ಉಡುಪಿ | ಕಳಪೆ ಮಟ್ಟದ ಕಾಮಗಾರಿ; ಸಾರ್ವಜನಿಕರ ಆಕ್ರೋಶ

Date:

Advertisements

ಉಡುಪಿಯಲ್ಲಿ ಜ.17ರಂದು ನಡೆದ ಪುತ್ತಿಗೆ ಶ್ರೀಗಳ ಪರ್ಯಾಯಯೋತ್ಸವ ಕಾರ್ಯಕ್ರಮಕ್ಕಾಗಿ ನಗರದಲ್ಲಿ ಹದಗೆಟ್ಟ ರಸ್ತೆಗಳಿಗೆ ಡಾಂಬರೀಕರಣ, ರಸ್ತೆ ಗುಂಡಿಗಳಿಗೆ ತೇಪೆ, ಚರಂಡಿ ನಿರ್ಮಾಣ ಕಾಮಗಾರಿಗಳು ನಡೆದಿದ್ದವು. ಅದರೆ, ಕಾಮಗಾರಿಗಳು ಕಳಪೆ ಗುಣಮಟ್ಟ ಮತ್ತು ಅವೈಜ್ಞಾನಿಕವಾಗಿ ನಡೆದಿವೆ ಎಂಧು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮ್ಮುಂಜೆ ಪೆಟ್ರೋಲ್ ಬಂಕ್ ಬಳಿ ಚರಂಡಿ ಕಾಮಗಾರಿ ನಡೆದಿದ್ದು, ಜಲ್ಲಿಗೆ ತಕ್ಕಷ್ಟು ಸಿಮೆಂಟ್‌ ಹಾಕಿಲ್ಲ. ಹೊಸ ಚರಂಡಿ ನಿರ್ಮಾಣ ಮಾಡಿದ ಸ್ಥಳಗಳಲ್ಲಿ ನೀರಿನ ಹರಿಯುತ್ತಿಲ್ಲ. ಇದೊಂದು ವ್ಯರ್ಥ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಜ್ಜರಕಾಡಿನಿಂದ ಬ್ರಹ್ಮಗಿರಿವರೆಗೆ ರಸ್ತೆ ವಿಭಾಜಕಕ್ಕೆ ಬಣ್ಣ ಬಳಿಯುವ ಕಾಮಗಾರಿಯು ನಡೆಯುತ್ತಿದೆ. ದೀರ್ಘ ಸಮಯ ಬಣ್ಣ ಬಾಳಿಕೆ ಬರಬೇಕೆಂದರೆ ವೈಜ್ಞಾನಿಕವಾಗಿ ಎರಡು ಹಂತದಲ್ಲಿ ಬಣ್ಣ ಬಳಿಯಬೇಕು. ಆದರೆ, ಇಲ್ಲಿ ಒಂದೇ ಹಂತದಲ್ಲಿ ಬಣ್ಣ ಬಳಿಯಲಾಗಿದೆ ಎಂದು ಆರೋಪಿಸಲಾಗಿದೆ.

Advertisements

ಕಳಪೆ ಕಾಮಗಾರಿ ಬಗ್ಗೆ ಉಡುಪಿ ನಗರ ಸಭೆ ಮಾಜಿ ಸದಸ್ಯ ನಿತ್ಯಾನಂದ ಆಕ್ರೋಶ ವ್ಯಕ್ತಪಡಿಸಿದ್ದು, “ನಗರಸಭೆಯು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ರಸ್ತೆಗೆ ಡಾಂಬರೀಕರಣ, ಚರಂಡಿ ವ್ಯವಸ್ಥೆ ಮಾಡುತ್ತಿದೆ. ಆದರೆ, ಕಾಮಗಾರಿ ಕಳಪೆ ಗುಣಮಟ್ಟದಲ್ಲಿ ನಡೆದಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಶಿಸಬೇಕು. ಮಾರುಥಿ ಮೀತಿಯಾ ರಸ್ತೆ, ಕಾಡುಬೆಟ್ಟು ರಸ್ತೆ ಸೇರಿದಂತೆ ನಗರದ ಅನೇಕ ಕಡೆಗಳಲ್ಲಿ ಕಳಪೆ ಗುಣಮಟ್ಟದ ಮತ್ತು ಅವೈಜ್ಞಾನಿಕವಾಗಿ ಕಾಮಗಾರಿಗಳು ನಡೆಯುತ್ತಿವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X