ವಿಧಾನಸಭಾ ಚುನಾವಣೆಯಲ್ಲಿ ಅಪ್ರಾಪ್ತ ಯುವಕನೊಬ್ಬ ವಿದೇಶದಲ್ಲಿದ್ದ ಇನ್ನೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮತ ಚಲಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
“ಮೇ 10 ರಂದು ವಿಧಾನಸಭೆ ಚುನಾವಣೆಯಲ್ಲ ವಿದೇಶದಲ್ಲಿದ್ದ ಸುಹಾಸ್ ಶೆಟ್ಟಿ ಅವರ ಹೆಸರಿನಲ್ಲಿ, ಕಾನೂನಿಗೆ ವಿರುದ್ಧವಾಗಿ ಅಪ್ರಾಪ್ತ (17 ವರ್ಷ) ಮತ ಚಲಾಯಿಸಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.
ಮಿಯಾರ್ ಗ್ರಾಮದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಾನಾಥ್ ಕೋಟ್ಯಾನ್ ನೀಡಿದ ದೂರಿನನ್ವಯ ಐಪಿಸಿ ಸೆಕ್ಷನ್ 171 (ಡಿ) ಮತ್ತು 109ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? 2ನೇ ಬಾರಿ ಸಿಎಂ ಆದ ಸಿದ್ದರಾಮಯ್ಯ; ರಾಜ್ಯದಲ್ಲಿನ್ನು “ಎಸ್ಡಿಕೆ” ಸರ್ಕಾರ
ಕಾರ್ಕಳದ ಮಿಯಾರ್ ಮತಗಟ್ಟೆಯಲ್ಲಿ (ನಂ.155) ಅಧಿಕಾರಿಗಳಿಗೆ ಯುವಕ ತನ್ನನ್ನು ಶೆಟ್ಟಿ ಎಂದು ಪರಿಚಯಿಸಿಕೊಂಡಿದ್ದಾನೆಂದು ಕೋಟ್ಯಾನ್ ದೂರಿನಲ್ಲಿ ತಿಳಿಸಿದ್ದಾರೆ.
ನವೀನ್ ಮತ್ತು ಇನ್ನೋರ್ವ ಬಿಜೆಪಿ ಕಾರ್ಯಕರ್ತ ರೋಹಿತ್ ಶೆಟ್ಟಿ ಯುವಕರಿಗೆ ಅಕ್ರಮವಾಗಿ ಮತ ಚಲಾಯಿಸಲು ಪ್ರಚೋದನೆ ನೀಡಿದ್ದಾರೆಂದು ದೂರುದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.