ಉಡುಪಿ | ಪೋಕ್ಸೊ ವಿಶೇಷ ಸರಕಾರಿ ಅಭಿಯೋಜಕನ ವಿರುದ್ದ ಜಾತಿನಿಂದನೆ, ಪ್ರಕರಣ ದಾಖಲು

Date:

Advertisements

ಉಡುಪಿ ಪೋಕ್ಸೊ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ಸಹಿತ ಮೂವರು ಆರೋಪಿಗಳ ವಿರುದ್ದ ಅತ್ಯಾಚಾರ ಪ್ರಕರಣವೊಂದರ ಸಂತ್ರಸ್ತೆ ನೀಡಿದ ದೂರಿನಂತೆ ಉಡುಪಿ ಮಹಿಳಾ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರದ ಹಾವಂಜೆ ಗ್ರಾಮದ ಕೊಳಲಗಿರಿಯ ನಿವಾಸಿ ಸಂತ್ರಸ್ತ ಯುವತಿ ಹಾಗೂ ಸಂಜಯ್ ಕಳೆದ ಎರಡು ವರ್ಷದಿಂದ ಪ್ರೀತಿಸುತ್ತಿದ್ದರು. ಈ ಅವಧಿಯಲ್ಲಿ 2024ರ ಜು.11 ಹಾಗು ನ.17ರಂದು ಯುವತಿಯನ್ನು ತಿರುಗಾಡಲೆಂದು ಕರೆದುಕೊಂಡು ಹೋಗಿ, ಖಾಸಗಿ ಹೊಟೇಲಿನಲ್ಲಿ ರೂಮ್ ಮಾಡಿ, ದೈಹಿಕ ಸಂಪರ್ಕ ಬೆಳೆಸಿದ್ದನು. ಮದುವೆಯಾಗುವುದಾಗಿ ನಂಬಿಸಿ ಆತ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ನೀಡಿದ ದೂರಿನಂತೆ ಆರೋಪಿ ವಿರುದ್ಧ 2025ರ ಜೂ.30ರಂದು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿ ವೈ.ಟಿ.ರಾಘವೇಂದ್ರ ತನ್ನ ಕಚೇರಿಗೆ ಸಂತ್ರಸ್ತ ಯುವತಿಯನ್ನು ಕರೆಸಿ, ಸಂಜಯ್ ವಿರುದ್ಧ ದೂರು ಕೊಟ್ಟರೆ ಸರಿ ಇರುವುದಿಲ್ಲ, ನಿನ್ನ ವಿರುದ್ಧ ಉಡುಪಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಕೇಸ್ ಹಾಕುತ್ತೇನೆ ಎಂದು ಗದರಿಸಿದ್ದಾರೆ. ವೈಟಿ ರಾಘವೇಂದ್ರ ಹಾಗು ಮನೋಜ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ನೀಡಿ ನನ್ನನ್ನು ವಿಚಾರಣೆಗೆಂದು ಠಾಣೆಗೆ ಕರೆಯಿಸಿ ತೊಂದರೆ ಮಾಡಿದ್ದಾರೆ. ಇಬ್ಬರು ಸೇರಿಕೊಂಡು ಅತ್ಯಾಚಾರ ಪ್ರಕರಣದ ಆರೋಪಿ ಸಂಜಯ್ ತಲೆಮರೆಸಿಕೊಳ್ಳಲು ಸಹಾಯ ಮಾಡಿ, ಆತನ ವಿರುದ್ದ ದೂರು ದಾಖಲಿಸದಂತೆ ಒತ್ತಡ ಹಾಕಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.

Advertisements

2017ರಲ್ಲಿ ವೈ.ಟಿ.ರಾಘವೇಂದ್ರ ಅವರ ಉಡುಪಿ ನಗರದ ಕಚೇರಿಯಲ್ಲಿ ಯುವತಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಆತ ಆಕೆಗೆ ಕೀಳು ಜಾತಿಯವಳೆಂದು ನಿಂದನೆ ಮಾಡುತ್ತಿದ್ದರು. ಮನೆಯಿಂದ ನೀರು ತರಲು ತಿಳಿಸುತ್ತಿದ್ದು, ಊಟ ಮಾಡುವಾಗ ಕಚೇರಿಯ ಇತರ ಸಿಬ್ಬಂದಿಯವರನ್ನು ಹೊರತುಪಡಿಸಿ ತನ್ನನ್ನು ಮಾತ್ರ ಹೊರಗೆ ಕಳುಹಿಸುತ್ತಿದ್ದರು ಎಂದು 2025 ಜು.15 ರಂದು ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ವೈ.ಟಿ.ರಾಘವೇಂದ್ರ, ಮನೋಜ್ ಮತ್ತು ಸಂಜಯ್ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X