ಉಡುಪಿ | ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತೋಣ

Date:

Advertisements

ದೇಶದ ಉಜ್ವಲ ಭವಿಷ್ಯಕ್ಕಾಗಿ ಮಕ್ಕಳಲ್ಲಿ ಪರಿಸರ ಪ್ರೇಮ ಮತ್ತು ಉದಾತ್ತ ಮೌಲ್ಯಗಳನ್ನು ಬಿತ್ತಬೇಕು ಎಂದು ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ರೋಣ್ ಅವರು ಅಭಿಪ್ರಾಯಪಟ್ಟರು, ಅವರು ನಗರದಲ್ಲಿ ಸಿಐಓ ವತಿಯಿಂದ ಅಯೋಜಿಸಿದ್ದ “ಹ್ಯಾಂಡ್ಸ್ ಆನ್ ಸಾಯ್ಲ್, ಹಾರ್ಟ್ ವಿದ್ ಇಂಡಿಯಾ” – “ಕೈಯಲ್ಲಿ ಮಣ್ಣು-ಹೃದಯದಲ್ಲಿ ಭಾರತ” ಎಂಬ ರಾಷ್ಟ್ರೀಯ ಅಭಿಯಾನದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಒಂದು ತಿಂಗಳಿನಿAದ ರಾಷ್ಟ್ರಾದ್ಯಂತ ಚಿಲ್ಡ್ರನ್ಸ್ ಸರ್ಕಲ್ ಇಸ್ಲಾಮಿಕ್ ಆರ್ಗನೈಝೇಶನ್ (ಸಿಐಓ) ವತಿಯಿಂದ ಮಕ್ಕಳ ಮೂಲಕ ಪರಿಸರ ಜಾಗೃತಿ, ಪ್ರಕೃತಿ ಸಂರಕ್ಷಣೆಯ ಕುರಿತು ವೈವಿದ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಕ್ಕಳು ತಮ್ಮ ತಮ್ಮ ಪರಿಸರದಲ್ಲಿ, ಶಾಲಾ-ಕಾಲೇಜು, ಕಛೇರಿ ಪಾರ್ಕು, ಉದ್ಯಾನವನ, ಮಸೀದಿ, ಮದ್ರಸಾ, ಮಂದಿರ, ಚರ್ಚ್ ವೃದ್ಧಾಶ್ರಮಗಳ ವಠಾರದಲ್ಲಿ ತೆರಳಿ ಗಿಡ ನೆಡುವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ಭಾಷಣಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಪತ್ರಿಕಾಗೋಷ್ಠಿ, ರ‍್ಯಾಲಿಗಳ ಮೂಲಕ ಜಾಗೃತಿ ಮೂಡಿಸುವ ವೈವಿದ್ಯಮ ಕಾರ್ಯಕ್ರಮಗಳನ್ನು ಹಮಿಕೊಂಡಿದ್ದರು. ಉಡುಪಿ ಜಿಲ್ಲೆಯಲ್ಲೂ ಮಕ್ಕಳು ಸಕ್ರೀಯವಾಗಿ ಈ ಚಟುವಟಿಕೆಗಳಲ್ಲಿ ಪಾಲ್ಗೊಂಡರು ಮತ್ತು ಉಡುಪಿ ಜಿಲ್ಲೆಯಾದ್ಯಂತ 3,000ಕ್ಕೂ ಮಿಕ್ಕಿ ಗಿಡಗಳನ್ನು ನೆಡಲಾಯಿತು.

ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಿಐಓ ರಾಜ್ಯಘಟಕ ಸದಸ್ಯೆ ಮೆಹರುನ್ನಿಸಾ ಮಣಿಪಾಲ್, ಜಮಾಅತೆ ಇಸ್ಲಾಮೀ ಹಿಂದ್‌ನ ಉಡುಪಿ ನಗರ ಶಾಖೆಯ ಅಧ್ಯಕ್ಷ ನಿಸಾರ್ ಅಹಮದ್, ಮಹಿಳಾ ವಿಭಾಗದ ಅಧ್ಯಕ್ಷೆ ವಾಜಿದಾ ತಬಸ್ಸುಮ್ ಉಪಸ್ಥಿತರಿದ್ದರು. ನೂರ್‌ಜಹಾನ್ ಕಟಪಾಡಿ ಪ್ರಸ್ತಾವನೆಗೈದರು. ಶಮ್ಶಾದ್ ಹಸನ್ ನಿರೂಪಣೆಗೈದು ಕೊನೆಯಲ್ಲಿ ಧನ್ಯವಾದವಿತ್ತರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X