‘ಸರ್ವರಿಗೂ ಸೂರು’ | ಮೂಲ ಸೌಕರ್ಯ ಇಲ್ಲದ ಮನೆಗಳ ಗೋಳು ಕೇಳುವವರಾರು?

Date:

Advertisements

ಸ್ವಂತ ಸೂರಿನ ಕನಸಿನೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲ ಸುರಿದು, ಸರ್ಕಾರ ನಿರ್ಮಿಸಿದ ಮನೆಗಳನ್ನು ಕಾದಿರಿಸಿರುವ 240 ಕುಟುಂಬಗಳು ಈಗ ಸಂಕಷ್ಟದ ಸರಮಾಲೆಯನ್ನೇ ಎದುರಿಸುತ್ತಿವೆ. ವಸ್ತುಶ: ಬೀದಿಗೆ ಬಿದ್ದಿವೆ. ಮನೆಗಳು ಹಂಚಿಕೆಯಾಗಿದ್ದರೂ, ಮೂಲ ಸೌಕರ್ಯವಿಲ್ಲದೆ, ಮನೆಗಳು ಹಸ್ತಾಂತರಗೊಳ್ಳದೆ ಬಾಡಿಗೆ ಮನೆಯಲ್ಲಿ ವಾಸುಸುತ್ತಿವೆ. ಅತ್ತ ಬ್ಯಾಂಕ್ ಸಾಲಕ್ಕೆ ಪ್ರತಿ ತಿಂಗಳು ಕಟ್ಟಬೇಕಾದ ಬಡ್ಡಿ, ಇತ್ತ ಇರುವ ಮನೆಗೆ ಬಾಡಿಗೆ ಕಟ್ಟಬೇಕಾದ ಅನಿವಾರ್ಯತೆ ಎದುರಿಸುತ್ತಿವೆ – ಇದು ಉಡುಪಿ ಜಿಲ್ಲೆಯ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಛಯದ ಫಲಾನುಭವಿಗಳು ಪಾಡು. ಅವರೆಲ್ಲರೂ ಉಡುಪಿ ನಗರ ಸಭೆಯ ಅಧಿಕಾರಿಗಳು ಮತ್ತು ಮಾಜಿ ಶಾಸಕರ ವಿರುದ್ಧ ಆಕ್ರೋಶಿತರಾಗಿದ್ದಾರೆ.

ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಉಡುಪಿ ಶಾಸಕರಾಗಿದ್ದಾಗ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ‘ಸರ್ವರಿಗೂ ಸೂರು ಕಾರ್ಯಕ್ರಮ’ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ G+3 ಮಾದರಿಯಲ್ಲಿ 460 ಮನೆಗಳನ್ನು ಒಳಗೊಂಡ ವಸತಿ ಸಮುಚ್ಛಯ ನಿರ್ಮಿಸಲಾಗಿತ್ತು. ಇದಕ್ಕೆ ಅರ್ಜಿ ಹಾಕಿ ಆಯ್ಕೆಯಾದ ಫಲಾನುಭವಿಗಳಿಗೆ ಮೊದಲ ಹಂತದಲ್ಲಿ 240 ಮನೆಗಳನ್ನು, ದ್ವಿತೀಯ ಹಂತದಲ್ಲಿ 106 ಮನೆಗಳನ್ನು ಚೀಟಿ ಎತ್ತುವ ಪ್ರಕ್ರಿಯೆ ಮೂಲಕ ಅಂದಿನ ಶಾಸಕರು ಫಲಾನುಭವಿಗಳಿಗೆ ಹಂಚಿಕೆ ಮಾಡಿ, ಹಕ್ಕು ಪತ್ರವನ್ನು ನೀಡಿದ್ದರು. ಆದರೆ, ಇದೀಗ ಹಕ್ಕುಪತ್ರ ಕೈ ಸೇರಿ ಐದು ತಿಂಗಳು ಕಳೆದರೂ ಸರ್ಕಾರಿ ವಸತಿ ಸಮುಚ್ಚಯಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿಲ್ಲ. ಮನೆಗಳು ದೊರೆತಿದ್ದರೂ, ಅಲ್ಲಿ ವಾಸಿಸಲಾಗದೆ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2023 10 18 at 8.27.51 AM

