ಉಡುಪಿ | ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆ ರಕ್ಷಣೆ

Date:

Advertisements

ಸಮಾಜಸೇವಕ ನಿತ್ಯಾನಂದ ಒಳಕಾಡುರವರು ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿದ್ದು, ಮಹಿಳೆಗೆ ಮಾನಸಿಕ ಖಿನ್ನತೆ, ಅನಾರೋಗ್ಯದ ಲಕ್ಷಣಗಳು ಕಂಡುಬಂದಿರುವುದರಿಂದ ಒಳಕಾಡು ಅವರೇ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.

ರಕ್ಷಿಸಲ್ಪಟ್ಟ ಮಹಿಳೆಯ ಹೆಸರು‌ ಸುಕನ್ಯಾ(40). ಪತಿ ಡಾ. ಹೇಮಂತ್ ರಾಜ್ ದೆಹಲಿ ಎಂದು ಕನ್ನಡದಲ್ಲಿ ಅಸ್ಪಷ್ಟ ಮಾಹಿತಿ ನೀಡಿದ್ದಾರೆ.

ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಹಿಳೆಯು ಅಸಹಾಯಕ ಸ್ಥಿತಿಯಲ್ಲಿರುವುದನ್ನು ತಿಳಿದ ರೈಲ್ವೆ ಆರ್‌ಪಿಎಫ್ ಜೀನಾ ಪಿಂಟೋ ಅವರು, ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ಆಸ್ಪತ್ರೆಗೆ ದಾಖಲು ಪ್ರಕ್ರಿಯೆ ನಡೆಸುವಾಗ ಮಣಿಪಾಲ ಪೊಲೀಸ್ ಠಾಣೆಯ‌ ಮಹಿಳಾ ಸಿಬ್ಬಂದಿಗಳಾದ ಸುಮಲತಾ, ವಿದ್ಯಾ ಟಿ ನೆರವಾದರು.

Advertisements

ಈ ಸುದ್ದಿ ಓದಿದ್ದೀರಾ? ದಾವಣಗೆರೆ ವಿವಿ ಘಟಿಕೋತ್ಸವ; ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗೆ ಗೌರವ ಡಾಕ್ಟರೇಟ್

ಸಂತ್ರಸ್ತ ಮಹಿಳೆಯ ಸಂಬಂಧಿಕರು ಉಡುಪಿ ಜಿಲ್ಲಾ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.‌

ಈಗಾಗಲೇ ಈ ಕರಾವಳಿ ಭಾಗದಲ್ಲಿ ಹಲವು ಅಪರಿಚಿತ ಶವ ಪತ್ತೆ ಪ್ರಕರಣಗಳು, ಅಪರಿಚಿತ ವ್ಯಕ್ತಿಗಳ ರಕ್ಷಣೆಯಂತಹ ಪ್ರಕರಣಗಳನ್ನು ಆಗಾಗ ಕಾಣುತ್ತಲೇ ಇರುತ್ತೇವೆ. ಆದರೆ ಸತ್ತಂತಹ ಅಪರಿಚಿತ ವ್ಯಕ್ತಿಗಳ ತನಿಖೆಯಾಗಿದೆಯೇ, ವಾರಸುದಾರರು ಪತ್ತೆಯಾಗಿದ್ದಾರೆಯೇ, ಅಥವಾ ಯಾವ ಕಾರಣಗಳಿಂದಾಗಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗಳು ಪ್ರಶ್ನೆಗಳಾಗಿವೇ ಉಳಿದಿವೆ. ಸ್ಥಳೀಯ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಇಂತಹ ಪ್ರಕರಣಗಳನ್ನು ತನಿಖೆ ಮಾಡಿ, ಉತ್ತರ ನೀಡಲು ಮುಂದಾಗಬೇಕು. ಜತೆಗೆ ಮೃತಪಟ್ಟವರ ಹಿನ್ನೆಲೆ ತಿಳಿದು ಅವರು ಹೊರಗಿನಿಂದ ಬರುವ ಕಾರ್ಮಿಕರು ಎಂದಾದರೆ, ನಿರ್ಗತಿಕ ಕೇಂದ್ರಗಳ ಕುರಿತು ಮಾಹಿತಿ ನೀಡಿ ಅಂತಹವರಿಗೆ ಅಲ್ಲಿ ವ್ಯವಸ್ಥೆ ಮಾಡಬಹುದೇ ಎಂಬುದನ್ನು ಕಂಡುಕೊಳ್ಳುವುದು ಒಳಿತಾಗಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X