ಉಡುಪಿ | ಆರೋಪ ಸುಳ್ಳೆಂದು ಬಿಜೆಪಿ ಶಾಸಕ ಸಾಬೀತು ಮಾಡಲಿ; ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಪುರಸಭೆ ಸದಸ್ಯ

Date:

Advertisements

ಪರಶುರಾಮನ ಪ್ರತಿಮೆಯ ವಿಚಾರವಾಗಿ ಶಾಸಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ಸುಳ್ಳೆಂದು ಅವರು ದೇವಸ್ಥಾನದಲ್ಲಿ ಪ್ರಮಾಣ ಮಾಡಿ ಸಾಬೀತು ಮಾಡಿದರೆ, ನಾನು ಕ್ಷಮೆ ಕೇಳುತ್ತೇನೆ. ಮಾತ್ರವಲ್ಲ ರಾಜಕೀಯದಿಂದಲೂ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್‌ಗೆ ಕಾರ್ಕಳ ಪುರಸಭಾ ಸದಸ್ಯ, ಕಾಂಗ್ರೆಸ್‌ ಮುಖಂಡ ಶುಭದ ರಾವ್ ಸವಾಲು ಹಾಕಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶುಭದ ರಾವ್, “ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸುನೀಲ್ ಅವರು ತಮ್ಮ ವಿರುದ್ಧದ ಆರೋಪಗಳು ಸುಳ್ಳೆಂದು ಹೇಳಿದ್ದಾರೆ. ಅಲ್ಲದೆ, ಅವರು ಅಸಭ್ಯವಾಗಿ ಮಾತನಾಡಿದ್ದಾರೆ. ಧರ್ಮದ ದುರ್ಬಳಕೆಯು ಅವರನ್ನು ಭಿಕ್ಷೆ ಬೇಡುವ ಪರಿಸ್ಥಿತಿಗೆ ತರುತ್ತದೆ. ಅವರು ತಮ್ಮ ವಿರುದ್ಧದ ಆರೋಪಗಳು ಸುಳ್ಳೆಂದು ದೇವರ ಮೇಲೆ ಆಣೆ ಮಾಡಲಿ. ಪ್ರಮಾಣ ಮಾಡುವ ಸ್ಥಳ, ಸಮಯ, ದಿನಾಂಕವನ್ನು ಅವರೇ ನಿರ್ಧರಿಸಲಿ” ಎಂದು ಹೇಳಿದ್ದಾರೆ.

“ಇತ್ತೀಚೆಗೆ ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಿಸಿರುವ ಪ್ರತಿಮೆ ಚೂರಾದ ಚಿತ್ರಗಳು ಪ್ರತಿಮೆ ಸ್ಥಾಪನೆ ಸಂದರ್ಭದ್ಧೇ? ವಿಡಿಯೋದಲ್ಲಿ ದಾಖಲಾಗಿರುವಂತೆ ಕ್ರೈನ್ ಮೂಲಕ ಎತ್ತಿದ ಪರಶುರಾಮನ ಎದೆಯ ಮೇಲಿನ ಭಾಗ ಕಂಚಿನದ್ದೇ? ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದ್ದ ಪರಶುರಾಮನ ಪ್ರತಿಮೆ ಸಂಪೂರ್ಣ ಕಂಚಿನದ್ದೇ? ಪ್ರತಿಮೆಯ ಮೇಲ್ಭಾಗ ತೆರವು ವಿಚಾರವಾಗಿ ಜಿಲ್ಲಾಡಳಿತ, ಪೊಲೀಸ್ ಮತ್ತು ನಿರ್ಮಿತಿ ಕೇಂದ್ರದ ಮೇಲೆ ತಾವು ಒತ್ತಡ ಹೇರಲಿಲ್ಲವೇ? ಕಾಂಗ್ರೆಸ್ ಅನುದಾನ ತಡೆ ಹಿಡಿದಿದೆ ಎಂದ ಹೇಳಿದ ತಮ್ಮ ಆರೋಪ ಸರಿಯೇ? ಈ ಎಲ್ಲ ಪ್ರಶ್ನೆಗಳಿಗೆ ದೇವಾಲಯಕ್ಕೆ ಬಂದು ಪ್ರಮಾಣ ಮಾಡಿ, ಸಾಬೀತು ಪಡಿಸಿ” ಎಂದು ಶಾಸಕ ಸುನೀಲ್ ಕುಮಾರ್‌ಗೆ ಸುಭದ ರಾವ್ ಸವಾಲು ಹಾಕಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X