ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

Date:

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ.

- Advertisement -

ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ ಕಿನಾರೆಯಲ್ಲಿ ವಿಹರಿಸುತ್ತಿರುವಾಗ ಹೃದಯಾಘಾತದಿಂದ ಮೃತಪಟ್ಟದ್ದರು. ಈ ಹಿನ್ನೆಲೆಯಲ್ಲಿ ಮುರುಡೇಶ್ವರ ಪೊಲೀಸರು ಶವವನ್ನು ಮಣಿಪಾಲದ ಶೀತಲೀಕೃತ ಶವರಕ್ಷಣಾ ಘಟಕದಲ್ಲಿ ರಕ್ಷಿಸಿಟ್ಟಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ರಷ್ಯಾದಲ್ಲಿದ್ದ ಮೃತರ ಕುಟುಂಬದವರಿಗೆ ವಿಷಯ ಮುಟ್ಟಿಸಿದ್ದರು. ಆದರೆ ಮೃತರ ಕುಟುಂಬಸ್ಥರಿಗೆ ಭಾರತಕ್ಕೆ ಬರಲು ಅಸಹಾಯಕತೆ ಎದುರಾಯಿತು. ಹಾಗಾಗಿ ಮೃತರ ಮಗಳು ಪೊಲೀಸ್ ಇಲಾಖೆಯಲ್ಲಿ ದಹನರೂಪದಲ್ಲಿ ಅಂತ್ಯಸಂಸ್ಕಾರ ನಡೆಸುವಂತೆ ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯಿಂದ ಮುರುಡೇಶ್ವರ ಪೋಲಿಸರು, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರ ಸಹಕಾರದಲ್ಲಿ ಉನ್ನತಮಟ್ಟದ ಕಾನೂನು ಪ್ರಕ್ರಿಯೆಗಳು ನಡೆದ ಬಳಿಕ ಅಂತ್ಯಸಂಸ್ಕಾರ ನಡೆಸಿದ್ದಾರೆ.

ಪೋಲಿಸರು ವಿದೇಶಿ ಮೃತರಿಗೆ ಗೌರಯುತ ವಂದನೆ ಸಮರ್ಪಿಸಿದರು. ಮೃತರ ಮನೆ ಮಂದಿ ಅಂತ್ಯಸಂಸ್ಕಾರದ ದೃಶ್ಯಾವಳಿಗಳನ್ನು ವಿಡಿಯೋ ಕರೆಯ ಮೂಲಕ ವಿಕ್ಷಿಸಿಸಲು ವ್ಯವಸ್ಥೆ ಮಾಡಿದ್ದರು. ಗೌರಯುತವಾಗಿ ನಡೆದ ಅಂತ್ಯಸಂಸ್ಕಾರ ಪ್ರಕ್ರಿಯೆಯನ್ನು ವಿಡಿಯೋ ಕರೆಯಲ್ಲಿ ಕಂಡ ಕುಟುಂಬಸ್ಥರು ಕಂಬನಿ ಮಿಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಎಚ್1ಎನ್1 ವೈರಲ್ ನ್ಯುಮೋನಿಯಾ ವಿರುದ್ಧ ಮಣಿಪಾಲ್ ಆಸ್ಪತ್ರೆಯ ಹೋರಾಟ ಯಶಸ್ವಿ

ಈ ಸಂದರ್ಭ ಮುರುಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ್ ಎಸ್ ಆರ್, ಸಿಬ್ಬಂದಿಗಳಾದ ಮುರಳಿ ಎಂ ನಾಯ್ಕ್, ವಿಜಯ ನಾಯ್ಕ್, ಮಂಜು ಮಡಿವಾಳ ಇದ್ದರು.

ವಿಕಾಸ್ ಶೆಟ್ಟಿ, ಫ್ಲವರ್ ವಿಷ್ಣು ಸಹಕರಿಸಿದರು. ಎರಡು ವರ್ಷಗಳ ಹಿಂದೆ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಶ್ರೀಲಂಕಾ ಪ್ರಜೆಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ನಡೆಸಿರುವುದನ್ನು ನೆನಪಿಸಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ; 19 ಮಂದಿ ವಿರುದ್ಧ ಪ್ರಕರಣ ದಾಖಲು

ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ...

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...