ಹೆರ್ಗ ಗ್ರಾಮದ ಸರ್ಕಾರಿ ನಿವೇಶನ ಸ್ಥಳದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸುಮಾರು 240 ಸುಸಜ್ಜಿತ ವಸತಿ ಸಮುಚ್ಛಯ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿ ವರ್ಷ 4 ಕಳೆದಿವೆ. ಆದರೂ ಅವುಗಳು ಪೂರ್ಣಗೊಂಡು ಇನ್ನೂ ಫಲಾನುಭವಿಗಳಿಗೆ ಹಸ್ತಾಂತರವಾಗಿಲ್ಲ. ಫಲಾನುಭವಿಗಳು ತಮ್ಮ ಪಾಲಿನ ಮಾರ್ಜಿನ್ ಹಣ 90,000 ರೂ.ವನ್ನು (ಪರಿಶಿಷ್ಟಜಾತಿ/ ಪಂಗಡದವರಿಗೆ 60,000ರೂ.) ಪಾಲು ಹಣವಾಗಿ ಸಂಬಂಧಪಟ್ಟ ಇಲಾಖೆಗೆ ಕಟ್ಟಿದ್ದಾರೆ. ಬ್ಯಾಂಕ್‌ನ ಸಹಾಯಧನದೊಂದಿಗೆ ಸಾಲ ಸೌಲಭ್ಯ ಪಡೆದು ವಸತಿ ಸಮುಚ್ಚಯ ಕಟ್ಟಡದ ಹಕ್ಕುಪತ್ರ ಪಡೆದಿದ್ದಾರೆ. ಆದರೂ, ವಸತಿ ಸಮುಚ್ಚಯದ ಪಲಾನುಭವಿಗಳು ಆ ಮನೆಗಳಲ್ಲಿ ವಾಸ ಮಾಡಲು ಮೂಲ ಸೌಕರ್ಯಗಳನ್ನು ಒದಗಿಸಲಾಗಿಲ್ಲ. ವಸತಿ ಸಮುಚ್ಛಯ ಅವ್ಯವಸ್ಥೆಗಳ ಆಗರವಾಗಿದೆ. ಸರ್ಕಾರಿ ವಸತಿ ಸಮುಚ್ಛಯದಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಪಕ್ಕಾ ಸಂಪರ್ಕ ರಸ್ತೆ, ದಾರಿದೀಪಗಳನ್ನು ಇನ್ನೂ ಅಳವಡಿಸಲಾಗಿಲ್ಲ. ಈ ಎಲ್ಲ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಉಡುಪಿ ನಗರಸಭೆಗೆ ಒತ್ತಾಯಿಸುತ್ತಿದ್ದಾರೆ.

Advertisements

ಈ ವರದಿ ಓದಿದ್ದೀರಾ?: ರಾಜ್ಯದ ಬರ ಪರಿಸ್ಥಿತಿಗೆ ಎಲ್‌ ನಿನೊ ಕಾರಣ? ಏನಿದು ‘ಎಲ್‌ ನಿನೊ’!

ಈ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಸಂದೇಶ್, “ಈಗಾಗಲೇ ಸಾಲ ಮಾಡಿ ಹಣವನ್ನು ಕಟ್ಟಿದ್ದೇನೆ. ಮನೆಯಲ್ಲಿ ಮೂಲ ಸೌಕರ್ಯ ಇಲ್ಲದೆ ಬಾಡಿಗೆ ಮನೆಯಲ್ಲಿ ಉಳಿಯುವ ಪರಿಸ್ಥಿತಿ ಎದುರಾಗಿದೆ. ಪ್ರತಿದಿನ ಮಾನಸಿಕವಾಗಿ ಕುಗ್ಗುತ್ತಿದ್ದೇನೆ. ಕಳೆದ ಬಾರಿ ನಿವೇಶನ ರಹಿತರ ಸಮಸ್ಯೆಗಳ ಪರಿಹಾರಕ್ಕಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜರುಗಿದ ಜನ ಸಂಪರ್ಕ ಸಭೆಯಲ್ಲಿ ಮನವಿ ಸಲ್ಲಿಸಿದ್ದರೂ ಈ ತನಕ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ” ಎಂದು ಹೇಳಿದರು.

WhatsApp Image 2023 10 18 at 8.28.38 AM

“ಇನ್ನೂ ಎರಡು ತಿಂಗಳ ಒಳಗಾಗಿ ಮೂಲ ಸೌಕರ್ಯ ಒದಗಿಸಿ ಕೊಡುವ ಬಗ್ಗೆ ಈಗಿನ ಶಾಸಕರು ಯಶ್ಪಾಲ್ ಸುವರ್ಣರವರು ಭರವಸೆ ಕೊಟ್ಟಿದ್ದಾರೆ. ಮುಂದೆ ಏನು ಮಾಡಬೇಕು ಎನ್ನುವ ಬಗ್ಗೆ ನಾವೇ ಒಂದು ಹೋರಾಟ ಸಮಿತಿ ಮಾಡಿದ್ದೇವೆ. ಅದರ ಮ‌ೂಲಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೇ ಸ್ವತಃ ಮನೆಗಾಗಿ ನೂರಾರು ಕನಸುಗಳು ಹೊತ್ತ ಬಡ ಮಾಧ್ಯಮ ವರ್ಗದ ಜನರಿಗೆ ಮನೆಯನ್ನು ಕೊಟ್ಟು ಮೂಲ ಸೌಕರ್ಯ ಒದಗಿಸದಿದ್ದರೆ ಆ ಮನೆಯಲ್ಲಿ ಜೀವನ ನಡೆಸುವುದಾದರೂ ಹೇಗೆ ? ಒಟ್ಟಿನಲ್ಲಿ ಹಾಲಿ ಶಾಸಕರು ಮಾತು ಕೊಟ್ಟಂತೆ ಡಿಸೆಂಬರ್ ಅಂತ್ಯದ ವರೆಗೆ ಮೂಲ ಸೌಕರ್ಯ ಒದಗಿ ಬಂದು ವಸತಿ ರಹಿತರಿಗೆ ಶಾಶ್ವತ ಪರಿಹಾರ ಸಿಗಬಹುದೇ ಎಂದು ಕಾದು ನೋಡಬೇಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X