ಉಡುಪಿ | ನೀರಿಲ್ಲದೆ ಒಣಗುತ್ತಿವೆ ತೋಟಗಳು

Date:

Advertisements

ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜ್ಯದ ವಿವಿಧ ಭಾಗಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ, ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗದೆ, ನೀರಿಲ್ಲದೆ ಅಡಿಕೆ ಸೇರಿದಂತೆ ಧೀರ್ಘಕಾಲದ ಬೆಳೆಗಳು ಒಣಗಲಾರಂಭಿಸಿವೆ. ರೈತರು ಕಂಗಾಲಾಗಿದ್ದಾರೆ.

ಜಿಲ್ಲೆಯ ರೈತರು ಅಡಿಕೆ, ತೆಂಗು, ಬಾಳೆ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಆದರೆ, ನೀರಿಲ್ಲದ ಪರಿಣಾಮ ಬೆಳೆಗಳು ಒಣಗುತ್ತಿವೆ. ಸೀತಾನದಿ, ಎಣ್ಣೆಹೊಳೆಯ ನದಿ ಹಾಗೂ ಶಾಂಭವಿ ನದಿಗಳಲ್ಲಿ ನೀರಿಲ್ಲದಂತಾಗಿದೆ. ಬೋರ್‌ವೆಲ್, ಕೆರೆ-ಕಟ್ಟೆಗಳು ಒಣಗಿವೆ. ಸಮುದ್ರ ತೀರದಲ್ಲಿದ್ದರೂ, ಬೆಳೆಗಳಿಗೆ ಬೇಕಾದ ನೀರಿಲ್ಲದೆ ಮಳೆಗಾಗಿ ರೈತರು ಕಾದುಕುಳಿತಿದ್ದಾರೆ.

ಜಿಲ್ಲೆಯ ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಒಟ್ಟು 29,044 ಹೆಕ್ಟೆರ್ ಕೃಷಿ ಭೂಮಿಯಲ್ಲಿ 24,480 ಹೆಕ್ಟೆರ್ ಭೂಮಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಾಗುತ್ತಿದೆ. ಆದರೆ, ನೀರಿಲ್ಲದೆ ಬೇಸಿಗೆಯ ಬಿಸಿಲಿನಲ್ಲಿ ಅಡಿಕೆ, ತೆಂಗಿನ ಮರಗಳು ಒಣಗಲಾರಂಭಿಸಿವೆ. ಮರಗಳ ಗರಿಗಳು ಕಂದು ಬಣ್ಣಕ್ಕೆ ತಿರುಗಿವೆ. ಇಳುವರಿಯೂ ಕಡಿಮೆಯಾಗಿದ್ದು, ರೈತರು ನಷ್ಟದ ಸುಳಿಗೆ ಸಿಲುಕಿದ್ದಾರೆ.

Advertisements

ನೀರಿಗಾಗಿ ಸುಮಾರು 600 ರಿಂದ 700 ಅಡಿ ಕೊಳವೆಬಾವಿ ಕೊರೆಸಲಾಗುತ್ತಿದೆ. ಆದರೂ, ಹಲವೆಡೆ ನೀರು ಸಿಗುತ್ತಿಲ್ಲ. ಪರಿಣಾಮ ರೈತರು ಮತ್ತಷ್ಟು ಸಾಲಕ್ಕೆ ತುತ್ತಾಗುತ್ತಿದ್ದಾರೆ. ಕೊರೆಯಲಾಗುತ್ತಿರುವ ಕೊಳವೆಬಾವಿಗಳಿಲ್ಲಿ ಸರಾಸರಿ 50% ಕೊಳವೆಬಾವಿಗಳಲ್ಲಿ ನೀರು ಸಿಗುತ್ತಿಲ್ಲವೆಂದು ತಿಳಿದುಬಂದಿದೆ.

ಒಣಗಿಹೋಗಿರುವ ಬೆಳೆಗಳಿಗೆ ಪರಿಹಾರ ನೀಡಬೇಕೆಂದು ರೈತರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ತಮ್ಮ ಕಷ್ಟಗಳಿಗೆ ನೆರವು ನೀಡುವಂತೆ ಮನವಿ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X