ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್‌ ಆದೇಶ

Date:

Advertisements

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇರುವ ಬ್ರಹ್ವಾವರದ ಏಕೈಕ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕೆಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ಹೆಚ್ಚುವರಿ ಸಿವಿಲ್ ನ್ಯಾಯಾಲಯ ದಾಖಲು ಮಾಡಿಕೊಂಡಿದೆ.

ಅರ್ಜಿದಾರರ ಪರವಾಗಿ ವಕೀಲ ಆರ್. ಜಗನ್ನಾಥ್ ವಾದ ಮಂಡಿಸಿದ್ದು, ವಾದ ಆಲಿಸಿದ ನ್ಯಾಯಾಧೀಶರು, “ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸಬೇಕು” ಎಂದು ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸರಿಗೆ ಆದೇಶಿಸಿದ್ದಾರೆ.

ಗುಜರಿ ಮಾರಾಟದಲ್ಲಿನ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾರ್ಖಾನೆಯ ಆಡಳಿತ ಮಂಡಳಿ ಗುಜರಿ ಸರಕುಗಳನ್ನು 21 ಕೋಟಿ ರೂಪಾಯಿಗೆ ಮಾರಿ, ಅದರಲ್ಲಿ 14 ಕೋಟಿಗಿಂತಲೂ ಹೆಚ್ಚು ಹಣವನ್ನು ಸರ್ಕಾರ ಮತ್ತು ರೈತರಿಗೆ ವಂಚನೆ ಮಾಡಿದೆ. ಇದರಲ್ಲಿ ಬಿಜೆಪಿಯ ಕೈವಾಡವೂ ಇದೆ ಎಂದು ಆರೋಪಿಸಿತ್ತು.

Advertisements

ಗುಜರಿ ಮಾರಾಟದ ಪ್ರಕ್ರಿಯೆಯನ್ನು ಶಾಸನಬದ್ಧವಾಗಿ ಇ-ಪ್ರಾಕ್ಯುರ್‌ಮೆಂಟ್ ಟೆಂಡರ್ ಮುಖೇನ ಮಾಡಬೇಕಿತ್ತು. ಅಥವಾ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸೆಂಟ್ರಲ್ ಸ್ಕ್ಯಾಪ್ ಬೋರ್ಡ್ ಮುಖಾಂತರ ವಿಲೇವಾರಿ ಮಾಡಬೇಕಾಗಿತ್ತು. ಆದರೆ, ಆಡಳಿತ ಮಂಡಳಿಯವರು ಕಾನೂನುಗಳನ್ನು ಗಾಳಿಗೆ ತೂರಿ, ಸಂಬಂಧಪಟ್ಟ ಇಲಾಖೆಯ ಅನುಮೋಧನೆ ಪಡೆಯದೇ 4 ಜನರ ತಾಂತ್ರಿಕ ಸಮಿತಿಯನ್ನು ರಚಿಸಿಕೊಂಡು ಅವರಿಗೆ ಬೇಕಾದಂತೆ ಟೆಂಡರ್‌ ಕರೆದಿದ್ದಾರೆ. ಟೆಂಡರ್‌ನಲ್ಲಿ ಅತಿಹೆಚ್ಚು ಬಿಡ್‌ ದರ ನಮೂದಿಸಿದ ನ್ಯೂ ರಾಯಲ್ ಟ್ರೇಡರ್ಸ್‌ ಅವರಿಗೆ ಅನುಕೂಲವಾಗುವಂತೆ ಮತ್ತು ಸಕ್ಕರೆ ಕಾರ್ಖಾನೆಗೆ ವಂಚನೆ ಮಾಡಲು ಪೂರ್ವ ನಿಯೋಜಿತವಾಗಿ ಗುಜರಿಯ ಅಂದಾಜು ಮೌಲ್ಯವನ್ನು ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ?: ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ಆರೋಪ

ಟೆಂಡರ್ ಕಂಡೀಷನ್ ಪ್ರಕಾರ ಅತೀ ಹೆಚ್ಚು ಬಿಡ್ ಸಲ್ಲಿಸಿದ ಗುತ್ತಿಗೆದಾರ ಮೆ. ನ್ಯೂ ರಾಯಲ್ ಟ್ರೇಡರ್ಸ್ ರವರು ಗುಜರಿ ಎತ್ತುವಳಿ ಪ್ರಾರಂಭ ಮಾಡುವ ಮೊದಲು ಮುಂಗಡ ಠೇವಣಿಯಾಗಿ 5 ಕೋಟಿ ರೂಪಾಯಿಗಳ ಬ್ಯಾಂಕ್ ಗ್ಯಾರಂಟಿಯನ್ನು ರಾಷ್ಟ್ರೀಕೃತ ಬ್ಯಾಂಕಿನಿಂದ ಪಡೆದು ಕಾರ್ಖಾನೆಗೆ ಸಲ್ಲಿಸಬೇಕಾಗಿತ್ತು. ಆದರೆ, ಆಡಳಿತ ಮಂಡಳಿಯವರು ಹಾಗೂ ತಾಂತ್ರಿಕ ಸಮಿತಿಯವರು ಜಂಟಿಯಾಗಿ ಟೆಂಡರ್ ಕಂಡೀಷನ್‌ಗೆ ವಿರುದ್ಧವಾಗಿ ಟೆಂಡರ್‌ ಪಡೆದ ಗುತ್ತಿಗೆದಾರರಿಗೆ 5 ಕೋಟಿ ರೂಪಾಯಿಗಳ ಬ್ಯಾಂಕ್ ಗ್ಯಾರಂಟಿಯನ್ನು ಕೈ ಬಿಡಲಾಗಿರುವುದು ಮಹಾ ವಂಚನೆಯ ಮುಂದುವರಿದ ಭಾಗವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X