ಉಡುಪಿ | “ಹ್ಯಾಂಡ್ಸ್ ಆನ್ ಸೊಯ್ಲ್, ಹಾರ್ಟ್ಸ್ ವಿತ್ ಇಂಡಿಯಾ” | ಗಿಡ ನೆಟ್ಟು ಸಂಭ್ರಮಿಸಿದ ಚಿಣ್ಣರು

Date:

Advertisements

“ಹ್ಯಾಂಡ್ಸ್ ಆನ್ ಸೊಯ್ಲ್, ಹಾರ್ಟ್ಸ್ ವಿತ್ ಇಂಡಿಯಾ” ಎಂಬ ರಾಷ್ಟ್ರವ್ಯಾಪಿ ಅಭಿಯಾನದ ಭಾಗವಾಗಿ, ಚಿಲ್ಡ್ರನ್ ಇಸ್ಲಾಮಿಕ್ ಆರ್ಗನೈಸೇಶನ್ (CIO) ನ ಉಡುಪಿ ಘಟಕವು ಜುಲೈ ಇಂದು ಪರಿಸರ ಜಾಗೃತಿಯನ್ನು ಮೂಡಿಸಲು ಹಾಗೂ ಯುವ ಮನಸ್ಸುಗಳಲ್ಲಿ ಪ್ರಕೃತಿಯ ಕುರಿತು ಜವಾಬ್ದಾರಿಯನ್ನು ಹೆಚ್ಚಿಸಲು ಪ್ಲಾಂಟೇಶನ್ ಡ್ರೈವ್ (ಗಿಡ ನೆಡುವ ಕಾರ್ಯಕ್ರಮ) ಆಯೋಜಿಸಿತು.

ಮೆಹರುನಿಸಾ ಅವರು ನಡೆಸಿದ ಸಂವಾದಾತ್ಮಕ ಅಧಿವೇಶನದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅವರು ದೈನಂದಿನ ಜೀವನದಲ್ಲಿ ಸಸ್ಯಗಳ ಪ್ರಾಮುಖ್ಯತೆ ಮತ್ತು ಅವುಗಳ ವಿವಿಧ ಉಪಯೋಗಗಳ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು.

1006196881

ಅಧಿವೇಶನದ ನಂತರ, CIO ಮಕ್ಕಳು, ICC ಹುಡುಗರು ಮತ್ತು JIH ಕಾರ್ಯಕರ್ತರು ಉಡುಪಿಯ ಜಾಮಿಯಾ ಮಸೀದಿಯ ಆವರಣದಲ್ಲಿ ಸಸಿಗಳನ್ನು ನೆಡುವಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

Advertisements

ಜಾಮಿಯಾ ಮಸೀದಿಯ ಜನಾಬ್ ರಿಯಾಜ್ ಅಹ್ಮದ್ ಅವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಕ್ಕಳು ಮತ್ತು ಸಂಘಟಕರ ಪ್ರಯತ್ನಗಳನ್ನು ಶ್ಲಾಘಿಸಿದರು.

ಈ ಅಭಿಯಾನವು ಮಕ್ಕಳಲ್ಲಿ ಮಣ್ಣಿನ ಜ್ಞಾನ, ಪರಿಸರ ಕುರಿತು ಆಸಕ್ತಿಯನ್ನು ಮೂಡಿಸುದರೊಂದಿಗೆ ಭವಿಷ್ಯ ಭಾರತದತ್ತ ಉದಾತ್ತ ಪ್ರಜೆಯಾಗಿ ಬೆಳೆಯಲು ಪ್ರೇರಕ ಶಕ್ತಿಯಾಗಲಿದೆಯೆಂದು ಆಯೋಜಕರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕನ್ನಡ ಉಳಿಯಬೇಕಾದರೆ ಎಸ್‌ಇಪಿ ಜಾರಿಯಾಗಲಿ : ಪುರುಷೋತ್ತಮ ಬಿಳಿಮಲೆ

ʼಶಿಕ್ಷಣಕ್ಕೆ ಭದ್ರತೆ, ಜೀವನ, ಬದುಕು, ಅನ್ನ, ನೆಮ್ಮದಿ ಸೇರಿದಂತೆ ನಾನಾ ಅರ್ಥಗಳಿವೆ....

ರಾಯಚೂರು | ಬಾಣಂತಿ, ಮಗು ಸಾವು

ಹೆರಿಗೆಯ ವೇಳೆ ತೀವ್ರ ರಕ್ತಸ್ರಾವವಾಗಿ ತಾಯಿ ಮತ್ತು ಮಗು ಇಬ್ಬರೂ ಸಾವನ್ನಪ್ಪಿದ...

ಉಡುಪಿ | ಶಾಸಕರಿಂದ ಸೌಹಾರ್ದತೆಗೆ ದಕ್ಕೆ ತರುವ ಹೇಳಿಕೆ, ಕಾನೂನು ಕ್ರಮ ಕೈಗೊಳ್ಳಿ – ಎಸ್ ಡಿ ಪಿ ಐ

ಮೈಸೂರು ಸಂಸ್ಥಾನದ ಇತಿಹಾಸದ ಗಂಧಗಾಳಿ ತಿಳಿಯದ ಮತ್ತು ಸದಾ ಹಿಂದುತ್ವದ ಅಮಲಿನಲ್ಲಿರುವ...

ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ...

Download Eedina App Android / iOS

X