ಉಡುಪಿ | ನಗರಸಭೆ ವತಿಯಿಂದ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ

Date:

Advertisements

ಉಡುಪಿ ನಗರಸಭಾ ವತಿಯಿಂದ ಪೌರಕಾರ್ಮಿಕರುಗಳಿಗೆ ಮಾಸ್ಟರ್ ಆರೋಗ್ಯ ತಪಾಸಣಾ ಶಿಬಿರವು ಇಂದು ನಗರದ ಸಿಟಿ ಆಸ್ಪತ್ರೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿ, ನಗರಸಭೆ ವತಿಯಿಂದ ಆಯೋಜಿಸಿರುವ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನವನ್ನು ಎಲ್ಲಾ ಪೌರಕಾರ್ಮಿಕರು ಪಡೆದುಕೊಳ್ಳುವುದರೊಂದಿಗೆ ಆರೋಗ್ಯವಂತರಾಗಿ ಗೈರು ಹಾಜರಿ ಇಲ್ಲದೇ ಕರ್ತವ್ಯ ನಿರ್ವಹಿಸಲು ಕರೆ ನೀಡಿದರು.

ಕೊಡವೂರು ವಾರ್ಡ್ನ ನಗರಸಭಾ ಸದಸ್ಯ ವಿಜಯ ಕೊಡವೂರು ಮಾತನಾಡಿ, ಪೌರಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಉಡುಪಿ ನಗರಸಭೆಯು ಪೌರಕಾರ್ಮಿಕರ ಮಾಸ್ಟರ್ ಹೆಲ್ತ್ ಚೆಕಪ್ ಅನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದ್ದು, ನಗರದ ಸ್ವಚ್ಛತಾ ಕಾರ್ಯದ ಹಿತದೃಷ್ಟಿಯ ಜೊತೆಗೆ ಪೌರಕಾರ್ಮಿಕರ ಆರೋಗ್ಯವನ್ನೂ ಸಹ ಪರಿಗಣಿಸಲಾಗಿರುತ್ತದೆ ಎಂದು ತಿಳಿಸಿದರು.

Advertisements

ಸಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವೆಂಕಟೇಶ್ ಶಾನುಭಾಗ್ ಮಾಸ್ಟರ್ ಆರೋಗ್ಯ ತಪಾಸಣಾ ಶಿಬಿರದಲ್ಲಿನ ಸಂಪೂರ್ಣ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ನಗರಸಭೆಯ ಸದಸ್ಯರುಗಳಾದ ರಶ್ಮಿ ಭಟ್, ಟಿ.ಜಿ ಹೆಗ್ಡೆ, ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಿಶ್ವನಾಥ ಶಾನುಭಾಗ್, ನಗರಸಭೆಯ ಕಿರಿಯ ಆರೋಗ್ಯ ನಿರೀಕ್ಷಕರಾದ ಸುರೇಂದ್ರ ಹೋಬಳಿದಾರ್, ಹರೀಶ್ ಬಿಲ್ಲವ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶ್ ಪ್ರಭು ನಿರೂಪಿಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X