ಉಡುಪಿ | ಇಪ್ಪತ್ತು ವರ್ಷಗಳ ಬಳಿಕ, ಮನೆ ಸೇರಿದ ಹಿರಿಯ ಜೀವ.

Date:

Advertisements

ಕಳೆದ ಇಪ್ಪತ್ತು ವರ್ಷಗಳಿಂದ, ಮನೆಯವರ ಸಂಪರ್ಕಕ್ಕೆ ಸಿಗದೆ, ದೂರ ಉಳಿದುಕೊಂಡಿದ್ದ ವೃದ್ಧರನ್ನು ಮನೆ ಮಂದಿಗೆ ಹಸ್ತಾಂತರಿಸುವಲ್ಲಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ, ಹಾಗೂ ಹೊಸಬದುಕು ಆಶ್ರಮ, ಮತ್ತು‌ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರವು ಯಶಸ್ವಿಯಾಗಿದೆ.

ನಲವತ್ತು ದಿನಗಳ ಹಿಂದೆ, ಶ್ರೀಕೃಷ್ಣ ಮಠದ‌ ರಥಬೀದಿಯಲ್ಲಿ ವೃದ್ಧರೊಬ್ಬರು ಯಾತ್ರಿಕರಲ್ಲಿ ಭಿಕ್ಷೆ ಯಾಚಿಸುತ್ತಿರುವುದನ್ನು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡುವರು ಗಮನಿಸಿದ್ದರು. ವಿಚಾರಿಸಿದಾಗ ಜೀವನ‌‌‌ ನಿರ್ವಹಣೆಗೆ ಅಸಹಾಯಕತೆ ಎದುರಾಗಿರುವುದರಿಂದ, ಭಿಕ್ಷಾಟನೆಯಿಂದ ಜೀವನ ಸಾಗಿಸುತ್ತಿದ್ದನೆಂದು, ವೃದ್ಧರು ಒಳಕಾಡು ಅವರಲ್ಲಿ ಹೇಳಿಕೊಂಡರು. ಭಿಕ್ಷಾಟನೆ ಕಾನೂನು ಪ್ರಕಾರ ಅಪರಾಧವಾಗಿದೆ ಎಂದು ವೃದ್ಧರ ಮನವೊಲಿಸಿದ ಒಳಕಾಡುವರು, ಬಳಿಕ ಕೋರ್ಟ್ ರಸ್ತೆಯಲ್ಲಿರುವ ಹೊಸಬದುಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದರು.

ಆಶ್ರಮದ ಸಂಚಾಲಕ ವಿನಯಚಂದ್ರ ಅವರು, ಅದೇಷ್ಟೋ ದಿನಗಳಿಂದ ಸ್ನಾನಾದಿಗಳಿಂದ ದೂರ ಉಳಿದಿದ್ದ ವೃದ್ಧರನ್ನು ಶುಚಿಗೊಳಿಸಿ, ಪೌಷ್ಟಿಕ ಆಹಾರ ಒದಗಿಸಿ ಸಧೃಡವಾಗಿಸಿದರು. ಬಳಿಕ‌ ವೃದ್ಧರ ಪೂರ್ವಾಪರಗಳನ್ನು ಕಲೆ ಹಾಕಿದಾಗ, ವೃದ್ಧರು ಕುಂದಾಪುರ ಭಾಗದವರೆಂದು, ಹೆಸರು ನಾರಾಯಣ ಎಂದು ತಿಳಿದುಬಂದಿತು.‌ ಬಳಿಕ ಒಳಕಾಡುವರು ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಸಿಬ್ಬಂದಿಗಳ ನೆರವು ಪಡೆದು, ಅವರ ಮೂಲಕ ವೃದ್ಧರ ಸಂಬಂಧಿಕರನ್ನು ಆಶ್ರಮಕ್ಕೆ ಬರಮಾಡಿಸಿ ವೃದ್ಧರನ್ನು ಸಂಬಂಧಿಕರಿಗೆ ಒಪ್ಪಿಸಿದರು. ವೈಮನಸ್ಸಿನಿಂದಆಗಿ ವೃದ್ಧರು ಮನೆ ತ್ಯಜಿಸಿದ್ದರೆಂದು ತಿಳಿದುಬಂದಿತು. ಕಾರ್ಯಾಚರಣೆಯಲ್ಲಿ ಜಿಲ್ಲಾ ಯೋಜನಾ ಸಂಯೋಜಕಿ ಅಶ್ವಿನಿ, ಆಪ್ತ ಸಮಾಲೋಚಕ ರೋಶನ್ ಅಮೀನ್ ಭಾಗಿಯಾಗಿದ್ದರು.

Advertisements
ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X