ಉಡುಪಿ | ಕ್ರೇನ್ ತೊಟ್ಟಿಲಿನಿಂದ ಉರುಳಿಬಿದ್ದು ಓರ್ವನ ಸಾವು, ಕೆಲಸದವಳು ಗಂಭೀರ

Date:

Advertisements

ಕ್ರೇನ್ ಬಳಸಿಕೊಂಡು, ಅದರ ತೊಟ್ಟಿಲಿನಲ್ಲಿ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸಲು ಹೋಗಿದ್ದ ಇರ್ವರು‌ ತೊಟ್ಟಿಲು ವಾಲಿಕೊಂಡಿದರಿಂದ ಇರ್ವರು ನೆಲಕ್ಕುರುಳಿ ಬಿದ್ದಿರುವ‌ ದುರ್ಘಟನೆ ಕೋರ್ಟ್ ಹಿಂಬಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಛೇರಿ ಸನಿಹ‌ ಶನಿವಾರ ನಡೆದಿದೆ.

ಘಟನೆ ತಿಳಿದು ಧಾವಿಸಿ ಬಂದು ಗಂಭೀರ ಸ್ಥಿತಿಯಲ್ಲಿದ್ದ ಇರ್ವರ ಗಾಯಾಳುಗಳನ್ನು ಒಮ್ಮೆಗೆ ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಅದಾಗಲೇ ಪರೀಕ್ಷಿಸಿದ ವೈದ್ಯರಿಂದ ಪ್ರಾನ್ಸಿಸ್ ಪಟೊರ್ಡೋ (65 ವ) ಮೃತಪಟ್ಟಿರುವುದು ದೃಢಪಟ್ಟಿತು. ಮೃತರು ಮನೆ ಮಾಲಕರ ಸಹೋದರ ಎಂದು ತಿಳಿದುಬಂದಿದೆ. ಇವರೊಂದಿಗೆ ಕ್ರೇನ್‌ನಲ್ಲಿ ತೆರಳಿದ್ದ ಮನೆ ಕೆಲಸದಾಕೆ ಶಾರದ (35ವ) ಇವರಿಗೆ ಗಂಭೀರ ಗಾಯಗಳಾಗಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮಲ್ಪೆ ಕಲ್ಮಾಡಿಯವರೆಂದು ಹೇಳಲಾಗಿದೆ. ಬಿದ್ದು ಇರ್ವರು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ಗಾಯಾಳುಗಳ ರಕ್ಷಣೆಗೆ ಮುಂದೆ ಬಾರದೆ, ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿರುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ.‌ ದುರಂತದ ಸ್ವಷ್ಟ ವಿವರಗಳು ಇನ್ನಷ್ಟೇ ತಿಳಿದುಬರಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X