ಉಡುಪಿ | ಹನೆಹಳ್ಳಿ ಶೂಟೌಟ್ ಪ್ರಕರಣ; ಸ್ಥಳ ಪರಿಶೀಲನೆ ನಡೆಸಿಸ ದಸಂಸ ನಿಯೋಗ

Date:

Advertisements

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಹನೆಹಳ್ಳಿ ದಲಿತ ಯುವಕ ಕೃಷ್ಣ ಹತ್ಯೆ ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ನಿಯೋಗ, ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್‌ರನ್ನು ಭೇಟಿ ಮಾಡಿ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

ಶೂಟೌಟ್ ನಡೆದ ಸ್ಥಳದ ನಿವಾಸಿಗಳು ಕೃತ್ಯದ ಬಗ್ಗೆ ಕೆಲವು ಮಾಹಿತಿ ನೀಡಿದರು. ಅಮಾಯಕ ದಲಿತ ಯುವಕನ ಅಮಾನವೀಯ ಶೂಟೌಟ್ ಹತ್ಯೆಯ ಬಗ್ಗೆ ಸ್ಥಳೀಯ ಜನರು ಖೇದ ಮತ್ತು ಆತಂಕ ವ್ಯಕ್ತಪಡಿಸಿದರು. ಈ ಕೊಲೆ ಪ್ರಕರಣ ತನಿಖಾಧಿಕಾರಿಗಳು ತನಿಖೆಯ ಪ್ರಗತಿ ಬಗ್ಗೆ ನಿಯೋಗಕ್ಕೆ ಮಾಹಿತಿ ನೀಡಿದರು.

ಪೊಲೀಸ್ ತನಿಖೆ ಇನ್ನೂ ಪರಿಣಾಮಕಾರಿಯಾಗಿ ನಡೆಸಬೇಕೆಂದೂ ಮತ್ತು ಕೃತ್ಯ ನಡೆಸಿದ ಆರೋಪಿತರ ಬಂಧನ ಶೀಘ್ರ ನಡೆಸಬೇಕೆಂದು ತನಿಖಾಧಿಕಾರಿಯವರಲ್ಲಿ ನಿಯೋಗವು ಆಗ್ರಹಿಸಿತು. ಮುಂದಿನ ದಿನಗಳಲ್ಲಿ ಸೂಕ್ತ ಹೋರಾಟ ರೂಪಿಸುವುದಾಗಿಯೂ ನಿಯೋಗ ಹೇಳಿದೆ.

Advertisements

ನಿಯೋಗದಲ್ಲಿ ದಲಿತ ಚಳವಳಿಯ ನಾಯಕರುಗಳಾದ ಸುಂದರ್ ಮಾಸ್ತರ್, ಶಾಮರಾಜ್ ಬಿರ್ತಿ, ಮಂಜುನಾಥ ಗಿಳಿಯಾರು, ವಿಶ್ವನಾಥ ಬೆಳ್ಳಂಪಳ್ಳಿ, ಶಾಮಸುಂದರ್ ತೆಕ್ಕಟ್ಟೆ, ಕೆ.ಸಿ.ರಾಜು ಬೆಟ್ಟಿನಮನೆ, ಶ್ರೀನಿವಾಸ ವಡ್ಡರ್ಸೆ, ಭಾಸ್ಕರ ಮಾಸ್ತರ್, ಕುಮಾರ್ ಕೋಟ, ಶಾಂತಿರಾಜ್ ಬಾರ್ಕುರ್, ಮಂಜುನಾಥ ಬಾಳ್ಕುದ್ರು, ಪ್ರಶಾಂತ್ ಬಿರ್ತಿ, ಕುಸುಮ ಮಂಜುನಾಥ್, ಗೋಪಾಲ್ ಕೊಡಂಕೂರ್ ಮತ್ತು ಹತ್ಯೆಗೊಳಗಾದ ಕೃಷ್ಣ ನ ಹಾಗೂ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X