ಉಡುಪಿ | ಮಲಗಿದ್ದ ಸ್ನೇಹಿತನನ್ನೆ ಕೊ*ದ ದುಷ್ಕರ್ಮಿಗಳು !

Date:

Advertisements

ತಲವಾರು ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಹೆಂಡತಿ ಮಗುವಿನ ಜೊತೆಗೆ ಮಲಗಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉಡುಪಿಯ ಪುತ್ತೂರು ಬಳಿ ನಡೆದಿದೆ. ಮೃತನಾದ ವ್ಯಕ್ತಿಯನ್ನು ವಿನಯ್ ದೇವಾಡಿಗ (35) ಎಂದು ಗುರುತಿಸಲಾಗಿದೆ.

ಉಡುಪಿ ಪುತ್ತೂರಿನ ಮನೆಯಲ್ಲಿ ಹೆಂಡತಿ ಮಗುವಿನೊಂದಿಗೆ ರಾತ್ರಿ ಸುಮಾರು ಹನ್ನೊಂದು ಘಂಟೆ ಸುಮಾರಿಗೆ ಮಲಗಿದ್ದ ಸಂದರ್ಭ ಮನೆಗೆ ಬಂದ ದುಷ್ಕರ್ಮಿಗಳು ಮನೆ ಬಾಗಿಲು ಬಡಿದು ವಿನಯ್ ಇದ್ದಾನ ಎಂದು ಕೇಳಿದ್ದಾರೆ, ಸ್ನೇಹಿತರಿರಬಹುದು ಎಂದು ಮನೆಯವರು ಬಾಗಿಲು ತೆರದಾಗ, ಮೂವರು ದುಷ್ಕರ್ಮಿಗಳು ನೇರವಾಗಿ ವಿನಯ್ ಮಲಗಿದ್ದ ಕೋಣೆಗ ತೆರಳಿ ತಾವು ತಂದಿದ್ದ ತಲವಾರನ್ನು ಬೀಸಿ ಹತ್ಯೆ ಮಾಡಿದ್ದಾರೆ.

1006667433

ಮೂವರು ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ಮನೆಯವು ಹೌಹಾರಿದ್ದಾರೆ. ತಡೆಯಲು ಹೋದ ಪತ್ನಿಗೂ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisements

ಬ್ರಹ್ಮಾವರ ಕೊಕ್ಕರ್ಣೆಯ ಗಾಂಧಿನಗರ ನಿವಾಸಿಗಳಾದ ಅಜಿತ್(28), ಅಕ್ಷೇಂದ್ರ (34) ಹಾಗೂ ಕೊಕ್ಕರ್ಣೆ ಬೆನಗಲ್ ನಿವಾಸಿ ಪ್ರದೀಪ್ ಆಚಾರ್ಯ ಎಂಬವರು ಕೊಲೆ ಆರೋಪಿಗಳಾಗಿದ್ದು ಇವರನ್ನು ಪೊಲೀಸರು ಬಂಧಿಸಿದ್ದಾರೆ.

1006667249

ವಿನಯ್, ಆರೋಪಿ ಆಕ್ಷೇಂದ್ರನಿಗೆ ಜೀವನ್ ಎಂಬಾತನು ಬೈದಿರುವ ಆಡಿಯೋವನ್ನು ಬೇರೆಯವರಿಗೆ ಶೇರ್ ಮಾಡಿ ವೈರಲ್ ಮಾಡಿದ್ದ ಎಂಬ ಕಾರಣಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ

ರಾತ್ರಿ ಮೂವರು ಆರೋಪಿಗಳು ಮನೆಯ ಒಳಗೆ ನುಗ್ಗಿ ಮಚ್ಚು ಹಾಗೂ ಚಾಕುವಿನಿಂದ ವಿನಯ್ ದೇವಾಡಿಗ ರವರ ತಲೆಯನ್ನು ಕಡಿದು, ಕೊಲೆ ಮಾಡಿದ್ದಾರೆಂದು ದರ. ಬಳಿಕ ಆರೋಪಿಗಳು ಸ್ಕೂಟರ್ ನಲ್ಲಿ ಪರಾರಿಯಾದರೂ ಎಂದು ತಿಳಿದುಬಂದಿದೆ ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

1006667246

ಕೊಲೆಯಾದ ವ್ಯಕ್ತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಕ್ಕಳನ್ನು ಡ್ರಗ್ಸ್‌ ದಾಸರನ್ನಾಗಿ ಮಾಡಿ ಭಾರತವನ್ನು ಮುಳುಗಿಸುವಲ್ಲಿ ದೊಡ್ಡ ದೊಡ್ಡ ದೇಶಗಳ ಕೈವಾಡವಿದೆ: ಎಚ್‌ ಎಂ ವಿಶ್ವನಾಥ್

ದೊಡ್ಡ ದೊಡ್ಡ ದೇಶಗಳು ನಮ್ಮ ದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಡ್ರಗ್ಸ್‌ನಲ್ಲಿ ಮುಳುಗಿಸುತ್ತಿದ್ದಾರೆ....

ಹಾವೇರಿ | ಮಾದಕ ವಸ್ತು ಮಾರಾಟ; ನಾಲ್ವರು ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ನಾಲ್ವರನ್ನು ಪೊಲೀಸರು ಬಂಧಿಸಿದ ಘಟನೆ ಹಾವೇರಿ...

ಶಿವಮೊಗ್ಗ | ಕಾಂಗ್ರೆಸ್ ಕಚೇರಿಯಲ್ಲಿ ಅರಸು ಮತ್ತು ರಾಜೀವ್‍ಗಾಂಧಿಯವರ ಜನ್ಮದಿನಾಚರಣೆ

ಶಿವಮೊಗ್ಗ, ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಹಿಂದುಳಿದ ವರ್ಗಗಳ ನಾಯಕ ಹಾಗೂ...

ಶಿವಮೊಗ್ಗ | ಆರು ಜಿಲ್ಲೆಯ ಮುಖಂಡರಿಂದ ಅಹಿಂದ ಸಮಾವೇಶದ ಪೂರ್ವಭಾವಿ ಸಭೆ : ತೀ.ನ. ಶ್ರೀನಿವಾಸ್

ಶಿವಮೊಗ್ಗ, ಮಲೆನಾಡು ರೈತರ ಸಮಸ್ಯೆ ಹಾಗೂ ಕಾಂತ್‌ರಾಜ್ ವರದಿಯ ಜಾರಿಗೆ ಆಗ್ರಹಿಸಿ...

Download Eedina App Android / iOS

X