ಉಡುಪಿ | ಕೆಂಪು ಕಲ್ಲು ಮರಳು ಸಮಸ್ಯೆ ಧರಣಿ ಅಂತ್ಯ, ಆಗಸ್ಟ್ 30 ಜಂಟಿ ಸಭೆ ನಿಗದಿ

Date:

Advertisements

ಕಟ್ಟಡ ಕಾರ್ಮಿಕರಿಗೆ ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಆಗಸ್ಟ್ 18 ರಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಜಿಲ್ಲೆಯ ಸಾವಿರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್ ಬಳಿಯಿಂದ ಬ್ರಹತ್ ಮೆರವಣಿಗೆ ನಡೆಸಿದ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಚಲೋ ನಡೆಸಿ ಪ್ರತಿಭಟಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಮೆರವಣಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿ ಎರಡೂ ಗೇಟ್ ಗಳನ್ನು ಬಂದ್ ಮಾಡಲಾಗಿತ್ತು. ಅನಂತರ ಸಭೆಯಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯದ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಶಾಸಕರು ವಿಫಲರಾಗಿದ್ದಾರೆ. ಅಧಿಕಾರಿಗಳು ಕಠಿಣ ಕ್ರಮ ಜರುಗಿಸಿರುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ ಇದು ಬಡ ಕಾರ್ಮಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು.

1006799788

ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ರಟ್ಟೆಯ ಬಿಟ್ಟರೆ ಆಸ್ತಿಯೇ ಇಲ್ಲದ ಕಟ್ಟಡ ಕಾರ್ಮಿಕರು ರಟ್ಟೆ ನಂಬಿ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದಾರೆ ಆದರೆ ಜಿಲ್ಲಾಡಳಿತ ಕೆಲಸವನ್ನೇ ಕಸಿದುಕೊಂಡಿದೆ ಎಂದು ಹೇಳಿದರು.

Advertisements

ಪೋಲೀಸರು ಹೋರಾಟಗಾರರ ಮಧ್ಯೆ ಮಾತಿನ ಚಕಮಕಿ

ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಬರುತ್ತಿದ್ದಂತೆ ಪೋಲೀಸರು ಒಳಗೆ ಹೋಗುವುದನ್ನು ತಡೆಯಲು ಪ್ರಯತ್ನಿಸಿದರು ಆದರೆ ಹೋರಾಟಗಾರರು ಮುಂದಕೆ ಹೋದಾಗ ಗೇಟ್ ಬಂದ್ ಮಾಡಿಸಲಾಯಿತು ಈ ಮಧ್ಯೆ ಮಾತಿನ ಚಕಮಕಿ ನಡೆಯಿತು. ಅಪರ ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ಮನವಿ ಸ್ವೀಕರಿಸಲು ಮುಂದಾದರು ಆದರೆ ಪ್ರತಿಭಟನಾಕಾರರು ಕೇವಲ ಮನವಿ ಸ್ವೀಕರಿಸಿದರೆ ಸಾಲದು ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ಒತ್ತಾಯಿಸಿ ಜಂಟಿ ಸಭೆ ನಡೆಸಲು ಆಗ್ರಹಿಸಿದರು. ಲಿಖಿತ ಭರವಸೆ ನೀಡಬೇಕು ಎಂದರು.

1006798903

ಅಪರ ಜಿಲ್ಲಾಧಿಕಾರಿ ಅವರು ಆಗಸ್ಟ್ 30 ರಂದು ಜಂಟಿ ಸಭೆ ನಡೆಸಲು ಒಪ್ಪಿ ಲಿಖಿತ ಆದೇಶ ನೀಡಿದ ನಂತರ ಧರಣಿ ವಾಪಸ್ ಪಡೆಯಲಾಯಿತು. ಹೋರಾಟದಲ್ಲಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಷ್ ಚಂದ್ರ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ ಗೊಲ್ಲ, ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ್ ಪಡುಕೋಣೆ, ಕಾರ್ಯದರ್ಶಿ ರೊನಾಲ್ಡ್ ರಾಜೇಶ್ ಕ್ವಾಡ್ರಸ್,ಸಿಐಟಿಯು ಮುಖಂಡರಾದ ಎಚ್ ನರಸಿಂಹ ಚಂದ್ರಶೇಖರ ವಿ, ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್ ಕಾಂಚನ್, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಕೆ ಶಂಕರ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X