ಉಡುಪಿ | ಸಾರಿಗೆ ಸೌಕರ್ಯಕ್ಕಾಗಿ ಹೋರಾಟ, ಬೈಂದೂರು, ಕುಂದಾಪುರ ಭಾಗದ ಸಾರ್ವಜನಿಕರ ಧರಣಿ

Date:

ಬೈಂದೂರು ಕುಂದಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಬಸ್ ಇಲ್ಲದ ಮಾರ್ಗಗಳಲ್ಲಿ ಓಡಿಸಬೇಕು ಎಂದು ಹೋರಾಟ ನಡೆದು ಕೆಲವು ಮಾರ್ಗಗಳಿಗೆ ಪರವಾನಿಗೆ ನೀಡಿದರೂ ಖಾಸಗಿ ಬಸ್ ಮಾಲಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದೆ ಸಾರಿಗೆ ಪ್ರಾಧಿಕಾರ ಈ ಬಗ್ಗೆ ತೆರವುಗೊಳಿಸಲು ಕ್ರಮವಹಿಸಿಲ್ಲ ಎಂದು ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ತಾಲೂಕು ಅಧ್ಯಕ್ಷ ರಾಜೀವ ಪಡುಕೋಣೆ ಹೇಳಿದರು.

- Advertisement -

ನ್ಯೂ ಕಂಪ್ರೆನ್ಸಿವ್ ಏರಿಯಾ ಸ್ಕ್ರೀಮ್ 07.03.2019 ರಂತೆ ರಾಜ್ಯ ರಸ್ತೆ ಸಾರಿಗೆಯವರು ರಾಷ್ಟ್ರೀಕೃತ ಯೋಜನೆ ಪರ್ಮಿಟಿಗಾಗಿ ಅರ್ಜಿ ಸಲ್ಲಿಸಿದಾಗ ಸಂಬಂಧಿತ ಪ್ರಾಧಿಕಾರಿಗಳು ಪರವಾನಿಗೆಯನ್ನು ಕಡ್ಡಾಯವಾಗಿ ವಿತರಿಸಬೇಕು ಎಂದು ನ್ಯೂ ಕಂಪ್ರೇಸಿವ್ ಏರಿಯಾ ಸ್ಕ್ರೀಮ್ ನಲ್ಲಿ ದ್ರಡೀಕರಿಸಲಾಗಿದೆ ಆದುದರಿಂದ ಕುಂದಾಪುರ ಬೈಂದೂರು ಗ್ರಾಮೀಣ ಪ್ರದೇಶಗಳಲ್ಲಿ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕು ಕಳೆದ ಒಂದು ವರ್ಷದಿಂದ ಅಧಿಕೃತವಾಗಿ ಸಾರಿಗೆ ಪ್ರಾಧಿಕಾರ ಸಭೆ ನಡೆಸಿಲ್ಲ ಆದುದರಿಂದ ಸಾರಿಗೆ ಪ್ರಾಧಿಕಾರ ನಮ್ಮ ಸಂಘಟನೆ ಜೊತೆ ಜಂಟಿ ಸಭೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
1007513856

