ಉಡುಪಿ | ಇಂದ್ರಾಳಿಯ ರೈಲ್ವೆ ನಿಲ್ದಾಣದ ಮೇಲ್ಸೇತುವಿಗೆ, ಮೇಲ್ಛಾವಣೆ ಅಳವಡಿಸುವಂತೆ ಆಗ್ರಹ

Date:

Advertisements

ಉಡುಪಿ ಇಂದ್ರಾಳಿ ರೈಲು ನಿಲ್ದಾಣದಲ್ಲಿರುವ ಮೇಲ್ಸೇತುವೆಗೆ ಮೇಲ್ಛಾವಣೆ ವ್ಯವಸ್ಥೆಯಿಲ್ಲದೆ, ಪ್ರಯಾಣಿಕರು ಬಿಸಿಲು ಮತ್ತು ಮಳೆಯಿಂದ ರಕ್ಷಿಸಿಕೊಳ್ಳಲು ಅಸಹಾಯಕ ಪರಿಸ್ಥಿತಿ ಎದುರಾಗಿದೆ. ಜಿಲ್ಲಾಡಳಿತ, ಶಾಸಕರು, ಸಂಸದರು, ರೈಲ್ವೆ ಅಧಿಕಾರಿಗಳು ಸಮಸ್ಯೆಯನ್ನು ಗಮನಿಸಿ, ಮೇಲ್ಸೇತುವೆಗೆ ತುರ್ತಾಗಿ ಮಾಡಿನ ವ್ಯವಸ್ಥೆಗೊಳಿಸುವಂತೆ, ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ಕೆ.‌ ಬಾಲಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ದಿನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಕರು ಇಂದ್ರಾಳಿ ರೈಲು ನಿಲ್ದಾಣದ ಮೇಲ್ಸೇತುವೆಯನ್ನು ಸಂಚರಿಸಲು ಬಳಸುತ್ತಾರೆ. ಸೇತುವೆಗೆ ಮಾಡಿಲ್ಲದೆ ಸುಡು ಬಿಸಿಲಿನಲ್ಲಿ ನಡೆದು ಸಾಗಬೇಕಾಗಿದೆ. ಮಳೆಗಾಲದಲ್ಲಿ ನೆನೆದು ಪೂರ್ಣ ಒದ್ದೆಯಾಗ ಬೇಕಾಗುತ್ತದೆ.‌ ಒಮ್ಮೊಮ್ಮೆ ರೈಲು ನಿಲ್ದಾಣದಲ್ಲಿ ರೈಲಿನ ನಿಲುಗಡೆ ವೆತ್ಯಾಸ ಕಂಡು ಬಂದಾಗ, ನಿಲ್ದಾಣ ನಿಯಂತ್ರಕರ ಸೂಚನೆ ಮೆರೆಗೆ ಪ್ಲಾಟ್ ಫಾರ್ಮ್ ಬದಲಿಸ ಬೇಕಾದ ಅನಿವಾರ್ಯ ಪರಿಸ್ಥಿತಿಯನ್ನು ಪ್ರಯಾಣಿಕರು ಎದುರಿಸಬೇಕಾಗುತ್ತದೆ. ಆಯಾಯ ಕಾಲಮಾನದಲ್ಲಿ ಪ್ರಕಟವಾಗುವ ಮಳೆ, ಬಿಸಿಲಿನಲ್ಲಿಯೇ ಪ್ರಯಾಣಿಕರು ಸೇತುವೆಯಲ್ಲಿ ಸಾಗಬೇಕಾಗುತ್ತದೆ. ಚಿಕ್ಕ ಮಕ್ಕಳನ್ನು ಹೊತ್ತು ಸಾಗುವ ಮಾತೆಯರ, ಮತ್ತು ಕುಂಟುತ್ತ ನಡೆದು ಸಾಗುವ ಹಿರಿಯ ನಾಗರಿಕರ ಪರಿಸ್ಥಿತಿ ಅಯ್ಯೋಮಯ ಅನಿಸುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X