ಉಡುಪಿ | ಕಾರ್ಪೊರೇಟ್-ಕೋಮುವಾದ ಮೈತ್ರಿ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುತ್ತಿದೆ: ಸುರೇಶ್ ಕಲ್ಲಾಗರ

Date:

Advertisements

ಉಡುಪಿಯಲ್ಲಿ ಮೇ ದಿನಾಚರಣೆ ಕಾರ್ಪೊರೇಟ್-ಕೋಮುವಾದ ಮೈತ್ರಿಯಿಂದ ಕಾರ್ಮಿಕರನ್ನು ಬಂಡವಾಳಗಾರರ ಗುಲಾಮರಾಗಿ ಮಾಡಿ ಗುಲಾಮಗಿರಿಗೆ ತಳ್ಳುತ್ತಿದ್ದಾರೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಉಡುಪಿ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯಿಂದ ಹೊರಟ ಮೆರವಣಿಗೆ ಅಜ್ಜರಕಾಡು ಹುತಾತ್ಮ ಚೌಕದಲ್ಲಿ ನಡೆದ ಮೇ ದಿನಾಚರಣೆ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಜಾತಿ, ಮತ, ಧರ್ಮದ ಆಧಾರದಲ್ಲಿ ಕಾರ್ಮಿಕರನ್ನು ಎತ್ತಿ ಕಟ್ಟಿ ಕೋಮುವಾದದ ಅಡಿಯಾಳಾಗಿ ಮಾಡುವ ಬಿಜೆಪಿ ಅಪಾಯಕಾರಿ ನೀತಿಯ ವಿರುದ್ಧ ರೈತರು ಕಾರ್ಮಿಕರು ಕೂಲಿಕಾರರು ನೌಕರರು ಒಂದಾಗಿ ವರ್ಗ ಹೋರಾಟವನ್ನು ತೀವ್ರಗೊಳಿಸ ಬೇಕು ಎಂದರು.

Advertisements

ಕರೋನದ ಸಂಕಷ್ಟದ ದಿನಗಳಲ್ಲಿ ಕೇಂದ್ರ ಸರ್ಕಾರದ ಮಂತ್ರಿಮಂಡಲದಲ್ಲಿ 44 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ 4 ಸಂಹಿತೆ ತಂದು ಸೌಲಭ್ಯಗಳನ್ನು ಕಸಿದು ಕೊಳ್ಳಲಾಗಿದೆ ಎಂದರು.

ಕನಿಷ್ಠ ವೇತನ 31,000 ರೂ. ನೀಡಲು ಕಾರ್ಮಿಕ ವರ್ಗ ಹೋರಾಟ ನಡೆಸುತ್ತಿದ್ದಾರೆ ಆದರೆ ಮೋದಿಯವರು ತಳಮಟ್ಟದ ಕನಿಷ್ಠ ವೇತನ 178 ರೂ. ಕಾನೂನುಬದ್ಧ ಗೊಳಿಸಿರುವುದು ಕಾರ್ಮಿಕ ವರ್ಗದ ಬಗ್ಗೆ ಬಿಜೆಪಿ ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ಜನವಿರೋಧಿ ನೀತಿಗೆ ಸಾಕ್ಷಿಯಾಗಿದೆ ಎಂದರು.

ಪ್ರಗತಿಪರ ಚಿಂತಕರಾದ ಪ್ರೊಫೆಸರ್ ಫಣಿರಾಜ್ ಮೇ ದಿನಾಚರಣೆಗೆ ಸೌಹಾರ್ದ ಮಾತುಗಳನ್ನಾಡಿ, ಕಾರ್ಮಿಕರು ತಮ್ಮ ಹಕ್ಕುಗಳ ರಕ್ಷಣೆಗಾಗಿ ರಾಜಕೀಯ ಮಾಡಬೇಕಾಗಿದೆ ದೇಶದ ಸಂಪತ್ತು ಸ್ರಷ್ಠಿ ಮಾಡುವವರಿಗೆ ದೇಶದ ಸಂಪತ್ತು ಸಿಗಬೇಕಾಗಿದೆ ಅಂತಹ ಅರಿವು ಪಡೆದಾಗ ಕಾರ್ಮಿಕರು ಮೇ ದಿನದ ಮಹತ್ವ ಮೂಡಲು ಸಾಧ್ಯ ಎಂದು ಹೇಳಿದರು.

ಸಿಐಟಿಯು ಮುಖಂಡ ಶೇಖರ ಬಂಗೇರ ಮೇ ದಿನಾಚರಣೆ ಸಭೆಯ ಅಧ್ಯಕ್ಷತೆವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X