ಉಡುಪಿ | ಎರಡು ವರ್ಷಗಳ ನಂತರ ಕುಟುಂಬ ಸೇರಿದ ಬಿಹಾರ ಮೂಲದ ಮಹಿಳೆ

Date:

Advertisements

ಕಳೆದ 2 ವರ್ಷಗಳ ಹಿಂದೆ ಮಾನಸಿಕ ಅಸ್ವಸ್ಥ ಬಿಹಾರದ ಮಹಿಳೆ ತನ್ನ ಕುಟುಂಬ ತೊರೆದಿದ್ದು ಬೀದಿಪಾಲಾಗಿ ಇದೀಗ ಮರಳಿ ಕುಟುಂಬಕ್ಕೆ ಸೇರಿದಾಗ ಕುಟುಂಬದ ಸಂತೋಷದ ಆಕ್ರಂದನ ಮುಗಿಲು ಮುಟಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಕಳೆದ ವರ್ಷ ಉಡುಪಿ ನಗರದ ಬೀದಿಯಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮಕ್ಕೆ ದಾಖಲಿಸಿದ್ದು ಚಿಕಿತ್ಸೆಗೆ ಸ್ಪಂದಿಸಿ ತನ್ನ ಊರಾದ ಬಿಹಾರದ ಮಾಹಿತಿ ನೀಡಿ ಕುಟುಂಬ ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಿಳೆ ರಮಾದೇವಿ ಆಶ್ರಮದ ಚಿಕಿತ್ಸೆಯ ಜೊತೆಗೆ ದೈನಂದಿನ ಚಟುವಟಿಕೆಗಳಾದ ಯೋಗ ಧ್ಯಾನ ಕೃಷಿ ಚಟುವಟಿಕೆ, ಸಾಂಸ್ಕೃತಿಕ ಚಟುವಟಿಕೆ, ಆಪ್ತ ಸಮಾಲೋಚನೆಗೆ ಸ್ಪಂದಿಸಿ ಸಹಜ ಸ್ಥಿತಿಗೆ ಬಂದು ತನ್ನ ಕುಟುಂಬದ ವಿಳಾಸ ಹಿನ್ನೆಲೆಯ ವಿವರಗಳನ್ನು ನೀಡಿದ್ದರು. ಈ ಮಾಹಿತಿಯ ಮೇರೆಗೆ ಮುಂಬೈನ ಶ್ರದ್ಧಾ ಪುನರ್ವಸತಿ ಕೇಂದ್ರ ಕುಟುಂಬಕ್ಕೆ ಹಸ್ತಾಂತರಿಸುವಲ್ಲಿ ಯಶಸ್ವಿಯಾದರು. ರಮಾದೇವಿಯನ್ನು ಕುಟುಂಬ ಸೇರಿಸುವ ಸಮಯ ಮಕ್ಕಳು ಹಾಗೂ ಕುಟುಂಬಸ್ಥರು ಭಾವೊದ್ವೇಗದಿಂದ ವಿಸ್ಮಿತರಾಗಿ ಸಂತೋಷದಿಂದ ಕೂಗಿ ಪ್ರೀತಿಯಿಂದ ಆಲಂಗಿಸಿದ ದೃಶ್ಯ ನಿಜವಾಗಿಯೂ ಬಹಳ ಭಾವುಕತೆಯಿಂದ ಕೂಡಿತ್ತು. ಆರೈಕೆ ಹಾಗೂ ಸಲಹಿದ ಆಶ್ರಮದ ಮುಖ್ಯಸ್ಥರಾದ ಡಾ. ಉದಯ್ ಕುಮಾರ್ ದಂಪತಿಗಳು ಹಾಗೂ ಆಶ್ರಮದ ಸಿಬ್ಬಂದಿಗಳಿಗೆ ವಿಶು ಶೆಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

Advertisements

ಈ ಬಗ್ಗೆ ಪ್ರತಿಕ್ರಿಯಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಬೀದಿಯಲ್ಲಿ ತಿರುಗಾಡುವ ಮನೋರೋಗಿಗಳನ್ನು ನಿರ್ಲಕ್ಷ ಮಾಡದೇ ಸ್ಪಂದಿಸಿದಲ್ಲಿ ಅಂತಹ ಅಸಹಾಯಕರು ಪುನರ್ಜನ್ಮ ಪಡೆದು ಕುಟುಂಬ ಸೇರುತ್ತಾರೆ. ನಾನು ಉಡುಪಿಯಲ್ಲಿ ರಕ್ಷಿಸಲ್ಪಟ್ಟ ನೂರಾರು ಮನೋರೋಗಿಗಳಿಗೆ ಮಂಜೇಶ್ವರದ ಶ್ರೀ ಸಾಯಿ ಸೇವಾಶ್ರಮ ಹಾಗೂ ಸ್ನೇಹಾಲಯ ಪುನರ್ಜನ್ಮ ನೀಡಿ ಕುಟುಂಬ ಸೇರಿದ ಘಟನೆ ಹಿಂದೆ ಬಹಳಷ್ಟು ನಡೆದಿದೆ. ಹಿರಿಯ ಅಧಿಕಾರಿಗಳು ಇಂತಹ ಮನನೊಂದವರ ರಕ್ಷಣೆಗೆ ಸ್ಪಂದಿಸಬೇಕು. ಕೆಲವು ಬಾರಿ 5 ನಿಮಿಷದ ಕಾನೂನು ಪ್ರಕ್ರಿಯೆಗೆ 5 ದಿನ ಕಾಯಬೇಕಾದ ಸಂದರ್ಭ ಬಂದಿದೆ. ಜಿಲ್ಲಾಡಳಿತದ ವರ್ತನೆ ಹಲವು ಬಾರಿ ನೋವು ತಂದಿದೆ. ಇಂತಹ ಮಾನವೀಯ ಕೆಲಸಗಳಿಗೆ ಸರಕಾರಿ ಅಧಿಕಾರಿಗಳು ಸ್ಪಂದಿಸಿದಲ್ಲಿ ಸಮಾಜವೂ ಕೈ ಜೋಡಿಸುತ್ತದೆ ಎಂದು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X