ಉಡುಪಿ | ಅ.15ರಂದು ಮಹಿಷ ದಸರಾ

Date:

Advertisements

ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರ ಮಹಾರಾಜರ ಕುರಿತು ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಅಕ್ಟೋಬರ್ 15ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್ ಕೋಟ್ಯಾನ್ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. “ಪೂರ್ವಾಗ್ರಹ ಪೀಡಿತ ಹಿಂದೂ ಧರ್ಮಾಂಧರು ಮಹಿಷಾಸುರ ಒಬ್ಬ ದುಷ್ಟ, ನೀಚ, ಪ್ರಜಾಕಂಟಕ, ನರಭಕ್ಷಕ ಇತ್ಯಾದಿಯಾಗಿ ಆತನನ್ನು ಒಬ್ಬ ವಿಲನ್ ಎಂಬಂತೆ ಚಿತ್ರಿಸಿರುವುದನ್ನು ಕಾಣುತ್ತೇವೆ. ಆದರೆ ಮಹಿಷಾಸುರ ಈ ದೇಶದ ಅಸುರ ಸಾಮ್ರಾಜ್ಯದ ನಾಯಕರಲ್ಲಿ ಅಗ್ರಗಣ್ಯನಾಗಿದ್ದವರು. ಆರ್ಯ ಮತ್ತು ಬುದ್ಧಪೂರ್ವ ಪ್ರಾಗೈತಿಹಾಸ ಯುಗದ ಚಕ್ರೇಶ್ವರ, ಮೈಸೂರಿನ ಹುಟ್ಟಿಗೆ ಕಾರಣನಾದವರು. ಪ್ರಾಚೀನ ಮಹಿಷಾಮಂಡಲದ ದೊರೆಯಾಗಿದ್ದವರು” ಎಂದರು.

“ಬಹುಜನರ ಭಾಗ್ಯವಿಧಾತ, ಬೌದ್ಧರ ನೈಜ ಇತಿಹಾಸವನ್ನು, ಮಹಿಷ ಪರಂಪರೆಯನ್ನು ಸುಸ್ಥಿರಗೊಳಿಸುವ ನಿಟ್ಟಿನಲ್ಲಿ ಮತ್ತು ವೈದಕ ಸಂಸ್ಕೃತಿಗೆ ಪರ್ಯಾಯವಾಗಿ ಪ್ರತಿಸಂಸ್ಕೃತಿ ಸೃಷ್ಟಿಸುವ ಸಲುವಾಗಿ ಅಂಬೇಡ್ಕರ್ ಯುವ ಸೇನೆ ಆಯೋಜಿಸಿರುವ ಮಹಿಷ ದಸರಾ ಸಾರ್ವಕಾಲಿಕ ಮಹತ್ವ ಹೊಂದಲಿದೆ” ಎಂದು ಜನಪರ ಹೋರಾಟಗಾರ ಹಾಗೂ ದಲಿತ ಚಿಂತಕ ಜಯನ್ ಮಲ್ಪೆ ತಿಳಿಸಿದರು.

Advertisements

“ಅ.15ರಂದು ಬೆಳಗ್ಗೆ 10:30ಕ್ಕೆ ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದಿಂದ ವಿವಿಧ ವಾಹನಗಳ ಜಾಥಾದೊಂದಿಗೆ ಮಹಿಷ ರಾಜನ ಟ್ಯಾಬ್ಲೊ ಮೆರವಣಿಗೆ ಹೊರಟು ಜೋಡುಮಾರ್ಗವಾಗಿ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಲಿದೆ. ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಂಬೇಡ್ಕರ್ ಯುವ ಸೇನೆಯ ದಯಾನಂದ ಕಪ್ಪಟ್ಟು, ಲೋಕೇಶ್ ಪಡುಬಿದ್ರಿ, ಸಂಜೀವ ಬಳ್ಳೂರು, ಗಣೇಶ ನೆರ್ಗಿ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X