ಉಡುಪಿ | ಕಾನೂನುಬಾಹಿರ ಅಡ್ಡಾಗಳ ಮೇಲೆ ಪೊಲೀಸ್‌ ದಾಳಿ: ಪ್ರಕರಣ ದಾಖಲು

Date:

Advertisements

ಮಣಿಪಾಲ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿದ್ದು, ಹಲವು ಕಡೆ ಹೋಟೆಲ್‌, ರೆಸ್ಟೋರೆಂಟ್‌ ಹಾಗೂ ಕಾನೂನುಬಾಹಿರವಾಗಿ ಕಾರ್ಯಾಚರಿಸುತ್ತಿರುವ ರಸ್ತೆ ಬದಿಯ ಅಡ್ಡಾಗಳ ಮೇಲೆ ದಾಳಿ ನಡೆಸಿದ್ದಾರೆ.

ಉಡುಪಿ ಜಿಲ್ಲೆಯ ಮಣಿಪಾಲ ನಗರದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ತಡರಾತ್ರಿ ಅನುಮಾನಾಸ್ಪದ ಹೋಟೆಲ್‌ಗಳ ಮೇಲೆ ದಾಳಿ ಮಾಡಿದ್ದಾರೆ. ಅನಧಿಕೃತ ರೀತಿಯಲ್ಲಿ ಅವಧಿ ಮೀರಿ ಹೋಟೆಲ್ ನಡೆಸುತ್ತಿದ್ದವರ ಮೇಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಬಹುತೇಕ ವಿದ್ಯಾರ್ಥಿಗಳು, ಅಪ್ರಾಪ್ತ ವಯಸ್ಕರು ಮದ್ಯ ಸೇವನೆಯಲ್ಲಿ ತೊಡಗಿದ್ದುದು ಕಂಡುಬಂದಿದೆ.

ವಿದ್ಯಾರ್ಥಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಗಾಂಜಾ ಮತ್ತಿತರ ಡ್ರಗ್ಸ್‌ ಅಂಶಗಳಿಗಾಗಿ ಶೋಧಿಸಲಾಗುತ್ತಿದೆ. ಇಲ್ಲಿನ ಹೋಟೆಲ್‌ಗಳ ಚಟುವಟಿಕೆಗಳ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಅಲ್ಲದೆ ಸಾರ್ವಜನಿಕರಿಂದಲೂ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮಣಿಪಾಲ ಠಾಣಾಧಿಕಾರಿ ದೇವರಾಜ್ ನೇತೃತ್ವದಲ್ಲಿ ತಂಡದಿಂದ ರಾತ್ರಿ ಕಾರ್ಯಾಚರಣೆ ನಡೆದಿದೆ ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಬೆಂಕಿ ಅವಘಡ | ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರ

ಶನಿವಾರ ತಡರಾತ್ರಿ ನಾಕಾಬಂದಿ, ಚೆಕ್‌ಪೋಸ್ಟ್ ಹಾಕಿ ವಾಹನ ತಪಾಸಣೆ ನಡೆಸಲಾಗಿದೆ. ಗುಣಮಟ್ಟದ ಶಿಕ್ಷಣ ಪಡೆಯುವ ಉದ್ದೇಶದಿಂದ ಮಣಿಪಾಲಕ್ಕೆ ದೇಶದ ನಾನಾ ಕಡೆಗಳಿಂದ ಹಾಗೂ ವಿದೇಶದಿಂದ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಆದರೆ ಕಳೆದ ಹಲವು ವರ್ಷಗಳಿಂದ ಇಲ್ಲಿನ ಹಲವು ವಿದ್ಯಾರ್ಥಿಗಳು ಗಾಂಜಾ ಮತ್ತು ಡ್ರಗ್ಸ್ ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X