋಗ್ಯ ಕವಚ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ 3ತಿಂಗಳಿಂದ ವೇತನ ಪಾವತಿಯಾಗದೇ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ನೌಕರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಕೊಟ್ರಪ್ಪ ಜಿ ಹೇಳಿದರು.

ಉಡುಪಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಇದೇ ರೀತಿ ಸುಮಾರು 4-5 ವರ್ಷದಿಂದಲೂ ಸಹ ವೇತನ ವಿಚಾರವಾಗಿ 108 ಸಿಬ್ಬಂದಿ ತೊಂದರೆ ಅನುಭವಿಸುತ್ತಾ ಬಂದಿದ್ದೇವೆ. ಸರ್ಕಾರ ಮತ್ತು ಜಿ.ವಿ.ಕೆ ಸಂಸ್ಥೆಯ ಒಡಂಬಡಿಕೆಯ ಪ್ರಕಾರ ವಾರ್ಷಿಕ ವೇತನ ಹೆಚ್ಚಳ ಆಗಬೇಕಾಗಿದ್ದು, 2023ರ ಶೇ.15 ರಷ್ಟು ವೇತನ ಪರಿಷ್ಕರಣೆಯೂ ಸಹ ಆಗಿಲ್ಲ ಎಂದು ಅವರು ಆರೋಪಿಸಿದರು.

ಹಾಗೇ ಇತ್ತಿಚಿನ ದಿನಗಳಲ್ಲಿ ಮಾನ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಕನಿಷ್ಠ ವೇತನ ಸಹ ಜಾರಿ ಮಾಡಿದ್ದು, 108 ಸಿಬ್ಬಂದಿಗೆ ವೇತನವನ್ನು 36,008 ರೂ.ಗಳಿಗೆ ವೇತನ ನಿಗಧಿಮಾಡಿದ್ದು, ಈ ವೇತನವನ್ನು ಸುಮಾರು 6 ತಿಂಗಳುಗಳ ಕಾಲ ನೀಡಿ, ತದ ನಂತರ ಏಕಾಏಕಿ 6000 ರೂ.ಗಳನ್ನು ಕಡಿತ ಮಾಡಿ 30,000 ರೂ.ಗಳನ್ನು ನೀಡಿರುತ್ತಾರೆ ಎಂದು ದೂರಿದರು.

Advertisements

ಮತ್ತೊಮ್ಮೆ ಪ್ರಸ್ತುತ ವೇತನದಲ್ಲಿ ಕಡಿಮೆಯಾಗುವಂತ ಮಾಹಿತಿಯು ಸರ್ಕಾರದ ಅಧಿಕಾರಿಗಳ ಮಟ್ಟದಲ್ಲಿ ಕೇಳಿಬರುತ್ತಿದ್ದು, 108 ಆಂಬ್ಯುಲೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವಾಟ್ಸ್ಆಪ್ ಗ್ರೂಪ್‌ನಲ್ಲಿ ವದಂತಿಯ ಸಂದೇಶಗಳು ಹರಿದಾಡುತ್ತಿವೆ. ಹಾಗಾಗಿ, ಆರೋಗ್ಯ ಸಚಿವರು ಈ ಮೇಲಿನ ಎಲ್ಲಾ ಅಂಶಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಬಾಕಿ ಇರುವ 4 ತಿಂಗಳ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಿಸಿ ಎಂದು ಒತ್ತಾಯಿಸಿದರು.

108 ಸಿಬ್ಬಂದಿ ದಿನನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸಭಾ ನಡವಳಿಯನ್ನು ಮಾಡಿಕೊಟ್ಟು ಮುಂದಿನ ದಿನಗಳಲ್ಲಿ ಇದೇ ರೀತಿಯ ಸಮಸ್ಯೆಗಳು ಬಾರದ ರೀತಿಯಲ್ಲಿ ಕ್ರಮ ಕೈಗೊಂಡು, ನಮ್ಮ ಸಿಬ್ಬಂದಿಗೆ ಇನ್ನೂ ಉತ್ತಮ ರೀತಿಯಲ್ಲಿ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಎಲ್ಲಾ ಜಿಲ್ಲಾ ಸಿಬ್ಬಂದಿಗಳ ಪರವಾಗಿ ಕೇಳಿಕೊಳ್ಳುತ್ತೇವೆ ಎಂದರು.

ಈ ಮೇಲಿನ ಎಲ್ಲಾ ಅಂಶಗಳನ್ನು ಮುಂದಿನ 10 ದಿನಗಳೊಳಗಾಗಿ ಸರಿಪಡಿಸಿ ಕೊಡದ ಪಕ್ಷದಲ್ಲಿ ನಾವು ಯಾವುದೇ ರೀತಿಯ ಬೇರೆ ದಾರಿ ಕಾಣದೇ ಅಸಹಾಯಕರಾಗಿ ಮುಷ್ಕರ ಕೈಗೊಳ್ಳುತ್ತೇವೆ. ಈ ಸಂದರ್ಭದಲ್ಲಿ ಸಾರ್ವಜನಿಕ ಸೇವೆಗೆ ಅನಾನುಕೂಲತೆಗಳು ಉಂಟಾದಲ್ಲಿ ನೇರವಾಗಿ ಸಂಬಂಧಿಸಿದ ಸಂಸ್ಥೆಯೇ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯರಾದ ಕಿಶೋರ್ ಕುಮಾರ್, ಶಾಂತ ಗೌಡ, ವಿಶ್ವನಾಥ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X