ಉಡುಪಿ | ಹೆಣ್ಣಾಗಿ ಹುಟ್ಟುವುದು ಶಾಪವಲ್ಲ, ಬದಲಾಗಿ ವರ: ಧರ್ಮಗುರು ಡೆನಿಸ್ ಡೇಸಾ

Date:

Advertisements

ಭೂಮಿ ತಾಯಿ ಹೆಣ್ಣು, ಜನ್ಮ ಕೊಟ್ಟ ತಾಯಿ ಹೆಣ್ಣು, ಹೆಂಡತಿಯಾಗಿ ಬರುವವಳು ಹೆಣ್ಣು, ಮಗಳಾಗಿ ಹುಟ್ಟುವವಳು ಹೆಣ್ಣು. ನಮ್ಮ ಜೀವನದಲ್ಲಿ ಇವರೆಲ್ಲರ ಪಾತ್ರ ಮುಖ್ಯ. ಹೀಗಿರುವಾಗ ಹೆಣ್ಣು ಮಗು ಹುಟ್ಟುವುದು ಶಾಪವಲ್ಲ ಬದಲಾಗಿ ವರ ಎಂದು ಉಡುಪಿಯ ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂದನೀಯ ಡೆನಿಸ್ ಡೇಸಾ ಹೇಳಿದರು.

ಅವರು ಚರ್ಚಿನ ಸ್ತ್ರೀ ಸಂಘಟನೆ ಆಯೋಜಿಸಿದ್ದ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕ ಸಮಾಜದಲ್ಲಿ ಹೆಣ್ಣು ಮನಸ್ಸು ಮಾಡಿದರೆ ಯಾವುದೇ ಸಾಧನೆ ಮಾಡಲು ಸಾಧ್ಯ ಎನ್ನುವುದಕ್ಕೆ ಹಲವಾರು ಉದಾಹರಣೆಗಳು ನಮ್ಮ ಮುಂದಿವೆ. ಸುನೀತಾ ವಿಲಿಯಮ್ಸ್, ಸೈನಾ ನೆಹ್ವಾಲ್ ಸಿಂಧು ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಸಾಧನೆಗಳ ಮೂಲಕ ಹೆಸರುವಾಸಿಯಾಗಿದ್ದಾರೆ ಎಂದರು.

ಇಂದು ಪುರುಷರಷ್ಟೇ ಸಮಾನರಾಗಿ ಹೆಣ್ಣು ಮಕ್ಕಳು ಸಾಧನೆಯನ್ನು ತೋರುತ್ತಿದ್ದಾರೆ. ಹೆಣ್ಣು ಮಕ್ಕಳೆ ತಮ್ಮ ರಕ್ಷಣೆಗೆ ತಾವು ಮುಂದಾಗಬೇಕು. ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ ಸ್ವತಂತ್ರವಾಗಿ ವಿಚಾರಿಸುವ, ನಿರ್ಧಾರ ಕೈಗೊಳ್ಳುವ ಅವಕಾಶ ಕಲ್ಪಿಸಬೇಕು ಎಂದರು.

Advertisements

ಇದನ್ನು ಓದಿದ್ದೀರಾ? ರಾಯಚೂರು | ಮಾನ್ವಿ ಸಿರವಾರದ ಕೊನೆಯ ಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ಸೆ.20 ರಸ್ತೆ ತಡೆ: ರೈತರ ಎಚ್ಚರಿಕೆ

ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಜೆನವಿವ್ ಕವಿತಾ ಕುಟಿನ್ಹೊ ಹೆಣ್ಣು ಮಕ್ಕಳ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಉಪನ್ಯಾಸ ನೀಡಿದರು. ಇದೇ ವೇಳೆ ಚರ್ಚಿನ ಮಹಿಳಾ ಸದಸ್ಯರುಗಳಿಗೆ ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಸ್ತ್ರೀ ಸಂಘಟನೆಯ ಉಡುಪಿ ಧರ್ಮಪ್ರಾಂತ್ಯದ ಅಧ್ಯಕ್ಷರಾದ ಗ್ರೇಸಿ ಕುವೆಲ್ಲೊ, ಕಲ್ಯಾಣಪುರ ವಲಯ ಅಧ್ಯಕ್ಷರಾದ ಮರೀನಾ ಲೂವಿಸ್, ತೊಟ್ಟಮ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸುನೀಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ತೊಟ್ಟಂ ಘಟಕದ ಅಧ್ಯಕ್ಷರಾದ ಲೂಸಿ ಫೆರ್ನಾಂಡಿಸ್ ಸ್ವಾಗತಿಸಿ, ಲವೀನಾ ಫೆರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X