ಉಡುಪಿ | ಹಾಸ್ಟೆಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ; ತನಿಖೆಗೆ ಪೋಷಕರ ಒತ್ತಾಯ

Date:

ಕುಂದಾಪುರ ಗುರುಕುಲ ಶಾಲೆಯ ವಿದ್ಯಾರ್ಥಿನಿ ಕಾರವಾರ ಸಮೀಪದ ಕಾಜೂಬಾಗ್‌ನ ತನ್ವಿ ಪಾಲೇಕರ್(14) ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ವಿದ್ಯಾರ್ಥಿನಿಯ ತಂದೆ ರೋಶನ್ ನಾರಾಯಣ ಪಾಲೇಕರ್ ಆಗ್ರಹಿಸಿದ್ದಾರೆ.

- Advertisement -

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂಬತ್ತನೇ ತರಗತಿಯಲ್ಲಿ ಕಲಿಯುತ್ತಿರುವ ನನ್ನ ಮಗಳು, ಶಾಲೆಯ ಹಾಸ್ಟೆಲ್‌ನಲ್ಲಿಯೇ ಉಳಿದುಕೊಂಡಿದ್ದಳು. ಜೂ.5ರಂದು ಬೆಳಗಿನ ಜಾವ ಆಕೆ ಹಾಸ್ಟೆಲ್ ಕಟ್ಟಡದ ಎರಡನೇ ಮಹಡಿಯಿಂದ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ಶಾಲೆಯವರು ತಿಳಿಸಿದ್ದರು. ಆದರೆ ನಮಗೆ ಈ ಸಾವಿನ ಬಗ್ಗೆ ಸಂಶಯ ಇದೆ. ಅದರಂತೆ ಕುಂದಾಪುರ ಠಾಣೆಯಲ್ಲಿ ಸಂಶಯಾಸ್ಪದ ಸಾವು ಎಂಬುದಾಗಿ ದೂರು ದಾಖಲಿಸಿದ್ದೇವೆ. ಈ ಕುರಿತು ಪೊಲೀಸರು ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಆಕೆ ಕಟ್ಟಡದ ಮೇಲಿನಿಂದ ಕಾಲು ಜಾರಿ ಬೀಳಲು ಅಥವಾ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. 4.4 ಅಡಿ ಎತ್ತರ ಇರುವ ಆಕೆ ನೆಲದಿಂದ ಏಳು ಅಡಿ ಎತ್ತರದಲ್ಲಿರುವ ಜಾಗದಿಂದ ಹೇಗೆ ಕೆಳಗೆ ಬೀಳಲು ಸಾಧ್ಯ? ಎಂದು ಪ್ರಶ್ನಿಸಿದ ಅವರು, ಆಕೆ ಮನೆಯಿಂದ ತುಂಬಾ ಖುಷಿಯಾಗಿಯೇ ಬಂದಿದ್ದಾಳೆ. ಕಲಿಯುವುದರಲ್ಲಿ ಪ್ರತಿಭಾನ್ವಿತೆ ಹಾಗೂ ಧೈರ್ಯವಂತೆ ಆಗಿದ್ದ ತನ್ವಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವಳು ಅಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಾಂತಿ-ಭೇದಿ ಪ್ರಕರಣ ಹೆಚ್ಚಳ; ಗಾರವಾಳ ಗ್ರಾಮದಲ್ಲಿ ತೆರೆದ ತಾತ್ಕಾಲಿಕ ಆರೋಗ್ಯ ಕೇಂದ್ರ

ಘಟನೆ ಹಿನ್ನೆಲೆ

ಉಡುಪಿ ಜಿಲ್ಲೆಯ ಕುಂದಾಪುರದ ಗುರುಕುಲ ಶಾಲೆಯ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದ ಘಟನೆ ಜೂನ್‌ 7ರಂದು ನಡೆದಿತ್ತು.

ಕಾರವಾರದ ರಂಜನ ಪಾಲೇಕರ್ ಎಂಬವರ ಪುತ್ರಿ ತನ್ವಿ(14) ಮೃತ ವಿದ್ಯಾರ್ಥಿನಿ. ತನ್ವಿ ವಕ್ವಾಡಿ ಗ್ರಾಮದ ಗುರುಕುಲ ವಸತಿಶಾಲೆಯ ವಿದ್ಯಾರ್ಥಿನಿಯಾಗಿದ್ದು, ಹಾಸ್ಟೆಲ್ ಕಟ್ಟಡದ 2ನೇ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾಳೆಂದು ತಿಳಿದುಬಂದಿತ್ತು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿನಿಯ ತಾಯಿ ರಂಜನ ಆರ್ ಪಾಲೇಕರ್, ರಾಘುನಾಕ್, ಜ್ಯೋತಿ, ಈಶ್ವರನಾಕ್, ದತ್ತರಾಮ ನಾಕ್, ಪ್ರಕಾಶ್ ಕಾಮತ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...