ಉಡುಪಿ | ಅಂಗನವಾಡಿ ನೌಕರರಿಗೆ ಸಾಮಾಜಿಕ ಸಮೀಕ್ಷೆಗೆ ರಿಯಾಯಿತಿ ನೀಡಲು ಆಗ್ರಹಿಸಿ ಧರಣಿ

Date:

Advertisements

ಸಾಮಾಜಿಕ ಸಮೀಕ್ಷೆ ಮಾಡದ ಅನಾರೋಗ್ಯ ಪೀಡಿತ ಮಹಿಳೆಯರಿಗೆ ಸಮೀಕ್ಷೆಯಿಂದ ರಿಯಾಯಿತಿ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ಧರಣಿಯನ್ನುದ್ದೇಶಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲ ನಾಡ ಮಾತನಾಡಿ, ಕೆಲವು ಅಂಗನವಾಡಿ ನೌಕರರು ಕೆಲವು ಸಮಸ್ಯೆಗಳಿಗಾಗಿ ಸಮೀಕ್ಷೆಯಿಂದ ರಿಯಾಯಿತಿ ಕೇಳಿದರೂ ಜನಪ್ರತಿನಿಧಿ ಕಾಯ್ದೆಯಡಿ ವಜಾ ಮಾಡಲಾಗುವುದು ಎಂದು ಅಧಿಕಾರಿಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಆರೋಪಿಸಿದರು.

ಚುನಾವಣಾ ಆಯೋಗದ ಸುತ್ತೋಲೆಯಲ್ಲಿ ಮತಗಟ್ಟೆ ಅಧಿಕಾರಿ ಹಾಗೂ ಸಾಮಾಜಿಕ ಸಮೀಕ್ಷೆಗೆ ಸಿ ದರ್ಜೆ ನೌಕರರನ್ನು ನೇಮಿಸಿಕೊಳ್ಳಬೇಕು ಎಂದಿದ್ದರೂ ಸುತ್ತೋಲೆಯನ್ನು ಕೆಳ ಅಧಿಕಾರಿಗಳು ಕಡೆಗಣಿಸಿ ಅಧಿಕಾರಿಗಳು ನೌಕರರನ್ನು ಜೈಲಿಗೆ ಕಳುಹಿಸುವ ಬೆದರಿಕೆ ಮಹಿಳೆಯರಿಗೆ ಮಾನಸಿಕ ಹಿಂಸೆಯಾಗಿದೆ ಅಲ್ಲದೇ ಸಮೀಕ್ಷೆಯನ್ನು ಸ್ಥಳೀಯವಾಗಿ ನೀಡದೇ ಬೇರೆ ಬೇರೆ ದೂರದ ಗ್ರಾಮಗಳಿಗೆ ನಿಯೋಜಿಸಿರುವುದು ಅಂಗನವಾಡಿ ನೌಕರರಿಗೆ ಸಮಸ್ಯೆಯಾಗಿದೆ. ಈ ಕೆಲಸಗಳ ಜೊತೆ ಜೊತೆಗೆ ಎಫ್ ಎಸ್ ಆರ್ ಬಿಎಲ್ಓ ಕೆಲಸಗಳನ್ನು ಮಾಡಬೇಕು ಎಂದು ನೋಟಿಸ್ ನೀಡುತ್ತಿರುವುದು ನೌಕರರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೂಡ ಈ ಮಹಿಳೆಯರನ್ನು ಮಾನವೀಯತೆ ಇಲ್ಲದೆ ಗುಲಾಮರಂತೆ ದುಡಿಸುತ್ತಿದೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 09 30 at 12.27.37 AM 1

ಧರಣಿಗೆ ಅಪರ ಜಿಲ್ಲಾಧಿಕಾರಿ ಭೇಟಿ
ಧರಣಿ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿ ಸಿ ದರ್ಜೆಯ ನೌಕರರು ಜಿಲ್ಲೆಯಲ್ಲಿ ಕಡಿಮೆ ಇರುವುದರಿಂದ ಅಂಗನವಾಡಿ ನೌಕರರು ಸಮೀಕ್ಷಗೆ ಕೈಜೋಡಿಸಬೇಕು ಇಲ್ಲವಾದಲ್ಲಿ ನೌಕರರ ಮೇಲೆ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿಯಲ್ಲಿ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷರಾದ ಭಾರತಿ, ಯಶೋಧ ಕೆ, ಆಶಾಲತಾ, ಶಾಂತ, ಪ್ರೇಮ, ಪ್ರಮೀಳಾ ಉಡುಪಿ, ಜಯಲಕ್ಷ್ಮಿ, ಸರೋಜ, ಸರೋಜಿನಿ ಬ್ರಹ್ಮಾವರ ಇದ್ದರು. ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲಾ ಅಧ್ಯಕ್ಷ ಶಶಿಧರ ಗೊಲ್ಲ, ಜಿಲ್ಲಾ ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X