ಉಡುಪಿ | ತನ್ನದೇ ಬಸ್ಸಿನಡಿ ಸಿಲುಕಿ ಮಾಲೀಕ ಸಾವು

Date:

Advertisements

ತನ್ನದೇ ಮಾಲೀಕತ್ವದ ಬಸ್‌ ಕೆಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ.

ಮಣಿಪಾಲದ ಮಾಂಡವಿ ಖಾಸಗಿ ಬಸ್ ಮಾಲೀಕ ದಯಾನಂದ ಶೆಟ್ಟಿ(65) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಉಡುಪಿ ಜಿಲ್ಲೆಯಲ್ಲಿ ಮಾಂಡವಿ ಸಂಸ್ಥೆ ಸುಮಾರು ವರ್ಷಗಳಿಂದ ಬಸ್‌ ಸೇವೆ ನೀಡುತ್ತಿದ್ದು, ಇತ್ತೀಚಿಗೆ ಒಂದು ಬಸ್‌ ಕೆಟ್ಟು ನಿಂತಿತ್ತು. ಈ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ಬಸ್‌ವೊಂದನ್ನು ಮಣಿಪಾಲದ ಬಡಗಬೆಟ್ಟುವಿನ ಗ್ಯಾರೇಜ್‌ವೊಂದಕ್ಕೆ ರಿಪೇರಿಗೆ ಬಿಟ್ಟಿದ್ದರು. ಬಸ್‌ ರಿಪೇರಿಗೆ ನೀಡಿ ದಿನ ಕಳೆದ ಹಿನ್ನೆಲೆಯಲ್ಲಿ ದಯಾನಂದ ಶೆಟ್ಟಿ ಮಾರ್ಚ್ 13ರಂದು ಬಸ್‌ ನೋಡಲೆಂದು ಗ್ಯಾರೇಜ್‌ಗೆ ತೆರಳಿದ್ದರು. ಈ ವೇಳೆ ಚಾಲಕ ಏಕಾಏಕಿ ಬಸ್‌ ಚಲಾಯಿಸಿದ್ದರಿಂದ ಬಸ್‌ ಎದುರು ನಿಂತಿದ್ದ ದಯಾನಂದ ಶೆಟ್ಟಿ ಬಸ್ ಚಕ್ರದಡಿಗೆ ಸಿಲುಕಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಬಿರು ಬೇಸಿಗೆಗೆ ಜನ ಕಂಗಾಲು; ಕೊಡಗಿನಲ್ಲಿ ಮಳೆಯ ಸಿಂಚನ

ದುರ್ಘಟನೆ ಸಂಭವಿಸುತ್ತಿದ್ದಂತೆ ಸ್ಥಳದಲ್ಲಿದ್ದವರು ಕೂಡಲೇ ಬಸ್‌ ಚಕ್ರದ ಕೆಳಗೆ ಸಿಲುಕಿದ್ದ, ದಯಾನಂದ ಶೆಟ್ಟಿ ಅವರನ್ನು ಹೊರ ತೆಗೆದಿದ್ದಾರೆ. ಬಳಿಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಯಾನಂದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ.  ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದ ಕಾರಣ ದಯಾನಂದ ಶೆಟ್ಟಿ ಮಣಿಪಾಲ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X