ಉಡುಪಿ | ಮಹಾಲಕ್ಷ್ಮೀ ಬ್ಯಾಂಕ್ ವಂಚನೆ: ‘ತನಿಖೆಗೆ ಸಿದ್ಧ’ ಎಂದವರು ಕೋರ್ಟಿನಿಂದ ತಡೆ ತಂದಿದ್ದೇಕೆ; ರಮೇಶ್ ಕಾಂಚನ್

Date:

Advertisements

ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ತನ್ನ ಸುಸ್ತಿದಾರರು ಎಂದು ಪರಿಗಣಿಸಲ್ಪಟ್ಟವರು ನೀಡಿದ ದೂರಿನ ಮೇಲೆ ದಾಖಲಾಗಿರುವ ಎಫ್.ಐ.ಆರ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮೂಲಕ ತಡೆಯಾಜ್ಞೆ ತಂದಿಲ್ಲ ಎಂದಾದರೆ ಬ್ಯಾಂಕಿನ ಅಧ್ಯಕ್ಷರೇ ತಿಳಿಸಿರುವಂತೆ ನಿಷ್ಪಕ್ಷಪಾತವಾದ ತನಿಖೆಗೆ ಸಹಕರಿಸಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

ಮಲ್ಪೆ ಮಧ್ವರಾಜ್ ಅಂತಹ ಹಿರಿಯ ಚೇತನಗಳ ನೇತೃತ್ವದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯ ಮೊಗವೀರ ಮೀನುಗಾರ ಮುಖಂಡರು ಒಗ್ಗೂಡಿ ಉತ್ತಮ ಧ್ಯೇಯೋದ್ದೇಶಗಳನ್ನು ಇಟ್ಟುಕೊಂಡು ಅಂದು ಹುಟ್ಟು ಹಾಕಿದ ಮೀನುಗಾರರ ಸಮುದಾಯದ ಹೆಮ್ಮೆಯ ಬ್ಯಾಂಕ್ ಆಗಿದ್ದು, ಇದರ ವಿರುದ್ದ ಕೇಳಿ ಬಂದಿರುವ ಆರೋಪದಿಂದ ಸಮುದಾಯಕ್ಕೆ ನೋವು ತಂದಿದೆ. ಬ್ಯಾಂಕಿನ ವಿರುದ್ದ ಹಿಂದಿನಿಂದಲೂ ಹಲವಾರು ಆರೋಪಗಳು ಕೇಳಿಬಂದಿದ್ದು, ಇದರ ಕುರಿತು ಸ್ಪಷ್ಟನೆ ನೀಡುವಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಹಿಂದೆ ಬಿದ್ದಿರುವುದು ಸಾರ್ವಜನಿಕರಲ್ಲಿ ವಿವಿಧ ರೀತಿಯ ಅನುಮಾನಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿರುವ ಶಾಸಕರಾಗಿ, ಬ್ಯಾಂಕಿನ ಅಧ್ಯಕ್ಷರಾಗಿ ಗಂಭೀರ ಆರೋಪ ಬಂದಾಗ ಅದರ ವಿಚಾರದಲ್ಲಿ ಸೂಕ್ತ ರೀತಿಯ ಸ್ಪಷ್ಟನೆ ನೀಡದೇ ಕೇವಲ ಹಾರಿಕೆ ಉತ್ತರಗಳನ್ನೇ ನೀಡಿ ಕಾಲ ಹರಣ ಮಾಡುವ ಕೆಲಸವನ್ನು ಮಾಡಿರುವುದು ಹಲವಾರು ಸಂಶಯಗಳಿಗೆ ಕಾರಣವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

