ಉಡುಪಿ | ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾದೀಶರ ವಿರುದ್ಧ ಸ್ವಯಂಪ್ರೇರಿತ ಕೇಸು ದಾಖಲಿಸಿ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

Date:

Advertisements

ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ. ಪೇಜಾವರ ಮಠಾದೀಶರು ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ ದೇಶದ ಸಂವಿಧಾನವನ್ನೇ ವಿರೋಧಿಸಿ ಮಾತಾಡಿದ್ದಾರೆ. ಇದು ಅತ್ಯಂತ ಕಳವಳಕಾರಿ ಬೆಳವಣಿಗೆಯಾಗಿದೆ. ಇದನ್ನು ಎಲ್ಲರೂ ಒಕ್ಕೊರಳಿನಿಂದ ಖಂಡಿಸಬೇಕು ಹಾಗು ದೇಶವಿರೋಧಿ, ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾಧೀಶರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಪದಾಧಿಕಾರಿಗಳ ಸಭೆಯು ಆಗ್ರಹಿಸಿದೆ.

‘ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು’ ಎಂದು ಹೇಳುವ ಮೂಲಕ ಪೇಜಾವರ ಮಠಾದೀಶರು ಏನು ಹೇಳಲು ಬಯಸುತ್ತಿದ್ದಾರೆ ಎಂದು ಸ್ಪಷ್ಟಪಡಿಸಬೇಕಾಗಿದೆ. ಈ ದೇಶಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಇಡೀ ವಿಶ್ವವೇ ಮಾದರಿ ಎಂದು ಗೌರವಿಸುವಂತಹ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಈ ದೇಶದ ಎಲ್ಲರೂ ಸಮಾನರು, ಎಲ್ಲರಿಗೂ ಸಮಾನ ಗೌರವ ಹಾಗೂ ಅವಕಾಶಗಳು ಸಿಗಬೇಕು ಅಲ್ಲದೆ ಪ್ರತಿಯೊಬ್ಬರಿಗೂ ಅವರವರ ನಂಬಿಕೆಗಳನ್ನು ಅನುಸರಿಸಿಕೊಂಡು ಹೋಗಲು ಅವಕಾಶವಿದೆ ಎಂದು ನಮ್ಮ ದೇಶದ ಸಂವಿಧಾನ ಹೇಳುತ್ತದೆ. ಆದರೆ ಪೇಜಾವರ ಮಠಾಧೀಶರಿಗೆ ಎಲ್ಲರಿಗೂ ಗೌರವ ಕೊಡುವ ಸಂವಿಧಾನ ಬೇಡವಾಗಿದೆ. ಸಮಾಜದ ಒಂದು ವರ್ಗವನ್ನು ಮಾತ್ರ ಉಳಿದ ಎಲ್ಲ ವರ್ಗಗಳು ಗೌರವಿಸುವ, ಹಾಗೂ ಉಳಿದೆಲ್ಲ ವರ್ಗಗಳು ಗುಲಾಮರಾಗಿಯೇ ಇರುವ ವ್ಯವಸ್ಥೆ ಹಾಗು ಸಂವಿಧಾನ ಬೇಕು ಎಂಬ ಧಾಟಿಯ ತೀರಾ ಅಮಾನವೀಯ ಬೇಡಿಕೆಯನ್ನು ಪೇಜಾವರ ಮಠಾದೀಶರು ಇಟ್ಟಿರುವುದು ಆಘಾತಕಾರಿಯಾಗಿದೆ.

ಸಮಾನತೆಯ ವಿರೋಧಿಗಳು ಆರಂಭದಿಂದಲೂ ಬಾಬಾ ಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಈ ದೇಶದ ಸಂವಿಧಾನವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಮನುಷ್ಯ ವಿರೋಧಿ, ಸ್ತ್ರೀ ವಿರೋಧಿ ಆಶಯಗಳಿಂದಲೇ ತುಂಬಿ ತುಳುಕುತ್ತಿರುವ ಮನುಸ್ಮೃತಿಯನ್ನೇ ಈ ದೇಶದ ಸಂವಿಧಾನವಾಗಿ ಮಾಡಬೇಕು ಎಂದು ಬಯಸುತ್ತಾರೆ. ಈಗ ಪೇಜಾವರ ಮಠಾದೀಶರು ಪರೋಕ್ಷವಾಗಿ ಅದನ್ನೇ ಹೇಳುತ್ತಿರುವ ಹಾಗೆ ಕಾಣುತ್ತಿದೆ. ಆಧ್ಯಾತ್ಮಿಕತೆಯ ಮಾರ್ಗದರ್ಶಕರಾಗಬೇಕಾದ ವ್ಯಕ್ತಿಯೊಬ್ಬರು ಇಂತಹ ಜನವಿರೋಧಿ, ದೇಶವಿರೋಧಿ ಹಾಗು ಸಂವಿಧಾನ ವಿರೋಧಿ ಮಾತುಗಳನ್ನಾಡುವುದು ಅತ್ಯಂತ ಖಂಡನೀಯವಾಗಿದೆ.

Advertisements

ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X