ಉಡುಪಿ | ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ಲೀಕ್‌: ಮತ್ತೊಬ್ಬ ಆರೋಪಿ ಬಂಧನ

Date:

ಉಡುಪಿ ಕೊಚ್ಚಿನ್‌ ಶಿಪ್ಯಾರ್ಡ್‌ ಮಲ್ಪೆ ಘಟಕದ ಸಬ್‌ಕಂಟ್ರಾಕ್ಟರ್‌ ಸಂಸ್ಥೆಯೊಂದರಲ್ಲಿ ನಡೆದಿರುವ ಗಂಭೀರ ರಾಷ್ಟ್ರ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 128/2025ರಂತೆ, M/S Shushma Marine Private Limited ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಪ್ರದೇಶ ಮೂಲದ ರೋಹಿತ್‌ ಮತ್ತು ಸಂತ್ರಿ ಎಂಬ ಇಬ್ಬರು ಆರೋಪಿಗಳು, ಭಾರತದ ನೌಕಾ ಸೇನೆಗೆ ಸಂಬಂಧಿಸಿದ ಹಡಗುಗಳ ಸಂಖ್ಯೆಗಳ ಗೌಪ್ಯ ಪಟ್ಟಿ ಸೇರಿದಂತೆ ಇತರೆ ಗೌಪ್ಯ ಮಾಹಿತಿಯನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಹಂಚಿಕೊಂಡು ಅಕ್ರಮ ಲಾಭ ಪಡೆದಿರುವ ಆರೋಪದಡಿ ಕಲಂ 152 BNS ಹಾಗೂ OFFICIAL SECRETS ACT, 1923ರ ಕಲಂ 3 ಮತ್ತು 5ರಂತೆ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಈ ಪ್ರಕರಣದ ತನಿಖೆಯನ್ನು ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷಕಿ ಹರ್ಷ ಪ್ರಿಯಂವದಾ ಐಪಿಎಸ್‌ ಅವರ ನೇತೃತ್ವದ ವಿಶೇಷ ತಂಡ ಕೈಗೆತ್ತಿಕೊಂಡಿದ್ದು, ಮುಖ್ಯ ಆರೋಪಿಗಳಾದ ರೋಹಿತ್‌ ಮತ್ತು ಸಂತ್ರಿಯನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತನಿಖೆಯನ್ನು ಇನ್ನಷ್ಟು ವಿಸ್ತರಿಸಿದ ಪೊಲೀಸ್‌ ತಂಡ, ಆರೋಪಿಗಳು ಬಳಸುತ್ತಿದ್ದ ಮೊಬೈಲ್‌ ಸಿಮ್‌ ಕಾರ್ಡ್‌ ಮೂಲದ ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ, ಹಣಕ್ಕಾಗಿ ತನ್ನ ಹೆಸರಿನಲ್ಲಿ ಸಿಮ್‌ ತೆಗೆದು ಆರೋಪಿಗಳಿಗೆ ನೀಡಿದ್ದ ಆರೋಪದಡಿ ಗುಜರಾತ್‌ ರಾಜ್ಯದ ಆನಂದ ತಾಲೂಕಿನ ಕೈಲಾಸ್‌ ನಗರಿ, ನಿವಾಸಿ ಹೀರೇಂದ್ರ ಕುಮಾರ್‌ ಭರತ್‌ ಕುಮಾರ್‌ ಖಡಯಾತ್‌ (34) ಎಂಬುವವನನ್ನು ಡಿಸೆಂಬರ್‌ 21ರಂದು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...