ಉಡುಪಿ | ಕುಂದಾಪುರ ಸಿಪಿಎಂ 4ನೇ ಸಮ್ಮೇಳನ

Date:

Advertisements

ನವ ಉದಾರವಾದಿ ಆರ್ಥಿಕ ನೀತಿಗಳು ಈ ದೇಶದ ಸಾಮಾನ್ಯ ಜನತೆಯನ್ನು ಬಡತನಕ್ಕೆ ದೂಡಿದ್ದು, ಇದರ ಲಾಭಗಳನ್ನು ದೊಡ್ಡ ಬಂಡವಾಳಗಾರರು ಪಡೆಯುತ್ತಿದ್ದಾರೆ ಎಂದು ಸಿಪಿಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದರು.

ಕುಂದಾಪುರದ ಹೆಂಚು ಕಾರ್ಮಿಕರ ಭವನದಲ್ಲಿ ಭನುವಾರ ಕುಂದಾಪುರ ವಲಯ ಸಿಪಿಐ 4ನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಬಂಡವಾಳದಾರರು ಹೆಚ್ಚಿನ ಲಾಭ ಪಡೆಯುತ್ತಿರುವುದರಿಂದ ಸಂಪತ್ತಿನ ಅಸಮಾನ ಹಂಚಿಕೆ ತೀವ್ರ ಹೆಚ್ಚಳವಾಗುತ್ತಿರುವುದನ್ನು ಕಾಣಬಹುದಾಗಿದೆ” ಎಂದರು.

“ಬಹುರಾಷ್ಟ್ರೀಯ ಕಂಪೆನಿಗಳಲ್ಲಿ ದುಡಿಯುತ್ತಿರುವ ಕಾರ್ಮಿಕನ ವೇತನ ಹಾಗೂ ಕಾರ್ಮಿಕರನ್ನು ದುಡಿಸುವ ಮುಖ್ಯಸ್ಥರ ವೇತನಗಳಲ್ಲಿ ಇದೇ ಕಾರಣಕ್ಕೆ ಅಜಗಜಾಂತರ ವ್ಯತ್ಯಾಸಗಳಿವೆ ಎಂಬ ಅಂಶಗಳನ್ನು ಇತ್ತೀಚಿನ ವರದಿಗಳು ಹೇಳುತ್ತಿವೆ. ಈ ಅಸಮಾನತೆಗಳನ್ನು ಸಿಪಿಎಂ ವಿರೋಧಿಸುತ್ತದೆ. ಮಾತ್ರವಲ್ಲದೆ ಅಸಮಾತೆ ಕೊನೆಗಾಣಿಸುವರೆಗೆ ಸಿಪಿಎಂ ಪಕ್ಷ ನಿರಂತರ ಹೋರಾಟ ನಡೆಸುತ್ತದೆ” ಎಂದು ಹೇಳಿದರು.

Advertisements

ಸಮ್ಮೇಳನದಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುರೇಶ್ ಕಲ್ಲಾಗರ ಮುಖ್ಯ ಅತಿಥಿಯಾಗಿ ಮಾತನಾಡಿದರು. ಸಿಪಿಐ(ಎಂ) ಹಿರಿಯ ಮುಖಂಡ ವಿ ನರಸಿಂಹ ಧ್ವಜಾರೋಹಣ ನೆರವೇರಿಸಿದರು.

ಪಕ್ಷದ ಕಾರ್ಯದರ್ಶಿ ಎಚ್ ನರಸಿಂಹ ಮೂರು ವರ್ಷಗಳ ಕರಡು ವರದಿ ಮಂಡಿಸಿದರು. ವರದಿ ಮೇಲೆ ಪ್ರತಿನಿಧಿಗಳು ಚರ್ಚಿಸಿ ಅಂಗೀಕಾರ ಮಾಡಿದರು. ಶ್ರದ್ಧಾಂಜಲಿ ಠರಾವು ಗಣೇಶ್ ಮಂಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ʼದೂಡಾ ಕಚೇರಿʼ ಉದ್ಘಾಟನೆ; ಆಹ್ವಾನ ನೀಡದ ಆಯುಕ್ತರಿಗೆ ಶಾಸಕ ಬಿ ಪಿ ಹರೀಶ್ ತರಾಟೆ

ಸಮ್ಮೇಳನ ಕುಂದಾಪುರ ಸರ್ವತೋಮುಖ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲವು ನಿರ್ಣಯಗಳನ್ನು ಕೈಗೊಂಡಿತು. ಮುಂದಿನ ಮೂರು ವರ್ಷದ ಅವಧಿಗೆ ನೂತನ ತಾಲೂಕು ಸಮಿತಿಯನ್ನು ಸಮ್ಮೇಳನ ಆಯ್ಕೆ ಮಾಡಿತು. ನೂತನ ಸಮಿತಿಯು ಕುಂದಾಪುರ ತಾಲೂಕು ಸಮಿತಿಗೆ ಕಾರ್ಯದರ್ಶಿಯಾಗಿ ಚಂದ್ರಶೇಖರ ವಿ ಅವರನ್ನು ಆಯ್ಕೆ ಮಾಡಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X