ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ನವೆಂಬರ್ 10 ರಂದು ಉಡುಪಿಯಲ್ಲಿ ಭೀಮಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸಂಘಟನೆಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಈ ಸಮಾವೇಶ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ.ಸಿದ್ಧಲಿಂಗಪ್ಪ, ರಾಜ್ಯದ ಲೇಖ ಸಂಚಾಲಕ ಗ.ನ.ಅಶ್ವಥ್, ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್, ರಾಜ್ಯ ಸಮಿತಿ ಸದಸ್ಯ ಮಲ್ಲೆಚ್ ಅಂಬುಗ, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಬಿ.ಕೆ. ವಸಂತ್ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಜಿಲ್ಲೆಯ ಹಿರಿಯ ದಸಂಸ ನಾಯಕರಾದ ಕರುಣಾಕರ ಮಾಸ್ತರ್ ಮಲ್ಪೆ, ವಿಠ್ಠಲ್ ದಾಸ್ ಬನ್ನಂಜೆ, ಎಸ್.ಎಸ್. ಪ್ರಸಾದ್, ಹೂವಪ್ಪ ಮಾಸ್ತರ್ ಕಾರ್ಕಳ, ಡಾ ಪ್ರೇಮದಾಸ್ ಸಮಾವೇಶದಲ್ಲಿ ಉಪಸ್ಥಿತರಿರಲಿದ್ದಾರೆ.
ಮಹಿಳಾ ಒಕ್ಕೂಟದ ವಸಂತಿ ಶಿವಾನಂದ್, ಗೀತಾ ಸುರೇಶ್ ಕುಮಾರ್ ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತಿ ಇರಲಿದ್ದು, ಡಾ ಗಣೇಶ್ ಗಂಗೊಳ್ಳಿ, ಶಂಕರ್ ದಾಸ್ ಚೆಂಡ್ಕಳ, ರವಿ ಬನ್ನಾಡಿ ಕ್ರಾಂತಿಗೀತೆ ಪ್ರಸ್ತುತಪಡಿಸಲಿದ್ದಾರೆ.
ಇದನ್ನು ಓದಿದ್ದೀರಾ? ಕೋವಿಡ್ ಹಗರಣ | ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು
ಜಿಲ್ಲೆಯ ಪ್ರಗತಿಪರರು, ಸಾಮಾಜಿಕ ಹೋರಾಟಗಾರರು ಮತ್ತು ಸಂಘಟನೆಯ ಸಾವಿರಾರು ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಆದಿ ಉಡುಪಿ ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ ಗಂಟೆ 10-00 ರಿಂದ ಆರಂಭ ಆಗುವ ಈ ಸಮಾವೇಶದಲ್ಲಿ ಉಡುಪಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕೂಡ ನಡೆಯಲಿದೆ ಎಂದು ಸಂಘಟನೆಯ ಮುಖಂಡರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