ಧರಣಿಯನ್ನುದ್ದೇಶಿಸಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ ಕೆಎಸ್ಸಾರ್ಟಿಸಿ ಬಸ್ ಓಡಿಸಲು ಕಳೆದ ವರ್ಷದಿಂದ ಗ್ರಾಮೀಣ ಭಾಗಗಳಲ್ಲಿ ಸ್ಥಳೀಯವಾಗಿ ಹೋರಾಟಗಳನ್ನು ನಡೆಸಿದರೂ ಪ್ರಾಧೀಕಾರ ಕಡೆಗಣಿಸಿದೆ.
ಜನಪ್ರತಿನಿಧಿಗಳು, ಅಧಿಕಾರಿಗಳು,ಖಾಸಗಿ ಬಸ್ ಮಾಲಕರು ಒಂದಾಗಿ ಅಪವಿತ್ರ ಮೈತ್ರಿಯಿಂದ ಸರಕಾರಿ ಬಸ್ ಓಡಿಸದೇ ಮಹಿಳೆಯರಿಗೆ,ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯಿಂದ ವಂಚಿಸಿದ್ದಾರೆ ಎಂದು ಹೇಳಿದರು. ಖಾಸಗೀ ಬಸ್ ಗಳಲ್ಲಿ ವಿದ್ಯಾರ್ಥಿನಿಯರನ್ನು ಕೊನೆಯಲ್ಲಿ ಬಸ್ ಹತ್ತುವಂತೆ, ಸೀಟುಗಳನ್ನು ಕೊಡದೇ ಸತಾಯಿಸಿಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರಣಿಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ವಿ ಉಡುಪಿ ಜಿಲ್ಲಾ ಹಂಚು ಕಾರ್ಮಿಕರ ಸಂಘದ ಕಾರ್ಯದರ್ಶಿ ಎಚ್ ನರಸಿಂಹ, ಕ್ರಷಿಕೂಲಿಕಾರ ಸಂಘಟನೆ ನಾಗರತ್ನ ನಾಡ, ಜನವಾದಿ ಮಹಿಳಾ ಸಂಘಟನೆಯ ಶೀಲಾವತಿ, ಡಿವೈಎಫ್ಐ ಕಾರ್ಯದರ್ಶಿ ನಿಸರ್ಗ, ರಾಜೇಶ್ ಪಡುಕೋಣೆ,ದಲಿತ ಹಕ್ಕುಗಳ ಸಮಿತಿ ಮುಖಂಡರಾದ ಸಂಜೀವ ಬಳ್ಕೂರು, ಬಳ್ಕೂರು ಶೋಭ, ನಾಗರತ್ನ ಆರ್, ರೊನಾಲ್ಡ್ ರಾಜೇಶ್ ಕ್ವಾಡ್ರಸ್, ಉಮೇಶ್ ಕುಂದರ್, ನಳಿನಿ ಮೊದಲಾದವರಿದ್ದರು.

1007513859

ಸ್ಥಳಕ್ಕೆ ಮಾನ್ಯ ಅಪಾರ ಜಿಲ್ಲಾಧಿಕಾರಿ, ಸಾರಿಗೆ ಇಲಾಖೆಯ (RTO) ಅಧಿಕಾರಿಗಳು, KSRTC ಪ್ರಾಧಿಕಾರದ ಅಧಿಕಾರಿಗಳು, ಮನವಿ ಸ್ವೀಕರಿಸಿ ಮಾತಾನಾಡಿ ಅಕ್ಟೋಬರ್ 15 ರಂದು ಸಾರಿಗೆ ಪ್ರಾಧಿಕಾರದ ಜಂಟಿ ಸಭೆಯನ್ನು ನಿಗದಿ ಮಾಡಿ ಹೋರಾಟಗಾರರ ಮುಖಂಡರಿಗೆ ಅಹ್ವಾನ ನೀಡಿದರು ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ ಹಾಗೂ ಗ್ಯಾರಂಟಿ ಯೋಜನೆಯ ಜಿಲ್ಲಾ ಅಧ್ಯಕ್ಷ ರಾದ ಅಶೋಕ್ ಕೊಡವೂರು ಮತ್ತು ಉಪಾಧ್ಯಕ್ಷ ರಾದ ಪ್ರಶಾಂತ್ ಜತ್ತನ್ನ ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಮಾತನಾಡಿದರು.

ಬೈಂದೂರು, ಪಡುಕೋಣೆ, ಆಲೂರು, ಗುಲ್ವಾಡಿ, ಮೊವಾಡಿ, ಹಕ್ಲಾಡಿ, ಕುಂದಬಾರಂದಾಡಿ ಗ್ರಾಮದ ಜನರು, ವಿದ್ಯಾರ್ಥಿಗಳು, ಕಟ್ಟಡ ಕಾರ್ಮಿಕರು, ಹಂಚು ಕಾರ್ಮಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಉತ್ತರ ಕನ್ನಡ | ಏಳು ದ್ವೀಪಗಳ ಅಭಿವೃದ್ಧಿ, ಕಾರವಾರ ವಿಮಾನ ನಿಲ್ದಾಣ ವಿಸ್ತರಣೆಗೆ ಸಚಿವ ಸಂಪುಟ ಅಸ್ತು

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಭಟ್ಕಳ ಮತ್ತು ಅಂಕೋಲಾ ತಾಲ್ಲೂಕುಗಳ ವ್ಯಾಪ್ತಿಯ...