ಉಡುಪಿ | ಸೈಫುದ್ದೀನ್ ಕೊಲೆ ಪ್ರಕರಣ, ತಂದೆಯ ಸ್ನೇಹಿತರ ವಿರುದ್ಧವೇ ದೂರ ದಾಖಲಿಸಿದ ಮಗ !

Date:

Advertisements

ಉಡುಪಿ ನಗರದಲ್ಲಿ ಇಂದು ನಡೆದ ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಬಸ್ ವ್ಯವಹಾರ ನಡೆಸುತ್ತಿದ್ದ ಸೈಫುದ್ದೀನ್ ಹತ್ಯೆ ಪ್ರಕರಣದಲ್ಲಿ ಇದೀಗ ಮೃತರ ಮಗ ಪೊಲೀಸರಿಗೆ ದೂರು ನೀಡಿದ್ದಾರೆ.

ಶನಿವಾರ ಬೆಳಗ್ಗೆ ಮಲ್ಪೆ ಕೊಡವೂರು ರಸ್ತೆಯ ನಿವಾಸದಲ್ಲಿ ಸೈಫುದ್ದೀನ್ ಹತ್ಯೆಯಾಗಿತ್ತು. ಮಚ್ಚಿನಿಂದ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಮೂವರು ಈ ಕೃತ್ಯ ನಡೆಸಿದ್ದು, ಸೈಫುದ್ದೀನ್ ಸಂಸ್ಥೆಯ ಬಸ್ ಚಾಲಕರು ಈ ಕೃತ್ಯ ನಡೆಸಿರಬಹುದು ಎಂದು ಜಿಲ್ಲಾ ಎಸ್ ಪಿ ಹರಿರಾಮ್ ಶಂಕರ್ ಹೇಳಿದ್ದರು.

ಈ ಬಗ್ಗೆ ಸೈಫುದ್ದೀನ್ ಪುತ್ರ ದೂರು ನೀಡಿದ್ದು, ಇಬ್ಬರ ಬಗ್ಗೆ ಉಲ್ಲೇಖಿಸಿದ್ದಾರೆ. ಸೈಫುದ್ದೀನ್ ಸ್ನೇಹಿತರಾದ ಉಡುಪಿ ಕುಕ್ಕಿಕಟ್ಟೆಯ ನಿವಾಸಿ ಫೈಜಲ್ ಖಾನ್ ಮನೆಗೆ ಬಂದು ಬಸ್ ವಿಚಾರದ ಬಗ್ಗೆ ಮಾತನಾಡಲು ಕರೆದಿದ್ದ. ಹೀಗಾಗಿ ಫೈಜಲ್ ನ ಕಾರಿನಲ್ಲಿ ಸೈಫುದ್ದೀನ್ ತೆರಳಿದ್ದರು. ಮಣಿಪಾಲದಿಂದ ಕೊಡವೂರಿಗೆ ತೆರಳಿ, ಅಲ್ಲಿ ಫೈಜಲ್ ಖಾನ್ ಮತ್ತು ದೊಡ್ಡಣಗುಡ್ಡೆ ನಿವಾಸಿ ಶರೀಫ್ ಮತ್ತು ಇತರರು ಸೇರಿ ಸೈಫುದ್ದೀನ್ ಮೇಲೆ ಮಚ್ಚಿನಿಂದ ತಲೆಗೆ ಮತ್ತು ಬೆನ್ನಿಗೆ ಕೊಚ್ಚಿ ಕೊಲೆ ಮಾಡಿ, ಕಾರಿನಲ್ಲಿ ಪರಾರಿಯಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X