ಉಡುಪಿ | ರೈಲು ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Date:

Advertisements

ಉಡುಪಿ ಜಿಲ್ಲೆಯ ಇಂದ್ರಾಳಿಯ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕನೋರ್ವ ಜಿಲ್ಲಾಸ್ಪತ್ರೆಗೆ ಸಾಗಿಸಿದ ಬಳಿಕ, ಸಾವನ್ನಪ್ಪಿರುವುದು ವೈದ್ಯರ ಪರೀಕ್ಷೆಯಿಂದ ದೃಢಪಟ್ಟಿದೆ.

ಈ ಘಟನೆಯು ಶುಕ್ರವಾರ ನಡೆದಿದ್ದು, ಮೃತದೇಹವನ್ನು ಅಜ್ಜರಕಾಡಿನ ಜಿಲ್ಲಾಸ್ಪತ್ರೆಯ ಶವ ರಕ್ಷಣಾ ಕೇಂದ್ರದಲ್ಲಿ ಇಡಲಾಗಿದೆ. ಮೃತ ವ್ಯಕ್ತಿಯ ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಪೊಲೀಸರು ಸೂಚನೆ ನೀಡಿದ್ದಾರೆ.

ಬೆಂಗಳೂರಿನಿಂದ ಕಾರವಾರ ತೆರಳುವ ರೈಲು ಫ್ಲಾಟ್ ಫಾರ್ಮ್ ಸಂಖ್ಯೆ ಒಂದರಲ್ಲಿ ನಿಲುಗಡೆ ಪಡೆದಿತ್ತು. ಸ್ಥಳ ಸಂಖ್ಯೆ 23 ರಲ್ಲಿದ್ದ ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಡಾ. ಸ್ಟಿವನ್ ಜಾರ್ಜ್ ಎಂಬುವವರು ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಉಡುಪಿಯ ಸಮಾಜ ಸೇವಕ ನಿತ್ಯಾನಂದ ಒಳಕಾಡುವರ ನೆರವು ಪಡೆದಿದ್ದರು.

Advertisements
blur

ರೈಲ್ವೆ ಇನ್ಸ್‌ಪೆಕ್ಟರ್ ಮಧುಸೂಧನ್ ಸಮಕ್ಷಮದಲ್ಲಿ ಸಮಾಜ ಸೇವಕ ನಿತ್ಯಾನಂದ ಅವರು, ಯೋಗಿಶ್, ಗಣೇಶ್, ಮಂಜುನಾಥ, ಶ್ರೀಲತಾ ಅವರ ಸಹಕಾರದಿಂದ ಬೋಗಿಯೊಳಗಿನಿಂದ ವ್ಯಕ್ತಿಯನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ಸಾಗಿಸಿದರು. ಪರೀಕ್ಷಿಸಿದ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದು ದೃಢೀಕರಿಸಿದ್ದಾರೆ.

ಇದನ್ನು ಓದಿದ್ದೀರಾ? ಕೊಪ್ಪಳ | ಮರಕುಂಬಿ ಪ್ರಕರಣ; ಜೀವಾವಧಿ ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಓರ್ವ ಅಪರಾಧಿ ಸಾವು

ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ. ಸಾವಿಗೆ ಕಾರಣ ತಿಳಿದುಬಂದಿಲ್ಲ. ವೈದ್ಯಕೀಯ ಮರಣೋತ್ತರ ಪರೀಕ್ಷೆಯಿಂದ ಇನ್ನಷ್ಟೆ ತಿಳಿಯಬೇಕಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X