ಉಡುಪಿ | ‘ಡಿಸಿ ಮನ್ನಾ ಭೂಮಿ’ಯಲ್ಲಿ ಅಕ್ರಮ ಕಟ್ಟಡ ತೆರವಿಗೆ ದಸಂಸ ಆಗ್ರಹ

Date:

Advertisements

ದಲಿತರಿಗಾಗಿ ಮೀಸಲಿಟ್ಟ ‘ಶೋಷಿತ ವರ್ಗ (ಡಿಸಿ) ಮನ್ನಾ ಭೂಮಿ’ಯಲ್ಲಿ ವಿಶ್ವನಾಥ ಪೂಜಾರಿ ಎಂಬಾತ ಅಕ್ರಮವಾಗಿ ನಿರ್ಮಿಸುತ್ತಿರುವ ಅಂಗಡಿ ಮಳಿಗೆಯನ್ನು ತೆರವುಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕು ಪಡುಕುಡೂರು ಗ್ರಾಮದಲ್ಲಿ ಸರ್ವೆ ನಂ.74/2ರಲ್ಲಿರುವ ಡಿಸಿ ಮನ್ನಾ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಲಾಗಿದೆ ಎಂದು ದಸಂಸ ಆರೋಪಿಸಿದೆ.

“ಅಕ್ರಮ ಕಟ್ಟಡದ ವಿರುದ್ಧ ದಸಂಸ ದೂರು ದಾಖಲಿಸಿದ ಪರಿಣಾಮ ಕಟ್ಟಡ ತೆರವುಗೊಳಿಸುವಂತೆ ತಹಶೀಲ್ದಾರರು ಮಾರ್ಚ್‌ 2ರಂದು ಆದೇಶ ಹೊರಡಿಸಿದ್ದರು. ಆದರೆ, ಈವರೆಗೂ ಆಕ್ರಮ ಕಟ್ಟಡವನ್ನು ತೆರವುಗೊಳಿಸಿಲ್ಲ” ಎಂದು ಸಂಘಟನೆಯ ಜಿಲ್ಲಾ ಪ್ರಾಧಾನ ಸಂಚಾಲಕ ಸುಂದರ ಮಾಸ್ತರ್ ಆರೋಪಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ರಾಹುಲ್‌ ಗಾಂಧಿ ಅನರ್ಹತೆ ಹಿಂದೆ ಕೇಂದ್ರದ ಕೈವಾಡವಿದೆ: ಕಾಂಗ್ರೆಸ್ ಮುಖಂಡ

“ಅಕ್ರಮ ಕಟ್ಟಡವನ್ನು ಕೂಡಲೇ ತೆರವುಗೊಳಿಸದಿದ್ದಲ್ಲಿ ಹೆಬ್ರಿ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು” ಎಂದು ಅವರು ತಿಳಿಸಿದ್ದಾರೆ.

ಸಂಘಟನೆಯ ಜಿಲ್ಲಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಪರಮೇಶ್ವರ ಉಪ್ಪೂರು, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಮಂಜುನಾಥ್ ಬಾಳ್ಕುದ್ರು, ಶ್ಯಾಮಸುಂದರ್ ತೆಕ್ಕಟ್ಟೆ, ಅಣ್ಣಪ್ಪ ನಕ್ರೆ, ಶ್ರೀಧರ ಕುಂಜಿಬೆಟ್ಟು, ಹೆಬ್ರಿ ತಾಲೂಕು ಸಂಚಾಲಕ ದೇವು ಹೆಬ್ರಿ, ಕಾರ್ಕಳ ತಾಲೂಕು ಸಂಚಾಲಕ ರಾಘವ ಕುಕುಜೆ ಇದ್ದರು.

ಉಡುಪಿ ಮೀಡಿಯಾ ವಾಲಂಟಿಯರ್  ಶಾಮರಾಜ್ ಬಿರ್ತಿ ಮಾಹಿತಿ ಆಧರಿಸಿದ ವರದಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X