ಉಡುಪಿ | ಅಂಬೇಡ್ಕ‌ರ್, ದಲಿತರಿಗೆ ಅವಹೇಳನ; ಹಿಂಜಾವೇ ಮುಖಂಡ ಉಮೇಶ್ ನಾಯ್ಕ್‌ ಸೂಡ ಬಂಧನ

Date:

ದಲಿತ ಸಮುದಾಯ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಉಮೇಶ್ ನಾಯ್ಕ್ ಸೂಡನನ್ನು ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.

- Advertisement -

“ಉಮೇಶ್ ನಾಯ್ಕ ಸೂಡನನ್ನು ಪೊಲೀಸರು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ” ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ ಅರುಣ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಹಿಂದೂ ಜಾಗರಣ ವೇದಿಕೆ(ಹಿಂಜಾವೇ)ಯ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಸಹ ಸಂಚಾಲಕ ಉಮೇಶ್ ನಾಯ್ಕ್ ದಕ್ಷಿಣ ಕನ್ನಡ ಮರಾಠಿ ಸಂರಕ್ಷಣಾ ಸಮಿತಿಯ ವಾಟ್ಸ್ಆ್ಯಪ್ ಗ್ರೂಪ್‌ನಲ್ಲಿ ಅಂಬೇಡ್ಕರ್ ಹಾಗೂ ದಲಿತರಿಗೆ ಅಪಮಾನಕರ ರೀತಿಯ ಆಡಿಯೋ ಸಂದೇಶವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆದ ಬಳಿಕ ದಲಿತ ಸಂಘರ್ಷ ಸಮಿತಿ ಹಾಗೂ ವಿವಿಧ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಉಮೇಶ್‌ ನಾಯ್ಕನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸಿ ದಸಂಸ ಹಾಗೂ ದಲಿತ ಸಂಘ ಟನೆಗಳು ಅಲ್ಲಲ್ಲಿ ಪೊಲೀಸರಿಗೆ ಮನವಿಗಳನ್ನು ಸಲ್ಲಿಸಿ ಒತ್ತಾಯಿಸಿದ್ದವು. ಈ ನಡುವೆ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ.

“ಆತನ ಮೇಲೆ ಭಾರತೀಯ ನ್ಯಾಯ ಸಂಹಿತೆ -2023ರ 353(2)ರ ಅಡಿ ಪ್ರಕರಣ ದಾಖಲಿಸಲಾಗಿದೆ. ಅಕ್ಟೋಬರ್‌ 10ರಂದು ದ ಕ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗದ್ದಿಗೆ ಕರಾವಳಿ ಮರಾಠಿ ಸಮಾವೇಶ-2024ನ್ನು ಆಯೋಜಿಸಿದ್ದು, ಈ ಸಮಾವೇಶದ ಆಮಂತ್ರಣ ಪತ್ರಿಕೆಯ ಮುಖಪುಟದಲ್ಲಿ ಅಂಬೇಡ್ಕರ್ ಫೋಟೊ ಮುದ್ರಿಸಿರುವುದು ಉಮೇಶ್ ನಾಯ್ಕನ ಆಕ್ರೋಶಕ್ಕೆ ಕಾರಣವಾಗಿತ್ತು. ಇದನ್ನೇ ನೆಪವಾಗಿರಿಸಿಕೊಂಡು ಅಂಬೇಡ್ಕರ್ ಹಾಗೂ ದಲಿತರನ್ನು ಅವಮಾನಿಸಿ ಉಮೇಶ್ ನಾಯ್ಕ ಸಾಮಾಜಿಕ ಜಾಲತಾಣದಲ್ಲಿ ವಾಯ್ಸ್ ಮೆಸೇಜ್ ಹರಿಯಬಿಟ್ಟಿರುವುದಾಗಿ ವರದಿಯಾಗಿತ್ತು.

ಉಮೇಶ ನಾಯ್ಕನದೆನ್ನಲಾದ ವೈರಲ್ ಆಡಿಯೋದಲ್ಲಿ “ಮರಾಠಿಗರು ದಲಿತರಲ್ಲ. ಆಮಂತ್ರಣ ಪತ್ರಿಕೆಯ ಅಂಬೇಡ್ಕರ್ ಫೋಟೊ ತೆಗೆದು ಶಿವಾಜಿಯ ಫೋಟೊ ಹಾಕಬೇಕು. ದಲಿತರು ದನದ ಹಾಗೂ ಕೋಣದ ಮಾಂಸ ತಿನ್ನುವವರು. ಸ್ಮಶಾನದಲ್ಲಿ ಮಲಗುವವರು. ಅಂಬೇಡ್ಕರ್ ಫೋಟೊ ಹಾಕಲು ಆತ ನಿಮ್ಮ ಅಪ್ಪನೇ. ಅಂಬೇಡ್ಕರ್ ಫೋಟೊ ತೆಗೆದು ಶಿವಾಜಿ ಪೋಟೊ ಹಾಕದಿದ್ದರೆ ಕರಾವಳಿ ಮರಾಠಿ ಸಮಾವೇಶಕ್ಕೆ ಬಹಿಷ್ಕಾರ ಹಾಕುತ್ತೇವೆ” ಎಂದು ಬೆದರಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ಅಕ್ರಮ ಖಾತೆ ರದ್ದುಪಡಿಸುವಂತೆ ಆಗ್ರಹ; ಡಿಎಸ್ಎಸ್‌ನಿಂದ ಅನಿರ್ದಿಷ್ಟಾವಧಿ ಧರಣಿ

ಉಮೇಶ ನಾಯ್ಕನ ಹೇಳಿಕೆ ವೈರಲ್ ಆಗುತ್ತಿದ್ದಂತೆ ಆತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯು ಎಸ್‌ಪಿ ಅನುಪಸ್ಥಿತಿಯಲ್ಲಿ ಉಡುಪಿ ಪೊಲೀಸ್ ಉಪಾಧೀಕ್ಷಕ ಡಿ ಟಿ ಪ್ರಭುರಿಗೆ ಮನವಿ ಸಲ್ಲಿಸಿ ಒತ್ತಾಯಿಸಿತ್ತು.

ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್, ಶಾಮರಾಜ ಬಿರ್ತಿ, ಮಂಜುನಾಥ ಗಿಳಿಯಾರು, ಶಾಮಸುಂದರ ತೆಕ್ಕಟ್ಟೆ, ಕುಮಾರ್ ಕೋಟ, ಹರಿಶ್ಚಂದ್ರ ಕೆ ಡಿ, ಶಿವಾನಂದ ಬಿರ್ತಿ, ಶಿವಾನಂದ ಮೂಡಬೆಟ್ಟು ಮುಂತಾದವರು ನಿಯೋಗದಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...