ಉಡುಪಿ | ಮೂಲಗೇಣಿ ಒಕ್ಕಲು ಸಮಸ್ಯೆ ಇನ್ನೂ ಜೀವಂತ – ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ

Date:

Advertisements

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲಗೇಣಿ ಒಕ್ಕಲುಗಳ ಸಮಸ್ಯೆ ಅತ್ಯಂತ ಐತಿಹಾಸಿಕವಾಗಿದ್ದು ಸ್ವಾತಂತ್ರ್ಯ ದೊರಕಿ ಏಳುವರೆ ದಶಕಗಳ ಅನಂತರವೂ ಜೀವಂತವಾಗಿ ಮುಂದುವರಿದಿರುವುದು ಅತ್ಯಂತ ಕಳವಳಕಾರಿ ಬೆಳವಣಿಗೆ. ಈ ರೀತಿಯ ಶೇೂಷಣೆ ನಿವಾರಿಸುವರೆ ರಾಜ್ಯ ಸರ್ಕಾರ 2011ರಲ್ಲಿ ಮೂಲಗೇಣಿದಾರರಿಗೆ ಭೂಮಿಯ ಸಂಪೂರ್ಣ ಒಡೆತನ ಖಾತ್ರಿ ಪಡಿಸುವ ಕಾಯಿದೆ ನಿರ್ಣಯಿಸಿ ರಾಷ್ಟ್ರಪತಿಗಳ ಅಂಕಿತವನ್ನು ಪಡೆದು ಅನುಷ್ಠಾನಗೊಳಿಸುವ ಸಂದರ್ಭದಲ್ಲಿ ಕೆಲವೊಂದು ಹಿತಾಸಕ್ತಿ ಮೂಲಿದಾರರು ಹೈಕೋರ್ಟ್ ಮೆಟ್ಟಿಲು ಹತ್ತಿದರು. ಇದರ ಪರಿಣಾಮವಾಗಿ ರಾಜ್ಯ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ಮೂಲಗೇಣಿದಾರರ ಬೇಡಿಕೆ ನ್ಯಾಯಯುತವಾಗಿದೆ ಎಂದು ತೀಪು೯ ನೀಡಿತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕಾರಣ ಇದೀಗ ತೀರ್ಪು ಬರುವ ಹಂತದಲ್ಲಿದ್ದು ಈ ನ್ಯಾಯ ಪಡೆಯುವಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಸರ್ವ ಮೂಲಗೇಣಿದಾರರು ಒಟ್ಟಾಗಿ ಧ್ವನಿ ಎತ್ತಿ ಹೇುಾರಾಟ ಮಾಡ ಬೇಕಾದ ಅನಿವಾರ್ಯತೆ ಇದೆ ಎಂದು ಸಂವಿಧಾನ ವಿಶ್ಲೇಷಕ ನಿವೃತ್ತ ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಅವರು ಮೂಲಗೇಣಿದಾರರ ಸಮಾವೇಶವನ್ನು ಉದ್ದೇಶಿಸಿ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.

ಅವರು ಉಡುಪಿ ಜಿಲ್ಲಾ ಬಳಕೆದಾರರ ವೇದಿಕೆಯ ಹೊರಗಿನ ಸಭಾಂಗಣದಲ್ಲಿ ನಡೆದ ಮೂಲ‌ಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಮಹಾಸಭೆ ಕಾರ್ಯಕ್ರಮದಲ್ಲಿ ‌ಮಾತನಾಡಿದರು. ಮಂಗಳೂರು ಮೂಲಗೇಣಿ ಒಕ್ಕಲು ವೇದಿಕೆಯ ಅಧ್ಯಕ್ಷರಾದ ಎಂ.ಕೆ.ಯಶೇೂಧರ್ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸಂದೇಶ್ ಪ್ರಭು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಮೂಲಗೇಣಿ ಹೇೂರಾಟದ ಪ್ರತಿಯೊಂದು ಅನುಭವಗಳನ್ನು ಸಭೆಯ ಮುಂದೆ ಎಳೆ ಎಳೆಯಾಗಿ ಹಂಚಿಕೊಂಡರು. ಸಮಾವೇಶದ ವೇದಿಕೆಯಲ್ಲಿ ಹಿರಿಯ ಪದಾಧಿಕಾರಿಗಳಾದ ಕ್ಯಾಪ್ಟನ್ ಹ್ಯುಗಸ್ ಮಂಗಳೂರು, ಕೇೂಶಾಧಿಕಾರಿ ಶಂಕರ್ ಪ್ರಭು ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ಸಂಘಟನಾ ಪ್ರತಿನಿಧಿ ಎಸ್.ಎಸ್.ಶೇಟ್ ಸಭಿಕರನ್ನು ವಂದಿಸಿದರು. ಉಡುಪಿ ಜಿಲ್ಲಾ ಏಳು ತಾಲೂಕಿನ ಮೂಲಗೇಣಿದಾರರು ಸಮಾರಂಭದಲ್ಲಿ ಉಪಸ್ಥಿತರಿದ್ದು ಸಂವಾದ ಕಾರ್ಯಕ್ರಮದಲ್ಲಿ ಭಾವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

Download Eedina App Android / iOS

X