ಉಡುಪಿ | ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಡೆಂಘೀ ಜಾಗೃತಿ ಕಾರ್ಯಕ್ರಮ

Date:

Advertisements

ಹ್ಯೂಮಾನಿಟೇರಿಯನ್ ರಿಲೀಫ್ ಸೊಸೈಟಿ, ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆ ಹೂಡೆ ಇವರ ಜಂಟಿ ಆಶ್ರಯದಲ್ಲಿ ಇಂದು ಹೂಡೆಯ ಸಾಲಿಹಾತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಡೆಂಘೀ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಉಡುಪಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಾಣಾಧಿಕಾರಿ ಡಾ ಪ್ರಶಾಂತ್ ಭಟ್, “ಜಗತ್ತಿನಲ್ಲಿರುವ ಸೊಳ್ಳೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಪ್ರಭೇದಗಳಿವೆ. ಅದರಲ್ಲಿ ಎಲ್ಲ ಸೊಳ್ಳೆಗಳು ಕಡಿದರೆ ಡೆಂಘೀ ರೋಗ ಬರುವುದಿಲ್ಲ. ಅದರಲ್ಲಿ ಇರುವ ಒಂದು ಪ್ರಭೇದ ಈ ಡೆಂಘೀ ಸೊಳ್ಳೆ” ಎಂದು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

“ಡೆಂಘೀ ಸೊಳ್ಳೆ ಕಡಿದರೆ ಮಾತ್ರ ಡೆಂಘೀ ರೋಗ ಬರಲು ಸಾಧ್ಯವಿದೆ. ಈ ಸೊಳ್ಳೆಗಳು ನಿಂತ ನೀರಿನಲ್ಲಿ ವಾಸಿಸುತ್ತವೆ. ಹಾಗಾಗಿ, ನಮ್ಮ ಸುತ್ತಮುತ್ತಲೂ ನೀರು ನಿಲ್ಲದ ಹಾಗೇ ಶುಚಿತ್ವವನ್ನು ಕಾಪಾಡುವುದರಿಂದ ಈ ಡೆಂಘೀ ರೋಗದಿಂದ ದೂರವಾಗಬಹುದು” ಎಂದು ಹೇಳಿದರು.

Advertisements

ಇದನ್ನು ಓದಿದ್ದೀರಾ? ಶಿರೂರು ದುರಂತ | ಕಾಣೆಯಾದವರ ಪತ್ತೆ ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಸ್ಲಮ್ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಹೆಚ್ ಆರ್ ಎಸ್ ಜಿಲ್ಲಾಧ್ಯಕ್ಷರಾದ ಬಿಲಾಲ್ ಮಲ್ಪೆ, ಸಾಲಿಹಾತ್ ಸಮೂಹ ಸಂಸ್ಥೆಯ ಉಪಾಧ್ಯಕ್ಷ ಇದ್ರೀಸ್ ಹೂಡೆ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X