ಉಡುಪಿ | ನಗರಸಭೆ ನಿಯಮ ಉಲ್ಲಂಘಿಸಿದ್ದಲ್ಲಿ ಪರವಾನಿಗೆ ರದ್ದು

Date:

Advertisements

ನಗರಸಭಾ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು ಹಾಗೂ ಗೂಡಂಗಡಿಗಳ ಮಾಲೀಕರು ತಮಗೆ ಸೂಚಿಸಿದ ಸೀಮಿತ ವಾಪ್ತಿಯನ್ನು ಹೊರತು ಪಡಿಸಿ ಅನಧಿಕೃತವಾಗಿ ಹೆಚ್ಚುವರಿ ಪ್ರದೇಶವನ್ನು ವಿಸ್ತರಣೆ ಮಾಡಿ ಬಳಸಿಕೊಳ್ಳುವಂತಿಲ್ಲ. ಎಲ್ಲಾ ಗೂಡಂಗಡಿಗಳಲ್ಲಿ ಕಡ್ಡಾಯವಾಗಿ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೂಡಂಗಡಿಗಳು ಸಾರ್ವಜನಿಕರಿಗೆ, ವಾಹನ ಚಾಲಕರಿಗೆ ತೊಂದರೆ ನೀಡುವಂತಿರಬಾರದು, ಫಾಸ್ಟ್ ಫುಡ್ ಅಥವಾ ರಸ್ತೆ ಬದಿಗಳಲ್ಲಿ ಗೂಡಂಗಡಿಗಳ ಮೂಲಕ ಹೋಟೆಲ್ ನಡೆಸುವವರು ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು “ಆಹಾರ ಗುಣಮಟ್ಟತೆ ಮತ್ತು ಸುರಕ್ಷತಾ ಇಲಾಖೆ”ಯಿಂದ ಪರವಾನಿಗೆ ಪಡೆದಿರಬೇಕು ಹಾಗೂ ಯಾವುದೇ ಗೂಡಂಗಡಿಗಳಲ್ಲಿ ತಂಬಾಕು ಮತ್ತು ಇತರ ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ.

ಬೀದಿ ಬದಿಯಲ್ಲಿ ವ್ಯಾಪಾರಸ್ತರು ಹಾಗೂ ಗೂಡಂಗಡಿ ಮಾಲೀಕರು ನಗರಸಭೆ ಸೂಚಿಸಿರುವ ನಿಯಮವನ್ನು ಪಾಲಿಸದೇ ಇದ್ದಲ್ಲಿ ಅಂತಹ ಗೂಡಂಗಡಿ ಮಾಲೀಕರಿಗೆ 5000 ರೂ. ದಂಡ ವಿಧಿಸಿ, ಗೂಡಂಗಡಿಯನ್ನು ತೆರವುಗೊಳಿಸಿ ಪರವಾನಿಗೆ ರದ್ದುಪಡಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

Download Eedina App Android / iOS

X