ಉಡುಪಿ | ಬೆಲೆ ಏರಿಕೆ: ಜನತೆಯ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ಬಿಜೆಪಿ ನಾಯಕರು ನಿಯಂತ್ರಿಸುವಂತೆ ಪ್ರತಿಭಟಿಸಲಿ – ಸುರೇಶ್ ಶೆಟ್ಟಿ

Date:

Advertisements

ರಾಜ್ಯದ ಬಿಜೆಪಿ ನಾಯಕರುಗಳು ಅನಗತ್ಯವಾಗಿ ಜನಸಾಮಾನ್ಯರನ್ನು ಮೋಸಗೊಳಿಸುತ್ತಿರುವುದು ಖಂಡನೀಯ. ಬಿಜೆಪಿ ನಾಯಕರುಗಳಿಗೆ ಏನಾದರೂ ಧಮ್ ಇದ್ದರೆ ಪ್ರಪಂಚದಲ್ಲಿ ಬೆಲೆ ಏರಿಕೆ ಪ್ರಧಾನಿಯೆಂದೆ ಹೆಸರುಗಳಿಸಿದ ನರೇಂದ್ರ ಮೋದಿಯವರ ವಿರುದ್ಧ ಪ್ರತಿಭಟಿಸಲಿ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಉಡುಪಿ ನಗರಸಭಾ ಸದಸ್ಯರಾದ ಸುರೇಶ್ ಶೆಟ್ಟಿ ಬನ್ನಂಜೆ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, ಅಡುಗೆ ಅನಿಲದ ಬೆಲೆ, ಪೆಟ್ರೋಲ್ ಬೆಲೆ, ಡೀಸೆಲ್ ಬೆಲೆ ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಪೂರ್ಣ ಇಳಿಕೆಯಾಗಿದ್ದು ಬಿಜೆಪಿಯ ಮೋದಿಯ ಆಡಳಿತದಲ್ಲಿ ಯಾವುದೇ ಬೆಲೆಯನ್ನು ಇಳಿಕೆ ಮಾಡದೆ ದುಪ್ಪಟ್ಟು ಜಾಸ್ತಿ ಮಾಡಿ ನಮ್ಮ ದೇಶದ ಹಾಗೂ ನಮ್ಮ ರಾಜ್ಯದ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಕೊಡುಗೆಯನ್ನು ನಿರಂತರವಾಗಿ ನೀಡುತ್ತಿದ್ದು, ಬಡವರು ಮಧ್ಯಮ ವರ್ಗದವರು ರೈತರು ಕಾರ್ಮಿಕರು ದೇಶದಲ್ಲಿ ದಿನ ಕಳೆಯುವುದೇ ಕಷ್ಟವಾಗಿದೆ. ಇಂತಹ ಕೆಟ್ಟ ಆಡಳಿತ ನಡೆಸುತ್ತಿರುವ ಈ ಬಿಜೆಪಿ ನಾಯಕರ ವಿರುದ್ಧವೇ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯಕ್ಕೆ ಲಕ್ಷಾಂತರ ಕೋಟಿ ರೂಪಾಯಿ ಜಿಎಸ್‌ಟಿ ಹಣವನ್ನು ನೀಡದೆ, ರಾಜ್ಯದ ಜನರಿಗೆ ಅನ್ಯಾಯ, ದ್ರೋಹ ಮಾಡಿದ ಕೇಂದ್ರದ ಬಿಜೆಪಿ ನಾಯಕರ ವಿರುದ್ಧ ರಾಜ್ಯದ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಲಿ. ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡದಂತೆ ಮಾಡಲು ಕೇಂದ್ರ ಹಾಗೂ ರಾಜ್ಯದ ಬಿಜೆಪಿಯ ನಾಯಕರು ಮುಂದಾಗಿದ್ದು, ಕಾಂಗ್ರೆಸ್ ಸರಕಾರದ ವಿರುದ್ಧ ಅನಗತ್ಯ ಪ್ರತಿಭಟನೆಯನ್ನು ಈ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇಲ್ಲಿಯ ಬಿಜೆಪಿ ನಾಯಕರುಗಳಿಗೆ ರಾಜ್ಯದ ಜನತೆಯ ಬಗ್ಗೆ ಏನಾದರೂ ಕಾಳಜಿ ಇದ್ದರೆ ಕೇಂದ್ರದ ಬಿಜೆಪಿ ನಾಯಕರ ಬಳಿಗೆ ತೆರಳಿ ಬೆಲೆ ಏರಿಕೆಯನ್ನು ನಿಯಂತ್ರಿಸುವಂತೆ ಪ್ರತಿಭಟಿಸಲಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X