ಉಡುಪಿ | ಅಕ್ರಮವಾಗಿ ನೆಲೆಸಿದ್ದ ಏಳು ಮಂದಿ ಬಾಂಗ್ಲಾದೇಶಿಯರು ಪೊಲೀಸರ ವಶಕ್ಕೆ

Date:

Advertisements

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಸಿಕೊಂಡು ಬಂದು, ಕಾರ್ಮಿಕರಾಗಿ ದುಡಿಯುತ್ತಿದ್ದ ಏಳು ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಡುಪಿಯ ಮಲ್ಪೆ ವಡಬಾಂಡೇಶ್ವರ ಬಸ್‌ ನಿಲ್ದಾಣ ಬಳಿ ನಡೆದಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದನು.

ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆಯ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.

Advertisements
ಉಡುಪಿ

ಹಕೀಂ ಅಲಿ, ಸುಜೋನ್, ಇಸ್ಮಾಯೀಲ್, ಕರೀಂ, ಸಲಾಂ, ರಾಜಿಕುಲ್‌, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಇಲ್ಲಿ ತಂಗಿದ್ದರು ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ವಿಶೇಷ | ಉದಯನಿಧಿ-ಪವನ್ ಕಲ್ಯಾಣ್: ಇಬ್ಬರಿಗೂ ‘ಸನಾತನ’ವೇ ಸರಕು

ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿರುವುದಾಗಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X