ಉಡುಪಿ‌ | ಸರ್ವರ್ ಸಮಸ್ಯೆ: ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆಗೆ ಸೂಚನೆ

Date:

Advertisements

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ವಿತರಣೆ ಮಾಡುವ ಪಡಿತರ ಪಡೆದುಕೊಳ್ಳಲು ಸರ್ವ‌ರ್ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುವಂತಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಪ್ ಸೇಲ್ (ಇ-ಪಿಒಎಸ್) ಯಂತ್ರಗಳ ಕಾರ್ಯಾಚರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆನ್‌ಲೈನ್ ವ್ಯವಸ್ಥೆಗೆ ಇಲಾಖೆ ನೂತನ ಸರ್ವರ್ ಅಳವಡಿಸಿದೆ. ಅದರ ದೋಷದಿಂದಾಗಿ ರಾಜ್ಯಾದ್ಯಂತ ಸಾರ್ವಜನಿಕರ ಪಡಿತರ ವಿತರಣೆ ವ್ಯವಸ್ಥೆ ನಿಧಾನಗತಿಯಲ್ಲಿ ಸಾಗುತ್ತಿದೆ.

ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಮುಂಚಿನ ವ್ಯವಸ್ಥೆಯಂತೆ ಪಡಿತರ ವಿತರಣೆಗೆ ಬಯೋಮೆಟ್ರಿಕ್ ಹಾಗೂ ಮೊಬೈಲ್ ಒಟಿಪಿ ಮೂಲಕ ಗ್ರಾಹಕರಿಗೆ ಪಡಿತರ ವಿತರಣೆ ಆಗುತ್ತಿತ್ತು. ಇದೀಗ ಮೊಬೈಲ್ ಒಟಿಪಿ ಸಂಪೂರ್ಣ ಬಂದ್ ಆಗಿದೆ. ಬಯೋಮೆಟ್ರಿಕ್ ಕಾರ್ಯ ಎನ್‌ಐಸಿಯಿಂದ ನಿರ್ವಹಿಸಲಾಗುತ್ತಿತ್ತು. ಇದೀಗ ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್‌ಗೆ ನೂತನ ಸರ್ವ‌ರ್ ಅಳವಡಿಸಿದ್ದೇ ಇಷ್ಟೆಲ್ಲ ಸಮಸ್ಯೆಗೆ ಕಾರಣ ಎನ್ನಲಾಗಿದೆ.

Advertisements

ಈ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿದ ಹೇರೂರು ಗ್ರಾಮದ ಸುದರ್ಶನ್, “ಪ್ರತಿಬಾರಿಯೂ ಈ ಸಮಸ್ಯೆ ತಪ್ಪಿದ್ದಲ್ಲ ಎಲ್ಲಾ ಕೆಲಸ ಕಾರ್ಯ ಬಿಟ್ಟು ಗಂಟೆಗಟ್ಟಲೆ ಕಾಯಲೇಬೇಕು. ಇದಕ್ಕೆ ಪರ್ಯಾಯ ವ್ಯವಸ್ಥೆ ಕೂಡಲೇ ಮಾಡಿದರೆ ಎಲ್ಲರಿಗೂ ಅನುಕೂಲ” ಎಂದು ಹೇಳಿದರು.

ಈ ತಾಂತ್ರಿಕ ತೊಂದರೆಯನ್ನು ಮನಗಂಡು ಉಡುಪಿ ಜಿಲ್ಲಾಡಳಿತವು ಜಿಲ್ಲೆಯಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಿದೆ. ಈ ಸಂಬಂಧ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಡಿತರ ಚೀಟಿದಾರರಿಂದ ಹಲವು ದೂರುಗಳು ಕೇಳಿ ಬಂದಿರುತ್ತದೆ. ಪ್ರಸ್ತುತ ಹೊಸ ಸರ್ವರ್ ಅಳವಡಿಸಿರುವುದರಿಂದ ಪ್ರಸಕ್ತ ತಿಂಗಳಲ್ಲಿ ತಡವಾಗಿ (ಅಕ್ಟೋಬರ್ 18 ನೇ ತಾರೀಕಿನಿಂದ) ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡುತ್ತಿದೆ.

ಪ್ರಸಕ್ತ ತಿಂಗಳಲ್ಲಿ ಪಡಿತರ ವಿತರಣೆಯು ವಿಳಂಬವಾಗಿ ಪ್ರಾರಂಭವಾಗಿರುವುದರಿಂದ ಆಹಾರ ಇಲಾಖೆಯ ಆಯುಕ್ತರು ಅಕ್ಟೋಬರ್-2024ರ ಮಾಹೆಗೆ ಮಾತ್ರ ಪಡಿತರ ವಿತರಣೆಯನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ರ ವರೆಗೆ ನಿಗದಿಪಡಿಸಿ ಎಂದು ಈಗಾಗಲೇ ಪ್ರಕಟಣೆಯನ್ನು ಸಹ ಹೊರಡಿಸಿದೆ.

ತಾಂತ್ರಿಕ ಸಮಸ್ಯೆಯಿಂದ ಪಡಿತರ ವಿತರಣೆಯು ವಿಳಂಬವಾಗಿರುವುದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಪಡಿತರ ಪಡೆಯಲು ತೊಂದರೆಯಾಗುತ್ತಿರುವುದು ಆಹಾರ ಇಲಾಖೆಯ ಆಯುಕ್ತರ ಗಮನಕ್ಕೆ ತಂದಿದ್ದು, ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಹಾಗೂ ಸಾರ್ವಜನಿಕರು ಈ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ಅಕ್ರಮವಾಗಿ ಮರ ಮಾರಾಟ: ಉಪ ಅರಣ್ಯಾಧಿಕಾರಿ, ಗಸ್ತು ಅರಣ್ಯ ರಕ್ಷಕ ಅಮಾನತು

ಅದರ ಜೊತೆ ಜೊತೆಗೆ ಅನರ್ಹ ಪಡಿತರ ಚೀಟಿದಾರರ ಬಗ್ಗೆ, ಜಿಲ್ಲೆಯ ಎಲ್ಲಾ ತಾಲೂಕಿನ ಆಹಾರ ಶಿರಸ್ತೇದಾರರು ಮತ್ತು ಆಹಾರ ನಿರೀಕ್ಷಕರು ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ಸಾರ್ವಜನಿಕರು ತಾವಾಗಿಯೇ ಬಿ.ಪಿ.ಎಲ್ ಪಡಿತರ ಚೀಟಿ ಪಡೆಯಲು ಅನರ್ಹತೆ ಹೊಂದಿದ್ದಲ್ಲಿ ಸ್ವತಃ/ ತಾವಾಗಿಯೇ ಪಡಿತರ ಚೀಟಿಯನ್ನು ಸೆರೆಂಡರ್ ಮಾಡಬೇಕು. ಈ ಬಗ್ಗೆ ಆಹಾರ ಶಾಖೆಗೆ ಪರಿಶೀಲನೆಗೆ ಒಳಪಡಿಸಲು ತಿಳಿಸಿರುವ ಪಡಿತರ ಚೀಟಿದಾರರಿಗೆ ಅಕ್ಟೋಬರ್ ತಿಂಗಳಲ್ಲಿ ಪಡಿತರವನ್ನು ನೀಡಲು ಈಗಾಗಲೇ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X