Advertisements

ಕಾಂಗ್ರೆಸ್ ಪಕ್ಷ ಕೂಡ ಇದನ್ನು ರಾಜಕೀಯಗೊಳಿಸಲು ಇಷ್ಟಪಡದೆ ಅನ್ಯಾಯವಾದವರಿಗೆ ಸೂಕ್ತ ನ್ಯಾಯ ಕೊಡಿಸುವಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಆಗ್ರಹಿಸುತ್ತಿದೆ. ಬ್ಯಾಂಕಿನ ಅಧ್ಯಕ್ಷರು ಹೇಳುವಂತೆ ಬ್ಯಾಂಕಿನಿಂದ ಸಾಲ ಪಡೆದವರು ಸುಸ್ತಿದಾರರೇ ಹೊರತು ಸಂತ್ರಸ್ಥರಲ್ಲ ಹಾಗಿದ್ದಲ್ಲಿ ಇಲ್ಲಿ ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವೇ? ಹಣದ ವಿಚಾರದಲ್ಲಿ ಸಾಲ ಪಡೆದವರು ಸುಳ್ಳು ಹೇಳಲು ಸಾಧ್ಯವೇ ಎಂಬ ಪ್ರಶ್ನೆ ಕೂಡ ಕಾಡುತ್ತದೆ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | ಅಂಗಾಂಗ ಸ್ಪರ್ಷಿಸಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಾಲೆಯ ಕಾಮುಕ ಮಾಲೀಕನ ಬಂಧನ

ಮಲ್ಪೆ ಶಾಖೆಯ ಅಂದಿನ ವ್ಯವಸ್ಥಾಪಕರು ತಮ್ಮ ಅವಧಿಯಲ್ಲಿ ಯಾವ ರೀತಿಯಲ್ಲಿ ಸಾಲ ನೀಡಿದ್ದಾರೆ ಎಂಬ ಕುರಿತು ಸ್ಪಷ್ಟ ಮಾಹಿತಿಯನ್ನು ಜನರಿಗೆ ನೀಡಬೇಕಾದ ಜವಾಬ್ದಾರಿ ಬ್ಯಾಂಕಿನ ಆಡಳಿತ ಮಂಡಳಿಯ ಮೇಲಿದೆ. ಒಂದು ವೇಳೆ ಸಾಲ ಪಡೆದುಕೊಂಡವರು ಸುಳ್ಳು ಹೇಳುತ್ತಿದ್ದರೆ ಅವರ ವಿರುದ್ಧವೂ ಕೂಡ ತನಿಖೆಯಾಗಲಿ ಇಲ್ಲವಾದರೆ ಬ್ಯಾಂಕಿನಿಂದ ಮೋಸವಾಗಿರುವುದು ಕೂಡ ಸತ್ಯವಾದರೇ ತಾವೂ ಕೂಡ ತನಿಖೆಗೆ ಸಿದ್ದವಿರುವುದಾಗಿ ಬ್ಯಾಂಕಿನ ಅಧ್ಯಕ್ಷರೇ ಘೋಷಿಸಿದ್ದು ಈ ಬಗ್ಗೆ ಸೂಕ್ತ ನಿರ್ಧಾರವನ್ನು ಸಮಾಜದ ಮುಖಂಡರೆನಿಸಿದವರು ಹಾಗೂ ಸರ್ಕಾರ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಅಮಾಯಕರು ಕೂಡ ತೊಂದರೆ ಅನುಭವಿಸಬಾರದು ಈ ನಿಟ್ಟಿನಲ್ಲಿ ಸರ್ಕಾರ ಮಧ್ಯಪ್ರವೇಶಿಸಬೇಕಾದ ಅವಶ್ಯಕತೆ ಇದೆ. ಇದಕ್ಕೆ ಬ್ಯಾಂಕಿನ ಅಧ್ಯಕ್ಷರು ಹಾಗೂ ಉಡುಪಿ ಶಾಸಕರಾಗಿರುವ ಯಶ್ಪಾಲ್ ಸುವರ್ಣ ಅವರೂ ಕೂಡ ಸಹಕಾರ ನೀಡುವ ಮೂಲಕ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿ ನೊಂದವರಿಗೆ ನ್ಯಾಯ ಒದಗಿಸಬೇಕು. ಈ ನಿಟ್ಟಿನಲ್ಲಿ ಬ್ಯಾಂಕಿನ ವಿರುದ್ದ ಇರುವ ದೂರುಗಳಿಗೆ ತಂದಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಆಡಳಿತ ಮಂಡಳಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಮತ್ತು ನಿಷ್ಪಕ್ಷಪಾತವಾದ ತನಿಖೆಗೆ ಸಹಕರಿಸುವ ಮೂಲಕ ದೇಶಕ್ಕೆ ಮಾದರಿಯಾಗಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ವ್ಯವಸ್ಥೆಯ ಮೇಲೆ ಜನರಿಟ್ಟಿರುವ ನಂಬಿಕೆಗೆ ಘಾಸಿಯಾಗದಂತೆ ಎಚ್ಚರ ವಹಿಸಬೇಕೆಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X