ಉಡುಪಿ | ಉದ್ಘಾಟನೆ ಭಾಗ್ಯವಿಲ್ಲದೆ ಅನಾಥ ಸ್ಥಿತಿಯಲ್ಲಿದೆ ಬೀಡಿನಗುಡ್ಡೆಯ ಅನಿಲ ಚಿತಾಗಾರ!

Date:

ಉಡುಪಿ ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದಿದ್ದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ ಭಾಗ್ಯ ಪಡೆಯದೆ ಅನಾಥ ಸ್ಥಿತಿಯಲ್ಲಿದೆ. ಶೀಘ್ರವಾಗಿ ಲೋಕಾರ್ಪಣೆಗೊಳಿಸುವಂತೆ ಸಾರ್ವಜನಿಕ ವಲಯದಿಂದ ಆಗ್ರಹಗಳು ಸಹ ವ್ಯಕ್ತವಾಗುತ್ತಿವೆ.

- Advertisement -

ತಂತ್ರಜ್ಞಾನ ಮುಂದುವರಿದರೂ ಇನ್ನೂ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿಯಲ್ಲಿ ಕಟ್ಟಿಗೆಗಳನ್ನು ಬಳಸಿಕೊಂಡು ಸಾಂಪ್ರದಾಯಿಕ ಪದ್ಧತಿಯಂತೆ ಅಂತ್ಯಸಂಸ್ಕಾರಗಳು ನಡೆಯುತ್ತಿವೆ. ಈ ಪದ್ಧತಿಯಿಂದ ಮರಗಳ ವಿನಾಶ ಹಾಗೂ ಶವ ದಹನದಿಂದಾಗುವ ಧೂಮ, ಹಾರುವ ಬೂದಿಯಿಂದ ಸುತ್ತಮುತ್ತಲಿನ ಪರಿಸರದಲ್ಲಿ ‘ವಾಯುಮಾಲಿನ್ಯ’ ಆಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...
ಬೀಡಿನ ಗುಡ್ಡೆ

ಪರಿಸರ ರಕ್ಷಿಸುವ ದೃಷ್ಟಿಕೋನದಿಂದ ನಗರಸಭೆ ಶವಸಂಸ್ಕಾರಕ್ಕೆ ಆಧುನಿಕ ತಂತ್ರಜ್ಞಾನದ ಅನಿಲ ಚಿತಾಗಾರವನ್ನು ಸಾಂಪ್ರದಾಯಿಕ ಚಿತಾಗಾರದ ಸಮೀಪವೇ ಸ್ಥಾಪಿಸಿದೆ. ಈ ಪರಿಸರಸ್ನೇಹಿ ಯೋಜನೆಗೆ ಸಾರ್ವಜನಿಕ ವಲಯದಲ್ಲಿ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತಾದರೂ, ಇಲ್ಲಿಯವರೆಗೆ ಉದ್ಘಾಟನೆ ಆಗದಿದ್ದಕ್ಕೆ ಬೇಸರ ಕೂಡ ವ್ಯಕ್ತವಾಗಿದೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಈ ದಿನ.ಕಾಮ್ ಜೊತೆಗೆ ಮಾತನಾಡಿದ್ದು, “ಕಟ್ಟಿಗೆಯಿಂದ ಶವ ದಹಿಸಲು ಸುಮಾರು 2 ರಿಂದ 3 ಗಂಟೆಗಳು ಬೇಕಾಗುತ್ತದೆ. ಅನಿಲ ಚಿತಾಗಾರದಲ್ಲಿ ಬಹಳ ಕಡಿಮೆ ಸಮಯದಲ್ಲಿ ಕಳೇಬರವನ್ನು ಭಸ್ಮಗೊಳಿಸಬಹುದು” ಎಂದು ತಿಳಿಸಿದರು.

“ಅನಿಲ ಚಿತಾಗಾರದಲ್ಲಿ ಶವವನ್ನು ದಹಿಸುವಾಗ ಉತ್ಪತ್ತಿಯಾಗುವ ಧೂಮವು ನೇರವಾಗಿ ಪರಿಸರದಲ್ಲಿ ಪಸರಿಸುವುದಿಲ್ಲ. ಈ ಚಿತಾಗಾರವು ಧೂಮದಲ್ಲಿನ ರಾಸಾಯನಿಕ ಹಾಗೂ ಧೂಮವನ್ನು ನಿಯಂತ್ರಿಸಿಕೊಂಡು, ಶುದ್ದೀಕರಿಸಿದ ಧೂಮವನ್ನು ಚಿಮಿಣಿಯ ಮೂಲಕ ಹೊರಹಾಕಿಸುವ ನೂತನ ವ್ಯವಸ್ಥೆ ಹೊಂದಿರುತ್ತದೆ. ಪರಿಸರಸ್ನೇಹಿಯಾಗಿ ಅನಿಲ ಚಿತಾಗಾರವು ಕೆಲಸ ನಿರ್ವಹಿಸುತ್ತದೆ. ಪೂರ್ಣ ಪ್ರಮಾಣದಲ್ಲಿ ಸಿದ್ಧಗೊಂಡಿರುವ ಅನಿಲ ಚಿತಾಗಾರವನ್ನು ನಗರಾಡಳಿತ, ಜಿಲ್ಲಾಡಳಿತ, ಜನಪ್ರತಿನಿಧಿಗಳು ಶೀಘ್ರವೇ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಸಮರ್ಪಿಸಬೇಕು” ಎಂದು ಆಗ್ರಹಿಸಿದ್ದಾರೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...